Home namma chikmagalur chikamagalur ಕಾರ್ಮಿಕ ವರ್ಗಕ್ಕೆ ಕೇಂದ್ರ ಸರ್ಕಾರ ಅನ್ಯಾಯ
chikamagalurHomeLatest Newsnamma chikmagalur

ಕಾರ್ಮಿಕ ವರ್ಗಕ್ಕೆ ಕೇಂದ್ರ ಸರ್ಕಾರ ಅನ್ಯಾಯ

Share
Share

ಚಿಕ್ಕಮಗಳೂರು:  ಸಮಸ್ತ ಕಾರ್ಮಿಕ ವರ್ಗಕ್ಕೆ ವಿರೋಧಿ ಕಾಯ್ದೆ ಅನುಷ್ಟಾನಗೊಳಿಸಲು ಮುಂದಾಗುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಫೆ.೧೨ ರಂದು ಜಿಲ್ಲೆಯಲ್ಲಿ ಬೃಹತ್ ಪ್ರತಿ ಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ಲಾಂಟೇಷನ್ ವರ್ಕರ್‍ಸ್ ಯೂನಿಯನ್ಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮ ರಾಜ್ ಹೇಳಿದರು.

ನಗರದ ತಮಿಳು ಕಾಲೋನಿಯಲ್ಲಿ ಜಿಲ್ಲಾ ಪ್ಲಾಂಟೇಷನ್ ವರ್ಕರ್‍ಸ್ ಯೂನಿಯನ್ಸ್ ವತಿಯಿಂದ ಗುರು ವಾರ ಆಯೋಜಿಸಿದ್ಧ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರದ ಕಾರ್ಮಿಕ ವಿರೋಧಿ ನಡೆಯನ್ನು ಖಂಡಿಸಿ ಪ್ಲಾಂಟೇಷನ್ ವರ್ಕರ್‍ಸ್, ರೈತ ಸಂಘ ಸೇರಿದಂ ತೆ ಸುಮಾರು ೧೦ಕ್ಕೂ ಹೆಚ್ಚು ಸಂಘಟನೆಗಳ ನೇತೃತ್ವದಲ್ಲಿ ಆಯಾ ತಾಲ್ಲೂಕಿನ ಕೇಂದ್ರ ಸರ್ಕಾರದ ಕಚೇರಿ ಮುಚ್ಚಿಸುವ ಮೂಲಕ ಕಾರ್ಮಿಕ ವರ್ಗವು ದೊಡ್ಡ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದರು.

ಕಾರ್ಮಿಕರಿಗೆ ಅನುಕೂಲವಾಗಲು ಮೊದಲು ಕಾಯ್ದೆಗಳು ಅನುಕೂಲವಿತ್ತು. ಇದೀಗ ಕಾರ್ಮಿಕ ಕಾ ಯ್ದೆಯಲ್ಲಿ ನಾಲ್ಕು ಕೋರ್ಡ್‌ಗಳನ್ನು ರಚಿಸುವ ಮೂಲಕ ಕಾರ್ಮಿಕರ ಸವಲತ್ತಿಗೆ ಕತ್ತರಿ ಹಾಕುವ ಕೆಲಸ ಕೇ ಂದ್ರ ಮಾಡುತ್ತಿದೆ. ಇದು ದೇಶದ ಬಹುತೇಕ ಕಾರ್ಮಿಕರಿಗೆ ಪೆಟ್ಟು ಬೀಳಲಿದೆ ಎಂದು ಹೇಳಿದರು.

ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗದ ತೋಟದ ಕಾರ್ಮಿಕರಿಗೆ ಆರೋಗ್ಯ ಸಮ ಸ್ಯೆ ಕಂಡುಬಂದಲ್ಲಿ ತೋಟದ ಮಾಲೀಕರೇ ನಿರ್ವಹಿಸುತ್ತಿದ್ದರು. ಈ ಹೊಸ ಕಾಯ್ದೆಯಿಂದ ಇಎಸ್‌ಐ ಮಾ ಡಿಸಬೇಕು. ಎಲ್ಲಿ ವೈದ್ಯಕೀಯ ಸೇವೆ ಲಭ್ಯವಿದೆ ಅಲ್ಲಿಯೇ ತೆರಳಿ ಚಿಕಿತ್ಸೆ ಕೊಡಿಸಬೇಕಿದೆ. ತೋಟ ಮಾಲೀಕ ರು ಒಮ್ಮೆ ಇಎಸೈ ಹಣ ಪಾವತಿಸಿ ಸುಮ್ಮನಾಗುತ್ತಾರೆ ಎಂದರು.

ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆ ತಂದೊಡ್ಡುವ ಮೂಲಕ ಕಾರ್ಪೋರೇಟ್ ಕಂಪನಿಗೆ ಲಾಭ ಮಾ ಡಿಕೊಡುತ್ತಿದೆ. ತಳಮಟ್ಟದ ಸಂಬಳವೆಂದರೆ ಕನಿಷ್ಟ ೧೭೦ ರೂ.ಗಳಿಗೆ ತಂದಿಳಿಸುವ ಕೆಲಸ ಮಾಡುತ್ತಿದೆ. ಪ್ರಸ್ತುತ ಒಂದು ಕುಟುಂಬವು ಪ್ರತಿದಿನ ಕನಿಷ್ಟ ೭೦೦-೮೦೦ ದುಡಿಯುವ ಅವಶ್ಯಕತೆಯಿದ್ದು, ಈಗಾಗಲೇ ಕಾರ್ಮಿಕರು ಕೇವಲ ೫೦೦ ರೂ. ಹಂತದಲ್ಲಿದ್ದು ಬಾಕಿ ಹಣ ಸಾಲ ಮಾಡಬೇಕಿದೆ ಎಂದು ಹೇಳಿದರು.

ಒಟ್ಟಾರೆ ಕಾರ್ಮಿಕರ ವಿರೋಧಿ ಕಾಯ್ದೆ ಸಂಬಂಧ ಯೂನಿಯನ್ ಹಾಗೂ ತೋಟದ ಮಾಲೀಕರೊ ಂದಿಗೆ ಚರ್ಚೆ ನಡೆಯುತ್ತಿದೆ. ಈ ರೀತಿಯ ಕಾರ್ಮಿಕ ವಿರೋಧಿ ಕಾಯ್ದೆಗೆ ಮನ್ನಣೆ ನೀಡದಂತೆ ಒತ್ತಾಯಿಸ ಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಯೂನಿಯನ್ ಜಿಲ್ಲಾ ಕಾರ್ಯದರ್ಶಿ ಜಿ.ರಮೇಶ್, ವಿಭಾಗೀಯ ಅಧ್ಯಕ್ಷ ಡೊಂಗ್ರೆ, ಹಾಸನ ಕಾರ್ಯದರ್ಶಿ ಬಸವರಾಜ್, ಸಕಲೇಶಪುರ ಕಾರ್ಯದರ್ಶಿ ಹರೀಶ್, ಸಿಪಿಐ ಮು ಖಂಡರಾದ ರಾಧಾಸುಂದ್ರೇಶ್ ಉಪಸ್ಥಿತರಿದ್ದರು.

The central government is unfair to the working class.

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...