Home Latest News ತರೀಕೆರೆ ತಾಲೂಕಿನಲ್ಲೂ ಕಾಡಾನೆಗಳ ಹಾವಳಿ : ಜನರು ಆಕ್ರೋಶ
Latest News

ತರೀಕೆರೆ ತಾಲೂಕಿನಲ್ಲೂ ಕಾಡಾನೆಗಳ ಹಾವಳಿ : ಜನರು ಆಕ್ರೋಶ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಪ್ರಾಣಿಗಳ ಹಾವಳಿ ನಿನ್ನೆ,ಮೊನ್ನೆ ಯದಲ್ಲ.ಅದರಲ್ಲೂ ಆನೆಗಳು ಹಿಂಡು,ಹಿಂಡಾಗಿ ಬಂದು ಬೆಳೆ ನಾಶ ಮಾಡುತ್ತಿರುವುದು ಬೆಳೆಗಾರರು ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದ್ದಾರೆ.ಹಲವರು ಪ್ರಾಣ ಕಳೆದು ಕೊಂಡಿದ್ದಾರೆ.

ಇತ್ತೀಚೆಗೆ ತರೀಕೆರೆ ಸುತ್ತಮುತ್ತ ಆನೆ ಹಾವಳಿ ಹೆಚ್ಚಾಗಿದೆ ಎಂದು ರೈತರು ದೂರಿದ್ದಾರೆ.ಮೂರು ಕ್ಕೂ ಹೆಚ್ಚು ಆನೆಗಳು ಕಳೆದ ಒಂದು ವಾರದಿಂದ ಅಮ್ಮಣ್ಣಿ ಕಾವಲ್,ಜೋಡಿ ತಿಮ್ಮಪುರ ಮತ್ತು ಭದ್ರ ಮೇಲ್ದಂಡೆ ಕಾಲುವೆ ಪಕ್ಕ ಹೆಚ್ಚಾಗಿ ಕಾಣಿಸಿಕೊಳ್ಳುವ ಆನೆಗಳನ್ನು ಅರಣ್ಯ ಇಲಾಖೆಯವರು ಪಟಾಕಿ ಸಿಡಿಸಿ ಓಡಿಸಿದರು ಕೂಡ ಮತ್ತೆ ಮತ್ತೆ ಆನೆಗಳು ದಾಳಿ ಮಾಡಿ ಅಡಿಕೆ, ತೆಂಗು,ರಾಗಿ ಮತ್ತು ತರಕಾರಿ ಬೆಳೆಗಳನ್ನು ನಾಶ ಮಾಡಿವೆ ಎಂದು ರೈತರು ದೂರಿದ್ದಾರೆ.

ಲಿಂಗದಳ್ಳಿ ಹೋಬಳಿಯ ತಣಿಗೆಬಯಲು, ನಂದಿಬಟ್ಟಲು, ಕೃಷ್ಣಾಪುರ ಮತ್ತು ಉಡೆವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆನೆಗಳ ಕಾಟ ಹೇಳತೀರದಾಗಿದೆ. ಅರಣ್ಯ ಇಲಾಖೆಯವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ರೈತರು ಜನರು ದೂರಿದಾಗ ಕಾಟಚಾರಕ್ಕೆ ಪಟಾಕಿ ಸಿಡಿಸುವ ಬದಲು ಇನ್ನಾದರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳು ಬೇಕು ಇಲ್ಲದಿದ್ದರೆ ರೋಷಿರುವ ರೈತರು ಮತ್ತು ಬೆಳೆಗಾರರು ಕಾಡನೆಗಳನ್ನು ಅರಣ್ಯ ಇಲಾಖೆ ಕಛೇರಿಗೆ ನುಗ್ಗಿಸಿದರೂ ಆಶ್ಚರ್ಯ ಪಡುವಂತಿಲ್ಲ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...