Home ತರೀಕೆರೆ ಮಾಜಿ ಶಾಸಕ ಡಿ.ಎಸ್ ಸುರೇಶ್ ತಂದೆ ನಿಧನ : ಮನೆಯಲ್ಲೇ ಕೊನೆಯುಸಿರೆಳೆದ ಶಾಂತವೀರಪ್ಪ
Home

ತರೀಕೆರೆ ಮಾಜಿ ಶಾಸಕ ಡಿ.ಎಸ್ ಸುರೇಶ್ ತಂದೆ ನಿಧನ : ಮನೆಯಲ್ಲೇ ಕೊನೆಯುಸಿರೆಳೆದ ಶಾಂತವೀರಪ್ಪ

Share
Share

ಚಿಕ್ಕಮಗಳೂರು : ತರೀಕೆರೆ ಮಾಜಿ ಶಾಸಕ ಜಿಲ್ಲಾ ಕೇಂದ್ರ ಸಹಕಾರ (DCC)ಬ್ಯಾಂಕ್ ನ ಅಧ್ಯಕ್ಷರಾದ ಡಿ.ಎಸ್.ಸುರೇಶ್ ರವರ ತಂದೆ ದೋರನಾಳ್ ಗ್ರಾಮದ ಡಿ.ಸಿ. ಶಾಂತವೀರಪ್ಪ ಕಳೆದ ರಾತ್ರಿ ನಿಧನರಾಗಿದ್ದಾರೆ. ಹಲವಾರು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಂತರ ಸ್ವಗ್ರಾಮದ ಮನೆಯಲ್ಲಿ ಹಾರೈಕೆ ಪಡೆಯುತ್ತಿದ್ದ ಶಾಂತವೀರಪ್ಪನವರು ನಿನ್ನೆ ರಾತ್ರಿ 10,30 ರ ಸುಮಾರಿಗೆ ಕೊನೆಯುಸಿರೆಳೆದರು

ಅವರು ಪತ್ನಿ ಲಲಿತಮ್ಮ, ಮಕ್ಕಳಾದ ಗಿರೀಶ್, ಡಿ.ಎಸ್ ಸುರೇಶ್, ಸೇರಿದಂತೆ ನಾಲ್ವರು ಮತ್ತು ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

ಶಾಂತವೀರಪ್ಪ ಕೃಷಿ ಚಟುವಟಿಕೆ ಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದವರು .ಇವರ ನಿಧನಕ್ಕೆ ಮಾಜಿ ಶಾಸಕರುಗಳಾದ ಎಸ್.ಎಂ. ನಾಗರಾಜ್, ಬೆಳ್ಳಿ ಪ್ರಕಾಶ್. ಸಿ.ಟಿ.ರವಿ. ಜೀವರಾಜ್ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಪ ಸಭಾಪತಿ ಪ್ರಾಣೇಶ್ ಸೇರಿದಂತೆ ಹಲವರು ಕಂಬನಿ ಮಿಡಿದು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಬ್ಯಾಂಕ್ ನ ಮಾಜಿ ಉಪಾಧ್ಯಕ್ಷರಾದ ಟಿ.ಎಲ್.ರಮೇಶ್. ಹಳಸೆ ಶಿವಣ್ಣ. ರಾಮಸ್ವಾಮಿ ಸತೀಶ್ ನಿರಂಜನ್ ಮತ್ತು ರಾಮಜ್ಜ ಪರಮೇಶ್ವರಪ್ಪ ಸೇರಿದಂತೆ ಬ್ಯಾಂಕ್ ನ ಸಿಬ್ಬಂದಿ ವರ್ಗದವರು ಕಂಬನಿ ಮಿಡಿದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...