Home namma chikmagalur ಶ್ರೀ ಗುರು ದತ್ತಾತ್ರೇಯ ಪೀಠದ ವ್ಯಾಜ್ಯ – ಹಿಂದೂ–ಮುಸ್ಲಿಮರ ನಡುವೆ ಅಲ್ಲ
namma chikmagalurchikamagalurHomeLatest News

ಶ್ರೀ ಗುರು ದತ್ತಾತ್ರೇಯ ಪೀಠದ ವ್ಯಾಜ್ಯ – ಹಿಂದೂ–ಮುಸ್ಲಿಮರ ನಡುವೆ ಅಲ್ಲ

Share
????????????????????????????????????
Share

ಚಿಕ್ಕಮಗಳೂರು: ‘ಶ್ರೀ ಗುರುದತ್ತಾತ್ರೇಯ ಪೀಠದ ವ್ಯಾಜ್ಯ ಇರುವುದು ಶಾಖಾದ್ರಿ ವಂಶಸ್ಥರಿಗೂ ಹಾಗೂ ದತ್ತಪೀಠ ಸಂವರ್ಧನಾ ಸಮಿತಿಯ ನಡುವೆ. ಹಿಂದೂ–ಮುಸ್ಲಿಮರ ನಡುವೆ ಅಲ್ಲ’ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ರಂಗನಾಥ ತಿಳಿಸಿದರು.

ಇನಾಂ ದತ್ತಾತ್ರೇಯ ಪೀಠದ ಒಟ್ಟು ಆಸ್ತಿ 1861 ಎಕರೆ ಇದ್ದು, ಹಿಂದೆ ಇದ್ದ ಗೌಸ್ ಮೊಹಿದ್ದೀನ್ ಶಾಖಾದ್ರಿ ಹಾಗೂ ಪೀರ್ ಮೊಹಿದ್ದೀನ್ ಶಾಖಾದ್ರಿ ಈ ಆಸ್ತಿಯಲ್ಲಿ ಸಾಕಷ್ಟು ಪರಭಾರೆ ಮಾಡಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದತ್ತಪೀಠವು ಮತ್ತು ಬಾಬಾಬುಡನ್ ದರ್ಗಾವು ಬೇರೆ ಬೇರೆ ಕಡೆ ಇರುವುದರಿಂದ ದತ್ತಪೀಠಕ್ಕೂ ಬಾಬಾಬುಡನ್‌ ದರ್ಗಾಕ್ಕೂ ಯಾವುದೇ ಸಂಬಂಧ ಇಲ್ಲ. ಬಾಬಾಬುಡನ್ ದರ್ಗಾ ಚಿಕ್ಕಮಗಳೂರು ತಾಲ್ಲೂಕು, ಜಾಗರ ಹೋಬಳಿ, ನಾಗೇನಹಳ್ಳಿ ಗ್ರಾಮದ ಸರ್ವೆ ನಂಬರ್– 57ರಲ್ಲಿ 111 ಎಕರೆ ಇದೆ.

ಈ ಆಸ್ತಿಗಳಲ್ಲಿ ಅನೇಕ ಆಸ್ತಿಗಳನ್ನು ಶಾ–ಖಾದ್ರಿಗಳು ಮಾರಾಟ ಮಾಡಿದ್ದಾರೆ ಎಂದು ದೂರಿದರು. ಡಿ.4 ರಂದು ದತ್ತಜಯಂತಿ ನಡೆಸಲಾಗುತ್ತಿದೆ. ಡಿ.2 ರಂದು ಅನುಸೂಯದೇವಿ ಅವರ ಪೂಜೆ ಹಾಗೂ ಸಂಕೀರ್ತನಾ ಯಾತ್ರೆ ನಡೆಯಲಿದೆ. ಡಿ.3 ರಂದು ನಗರದಲ್ಲಿ ಶೋಭಾಯಾತ್ರೆ ನಡೆಯುತ್ತದೆ.

ಡಿ.4 ರಂದು ದತ್ತಪೀಠದಲ್ಲಿ ದತ್ತಹೋಮ, ಪಾದುಕೆ ಪೂಜೆ, ಔದುಂಬರ ವೃಕ್ಷದ ಪೂಜೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿಶ್ವಹಿಂದೂ ಪರಿಷದ್ ಉಪಾಧ್ಯಕ್ಷ ಯೋಗರಾಜ್ ಅರಸ್, ಮಠ ಮಂದಿರಗಳ ಪ್ರಮುಖ್ ಶಿವಣ್ಣ, ಪುಷ್ಪ, ನಯನ್, ಸುನೀಲ್ ಉಪಸ್ಥಿತರಿದ್ದರು.

The dispute over the Sri Guru Dattatreya Peetha – not between Hindus and Muslims

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...