Home namma chikmagalur chikamagalur ಮೂಡಿಗೆರೆ ಪೊಲೀಸ್ ಠಾಣೆಯ ಒಳಗೆ ಕತ್ತಿ ಹಿಡಿದು ದಾಂಧಲೆ
chikamagalurCrime NewsHomeLatest Newsnamma chikmagalur

ಮೂಡಿಗೆರೆ ಪೊಲೀಸ್ ಠಾಣೆಯ ಒಳಗೆ ಕತ್ತಿ ಹಿಡಿದು ದಾಂಧಲೆ

Share
Share

ಮೂಡಿಗೆರೆ: ವೆಲ್ಡಿಂಗ್ ವಿಚಾರದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಈ ಬೆನ್ನಲ್ಲೇ ಪೊಲೀಸ್ ಠಾಣೆಯ ಒಳಗೆ ಸೇಡು ತೀರಿಸಿಕೊಳ್ಳಲು ಮೃತ ವ್ಯಕ್ತಿಯ ಪುತ್ರ ಕತ್ತಿ ಹಿಡಿದು ದಾಂಧಲೆ ನಡೆಸಿರುವ ಆಘಾತಕಾರಿ ಘಟನೆಗಳು ವರದಿಯಾಗಿವೆ.

ಮೂಡಿಗೆರೆ ಬೇಲೂರು ರಸ್ತೆಯ ಗ್ಯಾರೇಜ್ ಮಾಲೀಕ ಸೈಯದ್ ಜಾವಿದ್ ಎಂಬುವವರ ಮೇಲೆ ರಾಜು ಎಂಬಾತ ವೆಲ್ಡಿಂಗ್ ವಿಚಾರವಾಗಿ ಗಲಾಟೆ ನಡೆಸಿ, ಅವರ ಎದೆಭಾಗಕ್ಕೆ ರಭಸವಾಗಿ ಹೊಡೆದಿದ್ದಾನೆ. ಈ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಕೆಳಕ್ಕೆ ಬಿದ್ದ ಜಾವಿದ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕೊಲೆಗೆ ಸಂಬಂಧಿಸಿದಂತೆ ಮೃತರ ಪತ್ನಿ ಜೈನಾಬಿ ಅವರು ನೀಡಿದ ದೂರಿನ ಮೇರೆಗೆ ಆಟೋ ರಿಕ್ಷಾ ಚಾಲಕ ರಾಜು ಎಂಬಾತನ ವಿರುದ್ಧ ಮೂಡಿಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಠಾಣೆಯ ಆವರಣದಲ್ಲಿ ಮತ್ತೊಂದು ಹೈಡ್ರಾಮಾ ನಡೆದಿದೆ. ಮೃತ ಜಾವಿದ್ ಅವರ ಪುತ್ರ ಸೈಯದ್ ಆಶಿರ್ (26), ತನ್ನ ತಂದೆಯ ಕೊಲೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರುತಿ 800 ಕಾರಿನಲ್ಲಿ ಕತ್ತಿ ಹಿಡಿದು ಠಾಣೆಯೊಳಗೆ ನುಗ್ಗಿದ್ದಾನೆ.

ಠಾಣೆಯಲ್ಲಿದ್ದ ಆರೋಪಿಯ ಮೇಲೆ ಹಲ್ಲೆ ಮಾಡಲು ಮುಂದಾದ ಆತನನ್ನು ತಡೆದ ಹೆಡ್ ಕಾನ್ಸೆಬಲ್ ಪುಟ್ಟೇಗೌಡ ಮತ್ತು ಪಿಸಿ 393 ರವರನ್ನು ತಳ್ಳಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ತಕ್ಷಣ ಎಚ್ಚೆತ್ತ ಹೋಮ್ ಗಾರ್ಡ್ ಮೂರ್ತಿ ಮತ್ತು ಇತರೆ ಸಿಬ್ಬಂದಿ ಆತನ ಕೈಯಲ್ಲಿದ್ದ 15 ಇಂಚು ಉದ್ದದ ಹರಿತವಾದ ಕತ್ತಿಯನ್ನು ಕಸಿದುಕೊಂಡು, ಆತನನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಶಿರ್ ವಿರುದ್ಧವೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Sword-wielding vandalism inside Mudigere police station

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಕ್ಷೇತ್ರದಲ್ಲಿ ಆನೆಗಳ ಕಾಟ-ರಾಜಕೀಯದವರ ತಿಕ್ಕಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೂ ಕಾಡು ಪ್ರಾಣಿಗಳಿಗೂ ಅವಿನಾಭಾವ ಸಂಬಂಧ. ಆನೆಗಳು, ಕಾಡು ಕೋಣಗಳು,ಜಿಂಕೆ, ಸಾರಂಗ, ಚಿರತೆ,ಹುಲಿಗಳು ಸಾಮಾನ್ಯ. ಆದರೆ ಎಂದೂ ಮನುಷ್ಯರ ಜೊತೆಗೆ ಸಂಘರ್ಷ ಇರಲಿಲ್ಲ.ಆದರೆ ಇಂದು ‌ಮನುಷ್ಯನ ಜೀವ ತೆಗೆಯುತ್ತಿರುವ...

ಜೀವಹಾನಿ ತಪ್ಪಿಸಲು ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಚಿಕ್ಕಮಗಳೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳೂ ಸೇರಿದಂತೆ ಕಾಡುಪ್ರಾಣಿಗಳಿಂದ ಆಗುತ್ತಿರುವ ಜೀವಹಾನಿಯನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ಇಂದು...

Related Articles

ಅಫ್ ರೇಟ್-ಚೀಫ್ ರೇಟ್ ಅಜ್ಜಂಪುರದಲ್ಲಿ ವಂಚಕರು ಜಾಲ

ಅಜ್ಜಂಪುರ: ಅಫ್ ರೇಟ್ ಚೀಫ್ ರೇಟ್ ಎಂದು ಜನರನ್ನು ನಂಬಿಸಿ ವಂಚನೆ ಮಾಡುವವರು ಅಂಗಡಿ ತೆರೆದು...

ಸಂತ್ರಸ್ತರಿಗೆ ನೆರವು ನೀಡಲು ರಾಜ್ಯ ಸರ್ಕಾರವು ತುರ್ತು ಕ್ರಮ

ಚಿಕ್ಕಮಗಳೂರು: ಮಧ್ಯಪ್ರಾಚ್ಯದ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು,...

ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್ ಷರೀಫ್‌ ಬಂದನಕ್ಕೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು : ಇತ್ತೀಚೆಗೆ ದಲಿತ ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿರುವ ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್...

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ...