Home Crime News ಮನೆಗೆ ತೆರಳುತ್ತಿದ್ದ ಶಿಕ್ಷಕಿ ಮೇಲೆ ಹಲ್ಲೆ – ಆರೋಪಿ ಬಂಧನ
Crime NewschikamagalurHomeLatest Newsnamma chikmagalur

ಮನೆಗೆ ತೆರಳುತ್ತಿದ್ದ ಶಿಕ್ಷಕಿ ಮೇಲೆ ಹಲ್ಲೆ – ಆರೋಪಿ ಬಂಧನ

Share
Share

ಚಿಕ್ಕಮಗಳೂರು: ಮನೆಗೆ ತೆರಳುತ್ತಿದ್ದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಲ್ಲಿ ಮೂಡಿಗೆರೆ ಗಬ್ಗಲ್ ಬಳಿಯ ಚಂದವಳ್ಳಿಯ ಭವಿತ್ ಎಂಬಾತನನ್ನು ಜಯಪುರ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕಿ ನೀಡಿದ ದೂರು ಆಧರಿಸಿ ಜಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್, ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್, ಜಯಪುರ ಪಿಎಸ್‌ಐ ಅಂಬರೀಷ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಘಟನೆ ವಿವಿರ: ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಮಂಗಳವಾರ ಅಮಾನವೀಯ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಲಾಗಿದೆ.

ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಡೆದ ಈ ಘಟನೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ (25 ವರ್ಷ ವಯಸ್ಸು) ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಗ್ನಗೊಳಿಸಿರುವ ಆರೋಪ ಕೇಳಿಬಂದಿದೆ.

ಶಿಕ್ಷಕಿಯ ಕೂಗಾಟ ಕೇಳಿ ಸ್ಥಳಕ್ಕೆ ಧಾವಿಸಿದ ಮನೆಯವರು ಮತ್ತು ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಶಿಕ್ಷಕಿಯನ್ನು ಮೊದಲು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತನಿಖೆಗೆ ಮೂರು ತಂಡ ರಚಿಸಿದ ಚಿಕ್ಕಮಗಳೂರು ಪೊಲೀಸರು ಶಿಕ್ಷಕಿ ಮೇಲೆ ಹಲ್ಲೆ ಮಾಡಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ ಘಟನೆ ಸಂಬಂಧ ತನಿಖೆಗೆ ಕೊಪ್ಪ ಡಿವೈಎಸ್‌ಪಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿರುವುದಾಗಿ ಚಿಕ್ಕಮಗಳೂರು ಎಸ್‌ಪಿ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಅಮಾನವೀಯ ಘಟನೆಯಿಂದ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜನರಲ್ಲಿ ಆತಂಕ ವ್ಯಕ್ತವಾಗಿದ್ದು, ಆಕ್ರೋಶವೂ ವ್ಯಕ್ತವಾಗಿದೆ. ಶಿಕ್ಷಕಿಗೆ ನ್ಯಾಯ ಸಿಗಬೇಕು ಎಂಬ ಕೂಗು ಜೋರಾಗಿದೆ. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಯುವ ರೀತಿಯಲ್ಲಿ ಕರ್ನಾಟಕದಲ್ಲಿ ಕೂಡ ಒಂಟಿ ಯುವತಿಯ ಮೇಲೆ ಸಂಜೆ ಹೊತ್ತಿನಲ್ಲಿ ಅಮಾನುಷ ಹಲ್ಲೆ ಜತೆಗೆ ಕೊಲೆ ಯತ್ನ ನಡೆದಿರುವುದು ಜನರನ್ನು ಬೆಚ್ಚಿಬೀಳಿಸಿದೆ.

ಶಿಕ್ಷಕಿಯ ಹತ್ತಿರದ ಸಂಬಂಧಿ ಯುವಕನೇ ಕೃತ್ಯ ಎಸಗಿದ್ದಾನೆ. ಪ್ರೀತಿ ನಿರಾಕರಣೆ ಹಿನ್ನೆಲೆ ಭವಿತ್ ಅಲಿಯಾಸ್ ರಮೇಶ್ (30) ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಶಿಕ್ಷಕಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಭವಿತ್, ಪ್ರೀತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡು ಕೃತ್ಯ ಎಸಗಿದ್ದಾನೆ. ಸದ್ಯ ಬಾಳೂರು ಸಮೀಪದ ಚಂದುವಳ್ಳಿ ಗ್ರಾಮದಲ್ಲಿ ಭವಿತ್‌ನನ್ನು ಜಯಪುರ ಪೋಲೀಸರು ಬಂಧಿಸಿದ್ದಾರೆ.

Teacher attacked on her way home – Accused arrested

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...