Home ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಎಸ್ಪಿಗೆ ಬೆಂಬಲಿಸಿ
HomechikamagalurLatest Newsnamma chikmagalur

ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಎಸ್ಪಿಗೆ ಬೆಂಬಲಿಸಿ

Share
Share

ಚಿಕ್ಕಮಗಳೂರು: – ಅಂಬೇಡ್ಕರ್ ಸಿದ್ಧಾಂತದಡಿ ಉಗಮವಾಗಿರುವ ಬಿಎಸ್ಪಿ ರಾಜಕೀಯ ಪಕ್ಷವನ್ನು ದೇಶದ ಉಜ್ವಲ ಭವಿಷ್ಯಕ್ಕಾಗಿ ಮತದಾರರ ಸ್ವಯಂಪ್ರೇರಿತರಾಗಿ ಬೆಂಬಲಿಸಬೇಕು ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಹೇಳಿದರು.

ನಗರದ ಜಿಲ್ಲಾ ಬಿಎಸ್ಪಿ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಸಹೋದರತ್ವ ಸಮಿತಿಯ ೧೦೫ನೇ ಮಾ ಸಿಕ ಸಭೆಯ ಅಂಗವಾಗಿ ಡಾ|| ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾ ಡಿದರು.

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಸ್ಥಳೀಯ ಮಟ್ಟದ ಹಲವಾರು ಚುನಾವಣೆ ಎದುರಾಗಲಿದೆ. ಆ ನಿಟ್ಟಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸದೃಢಗೊಳಿಸಲು ಮುಂದಾಗಬೇಕು. ಅಂಬೇಡ್ಕರ್ ಚಿಂತನೆಗಳಡಿ ಕಾನ್ಸಿ ರಾಂ ನಿರ್ಮಿಸಿರುವ ಬಿಎಸ್ಪಿ ಪಕ್ಷದ ರಥವನ್ನು ಎಳೆಯುವ ಮೂಲಕ ಕಾರ್ಯಕರ್ತರು ಮತಚಲಾಯಿಸಲು ಪ್ರೇರೇಪಿಸಬೇಕು ಎಂದರು.

ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರದಲ್ಲಿ ಕೆಲವು ಮಂತ್ರಿಗಳು ಸೆರೆವಾಸ ಅನುಭವಿಸಿ ಸಚಿವರಾಗಿ ಮೆರೆಯುತ್ತಿದ್ದಾರೆ. ಜೊತೆಗೆ ದೇಶವನ್ನಾಳಿರುವ ರಾಜಕೀಯ ಪಕ್ಷಗಳು ಹತ್ತಾರು ಸಮಸ್ಯೆಗಳನ್ನು ದೇಶಕ್ಕೆ ಹೊರಿಸುತ್ತಿದೆ. ಇದರಿಂದ ಹೊರಬರಲು ರಾಷ್ಟ್ರದಲ್ಲಿ ಬಿಎಸ್ಪಿ ಅಧಿಕಾರ ಹಿಡಿಯಬೇಕಿದೆ ಎಂದು ತಿಳಿ ಸಿದರು.

ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ ದೇಶದಲ್ಲಿ ಮಹಾಮೇಧಾವಿ ಅಂಬೇಡ್ಕರ್ ಜನಿ ಸದಿದ್ದರೆ ಇಂದಿಗೂ ಗುಲಾಮರಾಗಿ ಬದುಕುವಂತ ಸ್ಥಿತಿ ನಿರ್ಮಾಣವಾಗಿತ್ತು. ಆದರೀಗ ಸಂವಿಧಾನದಡಿ ಜನತೆಯು ಉದ್ಯೋಗ, ಅಧಿಕಾರ, ಸ್ವಾತಂತ್ರ್ಯತೆ ಹಾಗೂ ಸಾಮಾಜಿಕ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ವಾಗಿದೆ ಎಂದು ತಿಳಿಸಿದರು.

ಮತದಾನದ ಹಕ್ಕನ್ನು ಜನತೆಗೆ ಕೊಡಿಸಲು ಅಂಬೇಡ್ಕರ್ ಎಂದಿಗೂ ಕಟುವಾಗಿ ನಡೆದುಕೊಳ್ಳದೇ ತಾ ಳ್ಮೆಯಿಂದಲೇ ನಿಭಾಯಿಸಿ ಮತಚಲಾಯಿಸುವ ಹಕ್ಕು ನೀಡಿದರು. ಆದರೆ ಇಂದಿನ ರಾಜಕೀಯ ಪಕ್ಷಗಳು ಅ ಧಿಕಾರದಾಸೆಗಾಗಿ ಮತಗಟ್ಟೆಗಳಲ್ಲಿ ಮತವನ್ನೇ ಕಳ್ಳತನ ಮಾಡುವ ಸ್ಥಿತಿಗೆ ತಂದೊಡ್ಡಿರುವುದು ವಿಪರ್ಯಾಸ ಎಂದು ಹೇಳಿದರು.

ಜಿಲ್ಲಾ ಸಹೋದರತ್ವ ಸಮಿತಿ ಸಂಸ್ಥಾಪಕ ಕೆ.ಆರ್.ಗಂಗಾಧರ್ ಮಾತನಾಡಿ ದೌರ್ಜನ್ಯ, ಶೋಷಣೆಗೆ ಒಳಗಾದವರನ್ನು ಸಹೋದರತ್ವ ಸಮಿತಿಯಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಜೊತೆಗೆ ಅನೇಕ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಹೋದರತ್ವ ಸಮಿತಿ ಕಾರ್ಯದರ್ಶಿ ಕೆ.ಎಸ್.ಮಂಜುಳಾ, ಮುಖಂಡರುಗಳಾದ ಆರ್.ವಸಂತ್, ಗಿರೀಶ್, ಹೊನ್ನಪ್ಪ, ಎನ್.ಎಸ್.ಮಂಜುನಾಥ್, ಮಗಣ್ಣಗೌಡ, ಮಹಾದೇವಮ್ಮ ಇದ್ದರು.

Support BSP for the bright future of the country

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...