Home Latest News ಐ.ಡಿ ಪೀಠದ ಗರ್ಭಗುಡಿಯಲ್ಲಿ ಉಲ್ಲಂಘನೆ ಆಯ್ತಾ ಸುಪ್ರೀಂ ಕೋರ್ಟ್ ಆದೇಶ
Latest News

ಐ.ಡಿ ಪೀಠದ ಗರ್ಭಗುಡಿಯಲ್ಲಿ ಉಲ್ಲಂಘನೆ ಆಯ್ತಾ ಸುಪ್ರೀಂ ಕೋರ್ಟ್ ಆದೇಶ

Share
Share

ಚಿಕ್ಕಮಗಳೂರು : ವಿವಾದಿತ ಐ.ಡಿ ಪೀಠದ ಗರ್ಭಗುಡಿಯ ಗದ್ದುಗೆಗೆ ಕುಂಕುಮ ಹಾಕಿದ ವಿಷಯ ಇದೀಗ ಹೊಸ ಸಮಸ್ಯೆಗೆ ಕಾರಣವಾಗಿದ್ದು, ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ.

ಈ ಬಾರಿಯ ದತ್ತಮಾಲೆ ಕೊನೆಯ ದಿನ ದತ್ತಪೀಠದಲ್ಲಿ ದರ್ಶನ ಪಡೆದ ಭಕ್ತರು ವಾಪಸ್ ಹೋದ ನಂತರ ಕುಂಕುಮ ನಿತ್ಯ ಹಾಕಲಾಗುತ್ತಿದೆ ಎನ್ನಲಾಗಿದ್ದು, ನಂತರ ಪ್ರತಿದಿನ ಕುಂಕುಮ ಹಾಕಲಾಗಿದೆ ಎಂದು ಕೆಲ ಮುಸ್ಲಿಂ ಯುವಕರು ದತ್ತಪೀಠದಲ್ಲಿ ಪ್ರತಿಭಟನೆ ನಡೆಸಿದ್ದು, ಘಟನಾ ಸ್ಥಳಕ್ಕೆ ಮುಜರಾಯಿ ಇ.ಓ ರಂಗಪ್ಪ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ. ಆದರೂ ಘಟನೆಯ ನಂತರ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ದತ್ತಪೀಠದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಈ ನಡುವೆ ಕುಂಕುಮ ಹಾಕಿದ ಪ್ರಕರಣ ಎಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದು ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆ ಮೂಡಿದೆ. ವಿವಾದಿತ ಸ್ಥಳದಲ್ಲಿ ಹೊಸ ಆಚರಣೆ ನಡೆದಿದೆಯೇ ಎಂಬ ಗುಮಾನಿ ಕೂಡಾ ಮೂಡಿದ್ದು, ಜಿಲ್ಲಾಡಳಿತ ಇದರ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಇದರ ಜೊತೆಗೆ ಇಂದು ಕೂಡ ಕೆಲ ಮುಸ್ಲಿಂ ಸಂಘಟನೆಗಳು ಹಾಗೂ ಶಾಖಾದ್ರಿ ಕುಟುಂಬಸ್ಥರು ಮತ್ತೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕಂಸಾಗರ ಗ್ರಾಮದ ಕೆಂಚಪ್ಪ...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿದೆ ಎಂಬ ಆರೋಪ...

Related Articles

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ...

ವಿಮಾನ ನಿಲ್ದಾಣಕ್ಕಾಗಿ ಜಮೀನ ಸ್ವಾಧೀನಕ್ಕೆ ರೈತರ ವಿರೋಧ

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಪ್ರದೇಶ ಕೃಷಿ ಅವಲಂಬಿತವಾಗಿದ್ದು, ಅತ್ಯಂತ...

ಎತ್ತಿನಭುಜ ಚಾರಣದಕ್ಕೆ ಟ್ರಕ್ಕಿಂಗ್‌ ಬಂದು ಸಮಸ್ಯೆ ಎದುರಿಸುತ್ತಿರುವ ಪ್ರವಾಸಿಗರು

ಮೂಡಿಗೆರೆ : ವಾರಾಂತ್ಯದ ಮಜಾ ಕಳೆಯಲು ಬೆಟ್ಟಗುಡ್ಡಗಳತ್ತ ಮುಖ ಮಾಡಿದ ಚಾರಣಪ್ರಿಯರಿಗೆ ನಿರಾಶೆಯ ಜೊತೆಗೆ ಕಾಡಿನ...

₹1.39 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಅಜ್ಜಂಪುರ: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೀರುವಿನ ಲಾಕರ್‌ನಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು...