Home ತರೀಕೆರೆ ದಸರಾ ಜಂಗಿ ಕುಸ್ತಿಗೆ ಅದ್ದೂರಿಗೆ ಚಾಲನೆ
Homenamma chikmagalurTarikere

ತರೀಕೆರೆ ದಸರಾ ಜಂಗಿ ಕುಸ್ತಿಗೆ ಅದ್ದೂರಿಗೆ ಚಾಲನೆ

Share
Share

ಚಿಕ್ಕಮಗಳೂರು :
ತರೀಕೆರೆ :

ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯ ಬಿಟ್ಟರೆ ತರೀಕೆರೆಯಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳು ಹೆಸರು ಮತ್ತು ಕೀರ್ತಿಗೆ ಭಾಜನವಾಗಿದೆ.

ಪಾಳೇಗಾರರ ಕಾಲದಲ್ಲಿ ಪ್ರಾರಂಭವಾದ ತರೀಕೆರೆ ಕುಸ್ತಿ ಪಂದ್ಯಗಳು ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿವೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತು ಅನ್ಯ ರಾಜ್ಯಗಳಿಂದ ಕುಸ್ತಿಪಟುಗಳು ಆಗಮಿಸುತ್ತಾರೆ. ಇಲ್ಲಿನ “ಬೆಳ್ಳಿ ಗಧೆ” ಕುಸ್ತಿ ಎಲ್ಲೆಡೆ ಪ್ರಖ್ಯಾತಿ ಪಡೆದಿದೆ.
ಈ ಹಿಂದೆ ಕುಸ್ತಿಪಟುಗಳಿಗೆ ಮನೆಯಲ್ಲಿ ಆತಿಥ್ಯ ನೀಡುವುದರ ಮೂಲಕ ತರೀಕೆರೆಯ ಜನ ಕುಸ್ತಿಕಾಳಗಕ್ಕೆ ಉತ್ತೇಜನ ನೀಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಶ್ರೀ ರೇವಣಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಕುಸ್ತಿ ಪಟುಗಳಿಗೆ ಆತಿಥ್ಯ ನೀಡಲಾಗುತ್ತಿದೆ. ದಿವಂಗತ ಮಾಜಿ ಶಾಸಕ ಟಿ.ಹೆಚ್.ಶಿವಶಂಕರಪ್ಪನವರ ನೇತೃತ್ವದಲ್ಲಿ ಅಧುನಿಕ ಸ್ಪರ್ಶ ನೀಡಿ ಕುಸ್ತಿ ವೀಕ್ಷಿಸಲು ಬರುವ ಜನರಿಗೆ ಕುಳಿತುಕೊಳ್ಳಲು ಸ್ಟೇಡಿಯಂ ಸ್ವರೂಪ ಕೊಡಲಾಗಿದೆ. ಇಂದಿನಿಂದ ಮೂರು ದಿನಗಳಕಾಲ ನಡೆಯುವ ಕುಸ್ತಿ ಕಾಳಗಕ್ಕೆ ಚಾಲನೆ ನೀಡಲಾಗಿದ್ದು ಮಂಗಳವಾರ ಬೆಳ್ಳಿ ಗಧೆ ಕುಸ್ತಿ ನಡೆಯುತ್ತದೆ.

ಶ್ರೀ ಗುರು ರೇವಣಸಿದ್ದೇಶ್ವರ ಕುಸ್ತಿ ಸಂಘದ ಅಧ್ಯಕ್ಷರಾದ ಜಯಸ್ವಾಮಿ ಕಾರೆ ನೇತೃತ್ವದಲ್ಲಿ ಅಯೋಜನೆ ಮಾಡಲಾಗಿದೆ. ಹಿರಿಯ ಕುಸ್ತಿ ಪಟುಗಳಾದ ವಗ್ಗಪ್ಪರ ಮಂಜಣ್ಣ, ಸೀನಣ್ಣ,ಪುರಸಭಾ ಅಧ್ಯಕ್ಷ ವಂಸತಕುಮಾರ್, ಉಪಾಧ್ಯಕ್ಷ ಗಿರಿಜಾ ಪ್ರಕಾಶ್, ಪುರಸಭಾ ಸದಸ್ಯರಾದ ದಾದಪೀರ್, ಟಿ.ಜಿ.ಮಂಜುನಾಥ್ ಮಾಜಿ ಪುರಸಭಾ ಅಧ್ಯಕ್ಷ ಬೈಟು ರಮೇಶ್ ಮತ್ತು ವಿವಿಧ ಸಮಾಜದ ಮುಖಂಡರು ಜಂಗಿಕುಸ್ತಿ ಪಂದ್ಯವಳಿ ಯಶಸ್ವಿ ಯಾಗಲೇಂದು ಶುಭಹಾರೈಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...