Home namma chikmagalur chikamagalur ಷಡ್ಯಂತರದಿಂದ ಚುನಾವಣೆಯಲ್ಲಿ ಸೂಲು ಅನುಭವಿಸುವಂತಾಯಿತು
chikamagalurHomeLatest Newsnamma chikmagalur

ಷಡ್ಯಂತರದಿಂದ ಚುನಾವಣೆಯಲ್ಲಿ ಸೂಲು ಅನುಭವಿಸುವಂತಾಯಿತು

Share
Share

ಮೂಡಿಗೆರೆ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮತದಾರರು ಕೈಗೊಂಡ ನಿರ್ಣಯಕ್ಕೆ ತಲೆ ಬಾಗುತ್ತೇನೆ. ಆದರೆ ತನ್ನ ಗೆಲುವಿಗೆ ವ್ಯವಸ್ಥಿತ ಷಡ್ಯಂತರ ನಡೆದಿದ್ದರಿಂದ ಸೋಲು ಅನುಭವಿಸುಂತಾಯಿತು ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗಾಗಿ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಎಂಎಲ್‌ಸಿ ಸಿ.ಟಿ.ರವಿ ಸೇರಿದಂತೆ ಎನ್‌ಡಿಎ ಮುಖಂಡರು ಮತ್ತು ಕಾರ್ಯಕರ್ತರು ಕೆಲಸ ಮಾಡಿರುವುದು ಸರ್ವೆ ಸಾಮಾನ್ಯ ಎಂದರು.

ಆದರೆ ಸಹಕಾರ ಸಂಘದಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಸಂಖ್ಯೆ ಕಡಿಮೆ ಇದೆ. ಆದರೂ ಕಾಂಗ್ರೆಸ್‌ನ ಎಲ್ಲಾ ಎಂಎಲ್‌ಎ ಹಾಗೂ ಮುಖಂಡರು ಕೂಡ ಗೆಲುವಿಗಾಗಿ ಶ್ರಮಿಸಿದ್ದರೂ, ಚುನಾವಣೆಯನ್ನು ಇನ್ನಷ್ಟು ಗಂಭೀರವಾಗಿ ತೆಗೆದುಕೊಂಡಿದ್ದರೆ ಗೆಲುವು ಸಾಧ್ಯವಾಗುತ್ತಿತ್ತು ಎಂದು ಹೇಳಿದರು.

ಇಂತಹ ಚುನಾವಣೆಯಲ್ಲಿ ರಾಜಕೀಯ ಮುಖಂಡರು ಪಾಲ್ಗೊಂಡಿರುವ ಬಗ್ಗೆ ತಾನು ಪ್ರತಿಕ್ರಿಯೆ ನೀಡುವುದಿಲ್ಲ. ಇದಕ್ಕೆ ಉತ್ತರ ಅವರಿಂದಲೇ ಪಡೆಯಿರಿ. ತಾನು ಎಲ್ಲರಿಗೂ ಚಿರಪರಿಚಿತನಾಗಿದ್ದೇನೆ.

ರೈತರ ಪರವಾಗಿ ಕಾಳಜಿ ಇಟ್ಟುಕೊಂಡು ವಿಧಾನಸೌಧದ ಮುಂದೆ ಧರಣಿ ಕುಳಿತಿದ್ದೆ. ಹಾಗಾಗಿ ಮಲೆನಾಡು, ಬಯಲುಸೀಮೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಚುನಾವಣೆ ಸ್ಪರ್ಧಿಸಿದ್ದೆ. ಆದರೆ ಲೋಕಪ್ಪಗೌಡ ಎಂಬುವರು ಮತದಾರರ ದಿಕ್ಕು ತಪ್ಪಿಸಿದ್ದ ಕಾರಣ ತನಗೆ ಸೋಲು ಉಂಟಾಗಿದೆ ಎಂದು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಹಕಾರಿ ಸಂಘಗಳ ಚುನಾವಣೆಗೆ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತರಿಗೆ ಅವಕಾಶ ಸಿಗುವಂತೆ ಸದನದಲ್ಲಿ ಮಂಡನೆಯಾಗಿರುವುದಕ್ಕೆ ರಾಜ್ಯಪಾಲರು ಸಹಿ ಹಾಕಬೇಕೆಂದು ಒತ್ತಾಯಿಸಿದರು.

The conspiracy led to the election being lost.

 

 

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...