Home namma chikmagalur chikamagalur ಸಂವಿಧಾನದ ಆಶಯ ಕಗ್ಗೊಲೆ ಮಾಡುತ್ತಿರುವ ಸಿಎಂ
chikamagalurHomeLatest Newsnamma chikmagalur

ಸಂವಿಧಾನದ ಆಶಯ ಕಗ್ಗೊಲೆ ಮಾಡುತ್ತಿರುವ ಸಿಎಂ

Share
Oplus_16908288
Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ವೋಟು ಡಕಾಯಿತಿ ಆಗಿದೆ ಎಂಬ ಪದ ಬಳಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯ ಘನತೆಯನ್ನು ತಗ್ಗಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ತರುವುದರ ಜೊತೆಗೆ ಸಂವಿಧಾನದ ಆಶಯಗಳನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಬದ್ಧವಾದ ವ್ಯವಸ್ಥೆಯಲ್ಲಿ ಜಿಲ್ಲಾಡಳಿತ ಪೊಲೀಸ್ ಇಲಾಖೆ ಚುನಾವಣಾ ಆಯೋಗ ಮತ್ತು ನ್ಯಾಯಾಂಗ ವ್ಯವಸ್ಥೆಗಳ ಮೂಲಕ ಡಿ.ಎನ್. ಜೀವರಾಜ್ ಶಾಸಕರಾಗಿದ್ದಾರೆ. ಆದರೆ ಕಾಂಗ್ರೆಸ್ ಕಾರ್ಯಕರ್ತರು ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿರುವುದನ್ನು ಪ್ರಶ್ನಿಸಿ, ಜೀವರಾಜ್ ಅವರು ಹೈಕೋರ್ಟ್ ಮೊರೆ ಹೋಗಿ ಹೋರಾಟ ನಡೆಸಿದ್ದಾರೆ. ಜೀವರಾಜ್ ಅವರ ನಿರಂತರ ಹೋರಾಟದ ಫಲವಾಗಿ ನ್ಯಾಯಾಲಯ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ನಡೆಸಿದ್ದ ಅಕ್ರಮ ಬಯಲಾಗಿದೆ. ಹೀಗಾಗಿ ತಮ್ಮ ಅಕ್ರಮ ಮುಚ್ಚಿ ಹಾಕಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷದಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗಾಗಿ ಎರಡು ಬಾರಿ ಮನವಿ ಮಾಡಿದರು ಸರ್ಕಾರ ಏಕೆ ಅನುಮತಿ ಕೊಡಲಿಲ್ಲ ಎಂದು ಪ್ರಶ್ನಿಸಿದ ಅವರು, ಸರ್ಕಾರ ನಿಮ್ಮ ಕೈಯಲ್ಲಿದ್ದರೂ ಇಂದು ಬಿಜೆಪಿ ವಿರುದ್ಧ ಆರೋಪ ಹೊರಸಿ ಕಾಂಗ್ರೆಸ್ ಮುಖಂಡರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ನಂತರ ಶೃಂಗೇರಿ ವಿಧಾ‌ನಸಭಾ ಕ್ಷೇತ್ರದ ಅಂಚೆ‌ ಮತಗಳ ಎಣಿಕೆ ವೇಳೆ 170 ತಿದ್ದಿರುವ ಮತಗಳ ಕಟ್ಟನ್ನು ರಾಜೇಗೌಡರ ಬಾಕ್ಸ್ ನಲ್ಲಿ ಏಕೆ ಹಾಕಿರಬಾರದು?. ಮೂರು ವರ್ಷದಿಂದಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರೂ ಈಗ ಕಾಂಗ್ರೆಸ್ಸಿಗರು ತನಿಖೆಯ ನಾಟಕವಾಡುತ್ತಿದ್ದಾರೆ. ನೀವು ಯಾವ ತನಿಖೆ ಮಾಡಿದರೂ ನಾವು ಸಿದ್ಧರಿದ್ದೇವೆ. ಸತ್ಯ ಎಂದಿದ್ದರೂ ಸತ್ಯವಾಗಿಯೇ ಇರುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಕುರುವಂಗಿ ವೆಂಕಟೇಶ್, ನರೇಂದ್ರ, ಈಶ್ವರಹಳ್ಳಿ ಮಹೇಶ್ ಮತ್ತಿತರರಿದ್ದರು.

The CM is killing the spirit of the Constitution.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...