Home Latest News ರೋಟಿಬಾಜಿ ದತ್ತಗುಹೆಗೆ ಕೊಂಡೊಯ್ಯಲು ಯತ್ನಿಸಿದ ಶಾಖಾದ್ರಿ ಮೇಲೆ ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಒತ್ತಾಯ
Latest News

ರೋಟಿಬಾಜಿ ದತ್ತಗುಹೆಗೆ ಕೊಂಡೊಯ್ಯಲು ಯತ್ನಿಸಿದ ಶಾಖಾದ್ರಿ ಮೇಲೆ ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಒತ್ತಾಯ

Share
Share

ಚಿಕ್ಕಮಗಳೂರು : ಶ್ರೀಗುರುದತ್ತಾತ್ರೇಯ ಪೀಠದಲ್ಲಿ ಶಾಖಾದ್ರಿ ವಂಶಸ್ಥರು ಹಾಗೂ ಮುಸ್ಲಿಂ ಸಮುದಾಯದವರು ಫಾತೇಹ ಕಾರ್ಯಕ್ರಮವನ್ನು ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ನಡೆಸಲು ಮುಂದಾಗಿದ್ದು ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ರಂಗನಾಥ್ ಆಗ್ರಹಿಸಿದರು.

ಪ್ರೆಸ್ ಕ್ಲಬ್ ನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಡಿ.29ರಂದು ಕೆಲ ಮುಸ್ಲಿಂ ಸಮುದಾಯದವರು ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ರೋಟಿ ಬಾಜಿ ತಯಾರಿಸಿ ಮೆರವಣಿಗೆ ಮೂಲಕ ಆಗಮಿಸಿ ಫಾತೇಹ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ ವೇಳೆ ಮುಜರಾಯಿ ಇಲಾಖೆ ಅಧಿಕಾರಿಗಳು ತಡೆದು ಪಾದಾರ್ಥಗಳನ್ನು ತಗೆದುಕೊಂಡು ಗುಹೆಯೊಳಗೆ ಫಾತೇಹ ಮಾಡಲು ಬಿಡುವುದಿಲ್ಲ ಎಂದಾಗ ಜಿಲ್ಲಾಧಿಕಾರಿ ಮುಜರಾಯಿ ಅಧಿಕಾರಿಗಳು ಮತ್ತು ವ್ಯವಸ್ಥಾಪನಾ ಸಮಿತಿ ವಿರುದ್ಧ ಘೋಷಣೆಗಳನ್ನು ಹಾಕಿ ಧಿಕ್ಕಾರವನ್ನು ಕೂಗಿದ್ದು ತಪ್ಪು ಎಂದರು.

ಗುಹೆಯಲ್ಲಿ ಹೊಸ ಆಚರಣೆಗಳಿಗೆ ಶಾಖಾದ್ರಿ ವಂಶಸ್ಥರು ಮತ್ತು ಮುಸ್ಲಿಂ ಸಮುದಾಯದವರು ಮುಂದಾಗಿದ್ದಾರೆ. ಫಾತೇಹ ಮಾಡು ವುದು ಸಮಾಧಿಗಳಿಗೆ ಮಾತ್ರ. ದತ್ತಪೀಠದ ಗುಹೆಯೊಳಗೆ ಪೀಠವಿದ್ದು, ದತ್ತಾತ್ರೇಯಸ್ವಾಮಿ ಪಾದುಕೆ ಹಾಗೂ ಮಹಾಸತಿ ಅನುಸೂಯ ದೇವಿಯವರ ಪೀಠವಿದೆ. ಆದರೆ, ಮುಸ್ಲಿಂ ಸಮುದಾಯದವರು ದಾದಾ ಹಯಾತ್ ಮೀರ್ ಖಲಂದರ್ ಮತ್ತು ಮಾಮಾಜುಗ್ನಿ ಅವರ ಸಮಾಧಿಗಳು ಇವೆ ಎಂದು ಹೇಳುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು ಎಂದರು.

ಮುಜರಾಯಿ ಇಲಾಖೆ ಅಧಿಕಾರಿಗಳನ್ನು ಏರುಧ್ವನಿಯಲ್ಲಿ ಪ್ರಶ್ನಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುತ್ತದೆ ಎಂದ ರಂಗನಾಥ ಪದೇ ಪದೇ ಗೊಂದಲ ಹಾಗೂ ಅಶಾಂತಿ ಸೃಷ್ಟಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು, ಗ್ಯಾರವಿ ಹಬ್ಬ ಆಚರಣೆ ಸಂಬಂಧ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶವಿಲ್ಲದೆ ಯಾವುದೇ ಹೊಸ ಆಚರಣೆ ಮಾಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಜಿಲ್ಲಾಧಿಕಾರಿಗಳ ಮೇಲೆ ಕೂಡಾ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...