ಚಿಕ್ಕಮಗಳೂರು: ಗ್ರಾಮೀಣ ಭಾಗದಲ್ಲಿಯೂ ಉತ್ತಮ ರಸ್ತೆಗಳನ್ನು ನಿರ್ಮಾಣ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಜೊತೆಗೆ ಮಲೆನಾಡು ಭಾಗದ ರಸ್ತೆಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿತಿಳಿಸಿದರು.
ಮೂಡಿಗೆರೆ ತಾಲೂಕಿನ ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಳೆಗಾಲ ಆರಂಭಕ್ಕೂ ಮೊದಲೇ ಈ ಭಾಗದಲ್ಲಿ ರಸ್ತೆಗಳು ಹಾಳಾಗಿದ್ದವು. ಇದೀಗ ಮಳೆಯಿಂದ ಇನ್ನಷ್ಟು ಹಾನಿಯಾಗಿದೆ. ಈ ರಸ್ತೆಗಳನ್ನು ದುರಸ್ತಿ ಮಾಡುವುದೇ ಸವಾಲಿನ ಕೆಲಸ ಎಂದರು,
ಗುತ್ತಿಗೆದಾರರಿಗೆ ಹಣ ಪಾವತಿ ವಿಳಂಬವಾಗುವುದು ಹೊಸದೇನಲ್ಲ. ಇಂದು ಮಾಡಿದ ಕಾಮಗಾರಿಗಳಿಗೆ ಒಂದು ವರ್ಷದ ಬಳಿಕ ಹಣ ಪಾವತಿಯಾಗುತ್ತದೆ. ಇದು ಯಾವುದೇ ಸರ್ಕಾರ ಬಂದರೂ ಹಾಗೆಯೇ ಇರುತ್ತದೆ. ಆದರೆ ಕೆಲಸ ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದರು.
ಚರಂಡಿ ಮೂಲಕ ನೀರು ಹರಿಯದೇ ಇದ್ದರೆ ರಸ್ತೆಗಳು ಬಾಳಿಕೆ ಬರಲು ಸಾಧ್ಯವಿಲ್ಲ, ಹೀಗಾಗಿ ಕೂಡಲೇ ರಸ್ತೆ ಪಕ್ಕದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಮಳೆ ಆಚಾನಕ್ ಆಗಿ ಬಂದಿದೆ. ಹದಿನೈದು ದಿನ ಬೇಗನೇ ಮಳೆ ಆರಂಭಗೊಂಡಿದೆ. ಹೀಗಾಗಿ ರಸ್ತೆ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದೆ. ಮಳೆಗಾಲದಲ್ಲಿ ರಸ್ತೆ ಕಾಮಗಾರಿ ಮಾಡಿದರೆ ರಸ್ತೆಗಳು ಬಾಳಿಕೆ ಬರುವುದಿಲ್ಲ, ಹೀಗಾಗಿ ನವೆಂಬರ್ ಬಳಿಕ ಹೊಸ ರಸ್ತೆ ಕಾಮಗಾರಿ ಆರಂಭಿಸುವುದಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ನಯನಾ ಮೋಟಮ್ಮ, ಟಿ.ಡಿ.ರಾಜೇಗೌಡ ಮತ್ತಿತರರಿದ್ದರು.
The challenge is to repair roads damaged by rain.
Leave a comment