ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಮೆಣಸೂರು ರಾವೂರು ಕ್ಯಾಂಪಿನ ಜನ, ಸ್ಮಶಾನವಿಲ್ಲದೇ ಮೃತದೇಹವನ್ನು ತೆಪ್ಪದಲ್ಲಿ ಕೊಂಡೊಯ್ದು ಭದ್ರಾ ಹಿನ್ನೀರಿನ ನಡುಗಡ್ಡೆಯಲ್ಲಿ ಶವಸಂಸ್ಕಾರ ನಡೆಸಿದ್ದಾರೆ.
ರಾವೂರು ಕ್ಯಾಂಪಿನಲ್ಲಿ ಶಿಳ್ಳೆಕ್ಯಾತ ಜನಾಂಗಕ್ಕೆ ಸೇರಿದ 150ಕ್ಕೂ ಹೆಚ್ಚು ಕುಟುಂಬಗಳಿವೆ. ಇಲ್ಲಿ 600ಕ್ಕೂ ಹೆಚ್ಚು ಜನರಿದ್ದಾರೆ. ರಾವೂರಿನ ವ್ಯಕ್ತಿಯೊಬ್ಬರು ಭಾನುವಾರ ಮೃತಪಟ್ಟಿದ್ದರು.
ಅವರ ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲದೆ ಭದ್ರಾ ಹಿನ್ನೀರಿನ ಮಧ್ಯೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಸುಮಾರು 1 ಕಿ.ಮೀ. ನದಿ ಮಧ್ಯೆ ತೆಪ್ಪದಲ್ಲಿ ಕೊಂಡೊಯ್ದು ನದಿ ಮಧ್ಯೆಯ ನಡುಗಡ್ಡೆಯಲ್ಲಿ ಶವಸಂಸ್ಕಾರ ಮಾಡಲಾಗಿದೆ.
ಮೃತದೇಹ ಹೂಳಲು ಗುಂಡಿ ತೆಗೆದಾಗಲೂ ಇಲ್ಲಿ ನೀರು ಬರುತ್ತದೆ. ಆಗ ಗುಂಡಿಯಲ್ಲಿರೋ ನೀರನ್ನ ತೆಗೆದು ಕೆಳಗಡೆ ಸೊಪ್ಪು ಹಾಕಿ ಅಂತ್ಯ ಸಂಸ್ಕಾರ ಮಾಡುತ್ತಾರೆ. ಕೆಲವೊಮ್ಮೆ ಹಿಂದೆ ಮೃತದೇಹ ಅಂತ್ಯಸಂಸ್ಕಾರ ಮಾಡಿದ ಜಾಗದಲ್ಲೇ ಗುಂಡಿ ತೆಗೆದಿರುವಂತಹಾ ಉದಾಹರಣೆಯೂ ಇದೆ. ಮಳೆಗಾಲದಲ್ಲಿ ಭದ್ರಾ ಹಿನ್ನೀರು ಮನೆ ಹಿಂದೆಯೇ ಬರುತ್ತೆ. ಬೇಸಿಗೆಯಲ್ಲಿ ನೀರು ಇರೋದಿಲ್ಲ ಆಗ ಭದ್ರಾ ಹಿನ್ನೀರಿನ ಮಧ್ಯೆಯೇ ಅಂತ್ಯ ಸಂಸ್ಕಾರ ಮಾಡುತ್ತಾರೆ. ಮಳೆಗಾಲದಲ್ಲಿ ಭದ್ರಾ ಹಿನ್ನೀರು ಮನೆಯವರೆಗೂ ಬರುತ್ತದೆ.
ಆಗ ತೆಪ್ಪ ಬಳಸಿ ನಡುಗಡ್ಡೆಗೆ ತೆರಳಿ ಅಂತ್ಯಸಂಸ್ಕಾರ ಮಾಡುತ್ತಾರೆ. ರಾವೂರು ಕ್ಯಾಂಪಿನ ಈ ಸ್ಥಿತಿಗೆ ಎರಡು ದಶಕಗಳ ಇತಿಹಾಸವಿದೆ.
ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...
ByN Raju Chief EditorJune 23, 2026ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...
ByN Raju Chief EditorJune 22, 2026ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್ನಲ್ಲಿ...
ByN Raju Chief EditorJune 30, 2026ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...
ByN Raju Chief EditorJune 30, 2026ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...
ByN Raju Chief EditorJune 30, 2026ಚಿಕ್ಕಮಗಳೂರು: ರ್ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...
ByN Raju Chief EditorJune 29, 2026Excepteur sint occaecat cupidatat non proident
Leave a comment