Home namma chikmagalur chikamagalur ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ
chikamagalurCrime NewsHomeLatest Newsnamma chikmagalur

ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

Share
Share

ಚಿಕ್ಕಮಗಳೂರು: ಅರಣ್ಯ ಇಲಾಖೆಯ ಐಬಿ ಎದುರಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಹಿತ ಆರೋಪಿಯನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಯ ಮತ್ತಾವರ ಅರಣ್ಯ ಇಲಾಖೆಯ ಎದುರಿಗಿರುವ ಖಾಸಗಿ ಕಂಪನಿಯೊಂದರ ಗ್ಯಾರೇಜ್‌ನ ಆವರಣದಲ್ಲಿ ಗಾಂಜಾ ಬೆಳೆದಿರುವ ಕುರಿತು ಖಚಿತ ಮಾಹಿತಿ ಆಧಾರದ ಮೇರೆಗೆ ಕಾರ್ಯಪ್ರವೃತ್ತರಾದ ಅಬಕಾರಿ ಸಿಬ್ಬಂದಿ ದಾಳಿ ನಡೆಸಿ ಮುಸೈಫ್ ಎಂಬ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಮುಸೈಫ್ ಇದೇ ಖಾಸಗಿ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದು, ಯಾರಿಗೂ ಸಂಶಯ ಬಾರದಂತೆ ಗ್ಯಾರೇಜ್‌ನ ಹಿಂಭಾಗದ ಜಾಗದಲ್ಲಿ ಗಾಂಜಾ ಗಿಡವನ್ನು ಪೋಷಿಸುತ್ತಿದ್ದ. ಈ ಗಿಡವು ಸರಿಸುಮಾರು ನಾಲ್ಕು ಅಡಿಗೂ ಹೆಚ್ಚು ಎತ್ತರಕ್ಕೆ ದಷ್ಟಪುಷ್ಟವಾಗಿ ಬೆಳೆದು ನಿಂತಿತ್ತು.

ಕಣ್ಣೆದುರೇ ಇಷ್ಟೊಂದು ದೊಡ್ಡದಾಗಿ ಗಿಡ ಬೆಳೆದಿದ್ದರೂ, ಅದು ಗಾಂಜಾ ಗಿಡ ಎಂಬ ಸಣ್ಣ ಸುಳಿವೂ ಇಲ್ಲದೆ ಗ್ಯಾರೇಜ್‌ನ ಇತರ ಸಿಬ್ಬಂದಿ ದಿನನಿತ್ಯ ಓಡಾಡುತ್ತಿದ್ದರು.

ತಮ್ಮ ಜೊತೆಯಲ್ಲೇ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಇಂತಹದೊಂದು ಕಾನೂನುಬಾಹಿರ ಕೃತ್ಯದಲ್ಲಿ ತೊಡಗಿದ್ದ ಮತ್ತು ತಮ್ಮ ಕಣ್ಣೆದುರೇ ಗಾಂಜಾ ಬೆಳೆಸುತ್ತಿದ್ದ ಎಂಬ ಸತ್ಯ ಬಯಲಾಗುತ್ತಿದ್ದಂತೆ ಗ್ಯಾರೇಜ್‌ನ ಇತರೆ ಸಿಬ್ಬಂದಿ ಒಮ್ಮೆ ಬೆಚ್ಚಿಬಿದ್ದಿದ್ದಾರೆ. ಸದ್ಯ ಆರೋಪಿಯನ್ನು ಗಾಂಜಾ ಸಹಿತ ವಶಕ್ಕೆ ಪಡೆದಿರುವ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Suspect arrested for illegally growing marijuana

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...