Home namma chikmagalur chikamagalur ಟೆಂಪೋ ಟ್ರಾವೆಲರ್ ವಾಹನ ಸ್ಕೂಟಿಗೆ ಡಿಕ್ಕಿ-ಯುವತಿ ಸಾವು
chikamagalurCrime NewsHomeLatest Newsnamma chikmagalur

ಟೆಂಪೋ ಟ್ರಾವೆಲರ್ ವಾಹನ ಸ್ಕೂಟಿಗೆ ಡಿಕ್ಕಿ-ಯುವತಿ ಸಾವು

Share
Share

ಚಿಕ್ಕಮಗಳೂರು: ಟೆಂಪೋ ಟ್ರಾವೆಲರ್ ವಾಹನ ಸ್ಕೂಟಿಗೆ ಡಿಕ್ಕಿಯಾದ ಪರಿಣಾಮ ಮಹಿಳೆ ಒಬ್ಬರು ಮೃತಪಟ್ಟಿದ್ದಾರೆ. ಆಲ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿ ನವಮಿ (25 ವರ್ಷ) ಸಾವನ್ನಪ್ಪಿರುವ ದುರ್ದೈವಿ.

ಇಂದು ಮುಂಜಾನೆ ನವಮಿ ಆಲ್ದೂರು ಸಹಕಾರ ಸಂಘದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸ್ಕೂಟಿಯಲ್ಲಿ ಆಗಮಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಆಲ್ದೂರು ಸಮೀಪದ ಹುಣಸೆಮಕ್ಕಿ ಗ್ರಾಮದ ವಿಕಾಸ್ ರವರ ಪತ್ನಿ ನವಮಿ ಆಲ್ದೂರು ಸಹಕಾರ ಸಂಘದಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು

ಇಂದು ಮುಂಜಾನೆ ಹುಣಸೆಮಕ್ಕಿ ಇಂದ ಸ್ಕೂಟಿಯಲ್ಲಿ ಸಹಕಾರ ಸಂಘದ ಗಣರಾಜ್ಯೋತ್ಸವಕ್ಕೆ ಆಗಮಿಸುತ್ತಿದ್ದರು. ಆಲ್ದೂರು ಬಿರಿಂಜೆ ಹಳ್ಳದ ಸಮೀಪ ಟಿಟಿ ವಾಹನ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಹೆಲ್ಮೆಟ್ ಧರಿಸಿದ್ದರೂ ತಲೆಗೆ ತೀವ್ರ ಬಿಟ್ಟು ಬಿದ್ದಿದೆ. ಚಿಕ್ಕಮಗಳೂರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ

ಅಪಘಾತ ನಡೆಸಿದ ಟಿಟಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ವಾಹನ ಸಂಖ್ಯೆಯ ಆಧಾರದಲ್ಲಿ ವಾಹನವನ್ನು ವಶಕ್ಕೆ ಪಡೆಯಲಾಗುವುದು ಎಂದು ಆಲ್ದೂರು ಠಾಣಾಧಿಕಾರಿ ರವಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಸಾರ್ವಜನಿಕ ಇಂದು ಮಧ್ಯಾಹ್ನ 2 ಗಂಟೆಯಿಂದ ಆಲ್ದೂರು ಸಹಕಾರ ಸಂಘದಲ್ಲಿ ಪಾರ್ಥಿವ ಶರೀರವನ್ನು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ತಿಳಿದುಬಂದಿದೆ.

ರಾತ್ರಿ 8 ಗಂಟೆಗೆ ಸ್ವಗ್ರಾಮ ಹುಣಸೆಮಕ್ಕಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ. ನವಮಿ ಆಲ್ದೂರು ಸಮೀಪದ ಮಾಗರಹಳ್ಳಿ ಗ್ರಾಮದ ವೆಂಕಟೇಶ್ ಗೌಡ ಶ್ರೀಮತಿ ಪೂರ್ಣಿಮಾ ಅವರ ಏಕೈಕ ಪುತ್ರಿ, ಹುಣಸೇಮಕ್ಕಿ ಗ್ರಾಮದ ವಿಕಾಸ್ ಅವರನ್ನು ವಿವಾಹವಾಗಿದ್ದರು. ಇವರಿಗೆ ಮೂರು ವರ್ಷದ ಹೆಣ್ಣು ಮಗು ಇದೆ.

ಅಪಘಾತದಿಂದ ಅಘಾತಗೊಂಡು ದುಃಖದಲ್ಲಿದ್ದರು ಇನ್ನೊಬ್ಬರಿಗೆ ಬೆಳಕಾಗಲಿ ಎಂದು ಕಣ್ಣು ದಾನ ಮಾಡಿ ಮಾನವೀಯತೆ ತೋರಿದ ಕುಟುಂಬದ ಬಗ್ಗೆ ಶ್ಲಾಘಿಸ ಬೇಕು.

Tempo Traveler vehicle collides with a scooty – young woman dies

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...