Home namma chikmagalur ಅತಿಥಿ ನಟರಂತೆ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರು
namma chikmagalurchikamagalurHomeLatest News

ಅತಿಥಿ ನಟರಂತೆ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರು

Share
Share

ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರೀಯ ಹಬ್ಬಗಳಿಗೆ ಬಂದು ಧ್ವಜಾರೋಹಣ ಮಾಡಲು ಮಾತ್ರ ಸೀಮಿತರಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹೆಚ್.ಸಿ ಕಲ್ಮರುಡಪ್ಪ ಆರೋಪಿಸಿದರು.

ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈವರೆಗೆ ಆಶ್ರಯ ಮನೆ ಯೋಜನೆಯಡಿ ಬಸವ ವಸತಿ, ಡಾ. ಬಿ.ಆರ್. ಅಂಬೇಡ್ಕರ್ ಯೋಜನೆಯಡಿ ಇದೂವರೆಗೂ ಒಂದೂ ಮನೆ ನೀಡಿಲ್ಲ. ಜಿಲ್ಲೆಯ ಐದೂ ಶಾಸಕರು ಈ ಕುರಿತು ಧ್ವನಿ ಎತ್ತುತ್ತಿಲ್ಲ ಎಂದು ದೂರಿದರು.

ಬಡವರಿಗೆ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡನ್ನು ವಿತರಿಸದ ಕಾರಣ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರಿ ಸೌಲಭ್ಯ ಪಡೆಯಲು ತೊಂದರೆಯಾಗಿದೆ. ಜೊತೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ದಲಿತರಿಗೆ ಕೊಡುವ ವಿವಿಧ ಇಲಾಖೆಗಳ ಮೂಲಕ ನೀಡಲಾಗುವ ಸೌಲಭ್ಯಗಳನ್ನು ನೀಡಿಲ್ಲ ಎಂದು ಟೀಕಿಸಿದರು.

ಹಿಂದುಳಿದ ವರ್ಗಗಳ ರೈತರಿಗೆ ಅನುಕೂಲವಾಗುವಂತೆ ಕೊಳವೆ ಬಾವಿಯನ್ನು ಕೊರೆಸಿಲ್ಲ. ದಲಿತ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಫಾರಂ ನಂ.೫೦, ೫೩, ೫೭ ಅರ್ಜಿಗಳನ್ನು ವಿಲೇವಾರಿ ಮಾಡದೆ ಒಬ್ಬರಿಗೂ ಭೂಮಂಜುರಾತಿ ನೀಡಿಲ್ಲ ಎಂದು ಆರೋಪಿಸಿದರು.

ಜಿಲ್ಲಾಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಉಪನೊಂದಣಾಧಿಕಾರಿಗಳ ಕಚೇರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ, ಮೆಸ್ಕಾಂ, ಅಬಕಾರಿ ಮುಂತಾದ ಇಲಾಖೆಗಳಲ್ಲಿ ಮಧ್ಯವರ್ತಿಗಳಿಲ್ಲದೆ ಜನಸಾಮಾನ್ಯರಿಗೆ ಯಾವುದೇ ಕೆಲಸಗಳಾಗುತ್ತಿಲ್ಲ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಸಂಘರ್ಷ ಹೆಚ್ಚಾಗಿದ್ದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಅತಿವೃಷ್ಟಿ ಹಾನಿಯಿಂದ ಕಾಫಿ, ಕಾಳುಮೆಣಸು ನೆಲಕಚ್ಚಿದ್ದು, ಬಯಲು ಭಾಗದಲ್ಲಿ ಸಕಾಲದಲ್ಲಿ ಮಳೆಯಾಗದೆ ಬಿತ್ತನೆ ಕಾರ್ಯ ಕುಂಠಿತವಾಗಿದ್ದು, ಸರ್ಕಾರ ಕೂಡಲೇ ರೈತರಿಗೆ ನೆರವು ನೀಡಲು ಧಾವಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ ಮಾತನಾಡಿ, ತಾಂಡಾ, ಗೊಲ್ಲರಟ್ಟಿಗಳಿಗೆ ನ್ಯಾಯಬೆಲೆ ಅಂಗಡಿಗಳನ್ನು ಕಳೆದ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದರೂ ರಾಜ್ಯಸರ್ಕಾರ ಈವರೆಗೆ ನ್ಯಾಯಬೆಲೆ ಅಂಗಡಿಯವರು ನೀಡಿಲ್ಲ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಸಿ.ಹೆಚ್. ಲೋಕೇಶ್, ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್, ಮಾಧ್ಯಮ ಪ್ರಮುಖ್ ದಿನೇಶ್ ಕೋಟೆ, ಮುಖಂಡರಾದ ರಾಜೀವ್, ರೇವನಾಥ್ ಉಪಸ್ಥಿತರಿದ್ದರು.

The district in-charge minister is like a guest actor.

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....