Home Latest News ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರ
Latest NewschikamagalurHomenamma chikmagalur

ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರ

Share
Share

ಚಿಕ್ಕಮಗಳೂರು: ಮರ್ಲೆ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಗೆ ಸಂಬಂಧಿಸಿದಂತೆ ಮಹಿಳೆ ಕಲ್ಪನಾ ಅವರು ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರವಾಗಿದೆ. ಆರೋಪ ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ರೈತ ಸಂಘಟನೆಯ ಕ್ಷಮೆ ಕೇಳಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ಮತ್ತು ಮಾಜಿ ಅಧ್ಯಕ್ಷ ಗುರುಶಾಂತಪ್ಪ ಒತ್ತಾಯಿಸಿದರು.

ಜಂಟಿಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ,ಸೈದ್ಧಾಂತಿಕ ಹಿನ್ನಲೆಯಿಂದ ಶಿಸ್ತುಬದ್ಧವಾಗಿ ಕಟ್ಟಿದ ಜನಪರ ಸಂಘಟನೆಯ ಮೇಲೆ ಆರೋಪ ಮಾಡುವಾಗ ಎಚ್ಚರಿಕೆ ಇರಬೇಕು. ಆಧಾರಸಹಿತವಾಗಿರಬೇಕು. ಕೇಳಿದ ತಕ್ಷಣ ನ್ಯಾಯಕೊಡಿಸಲು ಅಂಗಡಿಯಲ್ಲಿ ಮಾರಾಟವಾಗುವ ಸಲಕರಣೆಯಲ್ಲ, ಅನ್ಯಾಯವಾಗಿದ್ದರೆ ಹೋರಾಟದ ಮೂಲಕ ನ್ಯಾಯಪಡೆದುಕೊಳ್ಳಬೇಕಾಗುತ್ತದೆ ಎಂಬ ಸಾಮಾನ್ಯ ತಿಳುವಳಿಕೆ ಇರಬೇಕಾಗುತ್ತದೆ ಎಂದು ಹೇಳಿದರು.

ರೈತ ಸಂಘಟನೆ ಯಾರಹಣ, ಯಾರ ಪ್ರಾಯೋಜಕತ್ವದಲ್ಲಿ ನಡೆಯುವ ಸಂಘಟನೆಯಲ್ಲ, ನಿಮ್ಮ ಮರ್ಜಿಗೆ ಕುಣಿಯಲು ಸಂಘದ ಕಾರ್ಯಕರ್ತರು ನಿಮ್ಮ ಮನೆಯ ಆಳುಗಳಲ್ಲ, ಸಮಸ್ಯೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳಿಗಾಗಿ ಜಿಲ್ಲಾಧಿಕಾರಿ ಕಚೇರಿ,ಅರಣ್ಯ ಇಲಾಖೆ,ಮಾಲಿನ್ಯ ನಿಯಂತ್ರಣ ಮಂಡಳಿ,ಭೂ ವಿಜ್ಞಾನ ಇಲಾಖೆಗಳಿಗೆ ರೈತ ಸಂಘ ಪತ್ರ ಬರೆದು ಉತ್ತರಕ್ಕಾಗಿ ಕಾಯುತ್ತಿದೆ. ಗಣಿಗಾರಿಕೆ ನಡೆಯುತ್ತಿರುವ ಸ್ಥಳದಿಂದಲೇ ಹೋರಾಟಕ್ಕೆ ಚಾಲನೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿತ್ತು ಅಷ್ಟರೊಳಗೆ ಮಹಿಳೆ ರೈತ ಸಂಘದ ಮೇಲೆ ಆರೋಪಮಾಡಿರುವುದು ಸರಿಯಲ್ಲವೆಂದು ತಿಳಿಸಿದರು.

ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮಪಂಚಾಯಿತಿ ಸದಸ್ಯರು, ಗ್ರಾಮಸ್ಥರನ್ನು ಸಂಪರ್ಕಿಸುವಂತೆ ಮಹಿಳೆಯ ಪತಿಗೆ ತಿಳಿಸಿದ್ದು, ಸರಿಯಾಗಿ ಸ್ಪಂದಿಸಲಿಲ್ಲ,ದಲಿತ ಸಂಘಟನೆಯೊಂದಿಗೆ ಮರ್ಲೆ ಕೊಲ್ಲಾಪುರದಮ್ಮನ ದೇವಾಲಯದಿಂದ ಪಾದಯಾತ್ರೆನಡೆಸಿ ಸಮಸ್ಯೆಯ ಗಂಭೀರತೆಯನ್ನು ಸಂಬಂಧಿಸಿದ ಇಲಾಖೆ ಗಮನ ಸೆಳೆಯಲು ಕಾರ್ಯಕ್ರಮ ರೂಪಿಸಲು ಚರ್ಚಿಸುತ್ತಿರುವಾಗಲೇ ಪಲಾಯನ ಮಾಡಿರುವುದು ಅನುಮಾನಕ್ಕೆ ಎಡೆಮಾಡಿದೆ ಎಂದು ಆರೋಪಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಎಂ.ಬಿ. ಚಂದ್ರಶೇಖರ್, ಜಿಲ್ಲಾಗೌರವಾಧ್ಯಕ್ಷ ಎಂ.ಸಿ.ಬಸವರಾಜ್, ಜಿಲ್ಲಾ ಉಪಾಧ್ಯಕ್ಷ ಡಿ.ಕುಮಾರಸ್ವಾಮಿ, ಮುಖಂಡರಾದ ಪ್ರದೀಪ,. ಎಸ್.ಬಿ.ನಿರಂಜನ ಮೂರ್ತಿ ಇದ್ದರು.

The allegations against the farmers’ association are baseless.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...