Home namma chikmagalur ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಣೆ ಮಾಡಬೇಕು
namma chikmagalurchikamagalurLatest News

ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಣೆ ಮಾಡಬೇಕು

Share
Share
ಮೂಡಿಗೆರೆ: ಅತಿಯಾದ ಮಳೆಯಿಂದ ಮಲೆನಾಡು ಭಾಗದಲ್ಲಿ ಕಾಫಿ, ಕಾಳುಮೆಣಸು, ಅಡಕೆ ಸೇರಿದಂತೆ ಅನೇಕ ಬೆಳೆ ನಾಶವಾಗಿದೆ. ಇದರಿಂದ ರಾಜ್ಯ ಹಾಗೂ ಕೇಂದ್ರ ಸರಕಾರ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಫ್ ಪರಿಹಾರ ನಿಧಿಯಿಂದ ಕಾಫಿ ಬೆಳೆಗಾರರಿಗೆ ಪರಿಹಾರ ಒದಗಿಸಬೇಕೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಒತ್ತಾಯಿಸಿದರು.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಕಾಫಿಗೆ ಉತ್ತಮ ಬೆಲೆ ಇತ್ತು. ಇದರಿಂದ ಕಾಫಿ ಬೆಳೆಗಾರರಿಗೆ ಅನುಕೂಲವಾಗಿತ್ತು. ಆದರೆ ಈ ಬಾರಿ ಕಳೆದ ೫ ತಿಂಗಳಿಂದ ಬಿಡದೇ ಮಳೆ ಸುರಿಯುತ್ತಿದೆ. ಬೆಳೆ ಉಳಿಸಿಕೊಳ್ಳಲು ರಾಸಾಯನಿಕ ಗೊಬ್ಬರ ಹಾಕಲು ಕೂಡ ಅವಕಾಶ ಸಿಗುತ್ತಿಲ್ಲ. ಕಾಫಿ, ಕಾಳು ಮೆಣಸು, ಅಡಕೆ ಬೆಳೆ ಶಿಲೀಂದ್ರ ರೋಗಕ್ಕೆ ತುತ್ತಾಗಿ ಫಸಲಿಗೆ ಬಂದ ಬೆಳೆ ಕೈಗೆಟುಕದಂತಾಗಿದೆ. ಇದರಿಂದ ಕಾಫಿ ಬೆಳೆಗಾರರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಈಗಾಗಲೇ ಕಾಫಿ ಮಂಡಳಿ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ನಡೆಸಿದ್ದು, ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ತರಿಸಿಕೊಂಡು ಕೂಡಲೇ ಪರಿಹಾರ ನೀಡಲು ಮುಂದಾಗಬೇಕೆಂದು ಆಗ್ರಹಿಸಿದರು.
ಕಾಂಗ್ರೆಸ್ ಹಿರಿಯ ಮುಖಂಡ ಬಿ.ಎಸ್.ಜಯರಾಂಗೌಡ ಮಾತನಾಡಿ, ಸರ್ಫೇಸಿ ಕಾಯಿದೆಯಡಿ ದೇಶದಲ್ಲಿ ೨೮೦೦ ರೈತರು ಸಿಲುಕಿದ್ದಾರೆ. ಅದರಲ್ಲಿ ಹೆಚ್ಚಾಗಿ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಡದೇ ಸುರಿಯುತ್ತಿರುವ ಮಳೆಯಿಂದ ಸರ್ಪೇಸಿ ಕಾಯಿದೆಯೊಳಪಟ್ಟ ರೈತರು ಸಾಲ ತೀರಿಸಲು ತೊಂದರೆ ಎದುರಾಗಿದೆ. ಈ ಬಗ್ಗೆ ಹಾಸನ, ಮೈಸೂರು, ಚಿಕ್ಕಮಗಳೂರು ವ್ಯಾಪ್ತಿಯ ಎಲ್ಲಾ ಶಾಸಕರು ಹಾಗೂ ಸಂಸದರೊಂದಗೆ ಚರ್ಚಿಸಿದ್ದು, ಅವರು ರೈತರ ನೆರವಿಗೆ ಮುಂದಾಗಿದ್ದಾರೆ.  ಮುಖ್ಯವಾಗಿ ಈಗ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪರಿಹಾರದ ಹಣ ಸಿಗುವಂತೆ ಹಾಗೂ ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಿಸಲು ಎಲ್ಲಾ ಶಾಸಕರು ಹಾಗೂ ಸಂಸದರು ಸರಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ, ಜಿಲ್ಲಾ ವಕ್ತಾರ ಎಂ.ಎಸ್.ಅನಂತ್, ಮುಖಂಡರಾದ ಶಿವಣ್ಣ, ಪ್ರಸನ್ನ ಉಪಸ್ಥಿತರಿದ್ದರು.
The district should be declared a heavy rainfall area.
Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...