Home Latest News ಮನೆಯ ಮುಂದೆ ಭಯಂಕರ ಮಾಟ : ವಾಮಾಚಾರಕ್ಕೆ ಬೆಚ್ಚಿಬಿದ್ದ ಜನ
Latest News

ಮನೆಯ ಮುಂದೆ ಭಯಂಕರ ಮಾಟ : ವಾಮಾಚಾರಕ್ಕೆ ಬೆಚ್ಚಿಬಿದ್ದ ಜನ

Share
Share

ಚಿಕ್ಕಮಗಳೂರು :  ಬೆಳ್ಳಂಬೆಳಗ್ಗೆ ವಾಮಾಚಾರಕ್ಕೆ ಮೂಡಿಗೆರೆಯ ಹೆಡದಾಳು ಗ್ರಾಮದ ಜನರು ಬೆಚ್ಚಿಬಿದ್ದಿದ್ದಾರೆ. ಮೂರು ದಾರಿ ಕೂಡಿರುವ ಸ್ಥಳದಲ್ಲಿ ಕಿಡಿಗೇಡಿಗಳ ಇಂದು ಬೆಳಗಿನ ಜಾವ ವಾಮಾಚಾರ ನಡೆಸಿದ್ದಾರೆ. ಹಸಿರು ಬಳೆಗಳ ಮೇಲೆ ಮಣ್ಣಿನ ಬೊಂಬೆ ಇಟ್ಟು ವಾಮಾಚಾರ ಮಾಡಲಾಗಿದೆ.

ಮಡಿಕೆಗೆ ಮನುಷ್ಯನ ರೂಪ ನೀಡಿ ಭಯಂಕರ ವಾಮಾಚಾರ ಮಾಡಿ ಹೋಗಿದ್ದಾರೆ ಸಾಮಾನ್ಯವಾಗಿ
ವಾಮಾಚಾರ ಮಾಡೋರು ಪ್ರಾಣಿ ಬಲಿ ಕೊಟ್ಟು ವಾಮಾಚಾರ ಮಾಡೋದು ಹೆಚ್ಚು ಆದರೆ ಬಾಳೆ ಎಲೆ, ಹಸಿರು ಬಳೆ, ಮಡಿಕೆಗೆ ಕಾಳಿಯ ರೂಪ ನೀಡಿ ಮಾಟ ಮಾಡಿದ್ದಾರೆ. ಮೂಡಿಗೆರೆ ತಾಲೂಕಿನ ಹೆಡದಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಡದಾಳು ಗ್ರಾಮದ ಚೇತನ್ ಎಂಬುವವರ ಮನೆಯ ಮುಂದೆಯೇ ಈ ವಾಮಾಚಾರ ಮಾಡಲಾಗಿದೆ. ಬೆಳಗಿನ ಜಾವ 4-5 ಗಂಟೆಗೆ ಐವರು ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ವಾಮಾಚಾರ ಮಾಡುವುದನ್ನ ಮನೆಯೊಳಗಿಂದ ಹಳ್ಳಿಗರು ಕಣ್ಣಾರೆ ನೋಡಿದ್ದಾರೆ.
ಆದರೆ ಮನೆಯಿಂದ ಹೊರಬರಲು ಭಯಗೊಂಡು ಯಾರೂ ಕೂಡಾ ಹೊರಬಂದಿಲ್ಲ, ಮಾಟ ಮಾಡಿದ ಸ್ಥಳದಲ್ಲಿ ಅರಿಶಿನ-ಕುಂಕುಮ, ಕಾಯಿ, ಹಣ್ಣು ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಸದ್ಯ ಗ್ರಾಮದ ತುಂಬೆಲ್ಲ ಇದೇ ಚರ್ಚೆ ನಡೆಯುತ್ತಿದ್ದ ಏಕೆ ಈ ವಾಮಾಚಾರ ಮಾಡಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....