ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಮೆಣಸೂರು ರಾವೂರು ಕ್ಯಾಂಪಿನ ಜನ, ಸ್ಮಶಾನವಿಲ್ಲದೇ ಮೃತದೇಹವನ್ನು ತೆಪ್ಪದಲ್ಲಿ ಕೊಂಡೊಯ್ದು ಭದ್ರಾ ಹಿನ್ನೀರಿನ ನಡುಗಡ್ಡೆಯಲ್ಲಿ ಶವಸಂಸ್ಕಾರ ನಡೆಸಿದ್ದಾರೆ.
ರಾವೂರು ಕ್ಯಾಂಪಿನಲ್ಲಿ ಶಿಳ್ಳೆಕ್ಯಾತ ಜನಾಂಗಕ್ಕೆ ಸೇರಿದ 150ಕ್ಕೂ ಹೆಚ್ಚು ಕುಟುಂಬಗಳಿವೆ. ಇಲ್ಲಿ 600ಕ್ಕೂ ಹೆಚ್ಚು ಜನರಿದ್ದಾರೆ. ರಾವೂರಿನ ವ್ಯಕ್ತಿಯೊಬ್ಬರು ಭಾನುವಾರ ಮೃತಪಟ್ಟಿದ್ದರು.
ಅವರ ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲದೆ ಭದ್ರಾ ಹಿನ್ನೀರಿನ ಮಧ್ಯೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಸುಮಾರು 1 ಕಿ.ಮೀ. ನದಿ ಮಧ್ಯೆ ತೆಪ್ಪದಲ್ಲಿ ಕೊಂಡೊಯ್ದು ನದಿ ಮಧ್ಯೆಯ ನಡುಗಡ್ಡೆಯಲ್ಲಿ ಶವಸಂಸ್ಕಾರ ಮಾಡಲಾಗಿದೆ.
ಮೃತದೇಹ ಹೂಳಲು ಗುಂಡಿ ತೆಗೆದಾಗಲೂ ಇಲ್ಲಿ ನೀರು ಬರುತ್ತದೆ. ಆಗ ಗುಂಡಿಯಲ್ಲಿರೋ ನೀರನ್ನ ತೆಗೆದು ಕೆಳಗಡೆ ಸೊಪ್ಪು ಹಾಕಿ ಅಂತ್ಯ ಸಂಸ್ಕಾರ ಮಾಡುತ್ತಾರೆ. ಕೆಲವೊಮ್ಮೆ ಹಿಂದೆ ಮೃತದೇಹ ಅಂತ್ಯಸಂಸ್ಕಾರ ಮಾಡಿದ ಜಾಗದಲ್ಲೇ ಗುಂಡಿ ತೆಗೆದಿರುವಂತಹಾ ಉದಾಹರಣೆಯೂ ಇದೆ. ಮಳೆಗಾಲದಲ್ಲಿ ಭದ್ರಾ ಹಿನ್ನೀರು ಮನೆ ಹಿಂದೆಯೇ ಬರುತ್ತೆ. ಬೇಸಿಗೆಯಲ್ಲಿ ನೀರು ಇರೋದಿಲ್ಲ ಆಗ ಭದ್ರಾ ಹಿನ್ನೀರಿನ ಮಧ್ಯೆಯೇ ಅಂತ್ಯ ಸಂಸ್ಕಾರ ಮಾಡುತ್ತಾರೆ. ಮಳೆಗಾಲದಲ್ಲಿ ಭದ್ರಾ ಹಿನ್ನೀರು ಮನೆಯವರೆಗೂ ಬರುತ್ತದೆ.
ಆಗ ತೆಪ್ಪ ಬಳಸಿ ನಡುಗಡ್ಡೆಗೆ ತೆರಳಿ ಅಂತ್ಯಸಂಸ್ಕಾರ ಮಾಡುತ್ತಾರೆ. ರಾವೂರು ಕ್ಯಾಂಪಿನ ಈ ಸ್ಥಿತಿಗೆ ಎರಡು ದಶಕಗಳ ಇತಿಹಾಸವಿದೆ.
ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...
ByN Raju Chief EditorAugust 9, 2026ಚಿಕ್ಕಮಗಳೂರು: ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...
ByN Raju Chief EditorAugust 9, 2026ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...
ByN Raju Chief EditorAugust 16, 2026ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...
ByN Raju Chief EditorAugust 16, 2026ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...
ByN Raju Chief EditorAugust 15, 2026ಚಿಕ್ಕಮಗಳೂರು: ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...
ByN Raju Chief EditorAugust 15, 2026Excepteur sint occaecat cupidatat non proident
Leave a comment