Home namma chikmagalur chikamagalur ರಾಣಿ ಝರಿ ಪ್ರವಾಸಿ ತಾಣದಲ್ಲಿ ರೀಲ್ಸ್ ಮಾಡುವ ಹುಚ್ಚಾಟ
chikamagalurHomeLatest Newsnamma chikmagalur

ರಾಣಿ ಝರಿ ಪ್ರವಾಸಿ ತಾಣದಲ್ಲಿ ರೀಲ್ಸ್ ಮಾಡುವ ಹುಚ್ಚಾಟ

Share
Share

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಪ್ರವಾಸಿಗರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ರಾಣಿ ಝರಿ ಪ್ರವಾಸಿ ತಾಣದಲ್ಲಿ ನಡೆದಿದೆ.

ಸುಂಕಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಣಿ ಝರಿ ವ್ಯೂ ಪಾಯಿಂಟ್‌ನಲ್ಲಿ ಬೆಂಗಳೂರು ಮೂಲದ ಪ್ರವಾಸಿಗರು ಸುಮಾರು 3,000 ಅಡಿ ಆಳದ ಪ್ರಪಾತದ ಅಂಚಿನವರೆಗೂ ಕಾರು ಚಲಾಯಿಸಿಕೊಂಡು ಹೋಗಿದ್ದು, ಪ್ರಪಾತದ ಬಾಯಿಗೆ ಬಂದು ನಿಂತ ಕಾರಿನ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ರೀಲ್ಸ್‌ಗಾಗಿ ಪ್ರವಾಸಿಗರು ಅಪಾಯಕಾರಿ ಡೇರ್‌ಡೆವಿಲ್ ಸ್ಟಂಟ್ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕೃತಿಯ ಸೌಂದರ್ಯ ಸವಿಯುವ ನೆಪದಲ್ಲಿ ಪ್ರವಾಸಿಗರು ತಮ್ಮ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಕಳಸ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ KA-01-MX-2647 ನೋಂದಣಿ ಸಂಖ್ಯೆಯ ಕಾರನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಲಾಗಿದೆ.

ಪ್ರವಾಸಿ ತಾಣಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ಅಪಾಯಕಾರಿ ಸಾಹಸ ಮಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರಿಗೆ ಎಚ್ಚರಿಕೆ ನೀಡಿದ್ದಾರೆ. ಪ್ರವಾಸ ಎಂದರೆ ಹುಚ್ಚಾಟವಲ್ಲ. ತಮ್ಮ ಹಾಗೂ ಇತರರ ಸುರಕ್ಷತೆಗೆ ಆದ್ಯತೆ ನೀಡಿ, ಪ್ರವಾಸಿ ತಾಣಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಕೆಲವೇ ಕ್ಷಣಗಳ ರೀಲ್ಸ್‌ಗಾಗಿ ಜೀವವನ್ನೇ ಅಪಾಯಕ್ಕೆ ಸಿಲುಕಿಸುವ ಸಾಹಸಗಳಿಗೆ ಮುಂದಾಗದಂತೆ ಅಧಿಕಾರಿಗಳು ಎಚ್ಚರಿಸಿದ್ದಾರೆ. ಪ್ರವಾಸಿಗರ ಇಂತಹ ನಿರ್ಲಕ್ಷ್ಯದ ವರ್ತನೆಗೆ ಕಡಿವಾಣ ಹಾಕಲು ಪ್ರವಾಸಿ ತಾಣಗಳಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ.

The craze of making reels at the Rani Zari tourist spot

Share

Leave a comment

Leave a Reply

Your email address will not be published. Required fields are marked *

Don't Miss

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು....

Related Articles

ESA ಕರಡು ಅಧಿಸೂಚನೆ: ಭೌತಿಕ ಸರ್ವೆ ಬಳಿಕವೇ ಅಂತಿಮ ಅಧಿಸೂಚನೆಗೆ ಒತ್ತಾಯ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತ 7ನೇ ಕರಡು ಅಧಿಸೂಚನೆಯಲ್ಲಿ ಚಿಕ್ಕಮಗಳೂರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿ.ಪಿ.ಐ. ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನ ರಹಿತ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಒದಗಿಸುವುದು, ಎಸ್‌ಐಆರ್‌ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವುದು...

ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ

ಕಡೂರು : ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ...

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು...