Home namma chikmagalur chikamagalur ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ
chikamagalurHomeLatest Newsnamma chikmagalur

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

Share
Share

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ.

ಮಧ್ಯರಾತ್ರಿ 1ಗಂಟೆ ಸುಮಾರಿಗೆ ಮಳೆ ಆರಂಭವಾಯಿತು. ಮಳೆಗಿಂತ ಬಿರುಗಾಳಿಯೇ ಜೋರಾಗಿತ್ತು. ಜತೆಗೆ ಗುಡುಗು ಮತ್ತು ಸಿಡಿಲಿನ ಅಬ್ಬರ ಜನರನ್ನು ಆತಂಕಗೊಳಿಸಿತು.

ನಗರದ ಕೋಟೆ ಬಡಾವಣೆ, ಹೊಸಮನೆ, ಜಯನಗರ, ಬೈಪಾಸ್ ರಸ್ತೆ, ಜ್ಯೋತಿನಗರದಲ್ಲಿ ದೊಡ್ಡ ಮರಗಳು ನೆಲಕ್ಕೆ ಉರುಳಿದವು. ಮರಗಳು ಬೀಳುವಾಗ ವಿದ್ಯುತ್ ತಂತಿಗಳು ಸಿಕ್ಕಿಕೊಂಡು ಕಂಬಗಳು ಮುರಿದು ಬಿದ್ದವು. ಅವುಗಳನ್ನು ತೆರವುಗೊಳಿಸುವ ಕಾರ್ಯ ಶನಿವಾರ ಸಂಜೆ ತನಕವೂ ನಡೆಯಿತು.

ಒಂದೇ ಗಂಟೆ ಮಳೆಗೆ ನಗರದಲ್ಲಿ 25 ವಿದ್ಯುತ್ ಕಂಬಗಳು, 16 ಮರಗಳು, 2 ವಿದ್ಯುತ್ ಪರಿವರ್ತಕಗಳು ಧರೆಗೆ ಉರುಳಿದ್ದವು. ನಗರಸಭೆ, ಮೆಸ್ಕಾಂ, ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ, ನಗರಸಭೆ ಅಧ್ಯಕ್ಷೆ ಭವ್ಯಾ ಮಂಜುನಾಥ್, ಆಯುಕ್ತ ಬಿ.ಸಿ. ಬಸವರಾಜ್‌, ತಹಶೀಲ್ದಾರ್ ರೇಷ್ಮಾಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಜಿಲ್ಲಾ ಆಟದ ಮೈದಾನದ ವ್ಯಾಯಾಮ ಶಾಲೆಯ ಮೇಲ್ಬಾಗದ ಕೊಠಡಿಯ ಶೀಟುಗಳು ಹಾರಿ ಹೋಗಿವೆ. ಎಚ್.ಸಿ. ಸುರೇಂದ್ರಗೌಡ ಅವರ ಮನೆಗೆ ಸಿಡಿಲು ಬಡಿದು ಚಾವಣಿಗೆ ಹಾನಿಯಾಗಿದೆ. ಚಾವಣಿಯ ಹೆಂಚು ಮನೆಯ ಮಲಗುವ ಕೋಣೆಯ ತುಂಬಾ ತುಂಬಿಕೊಂಡಿದ್ದವು. ಮಳೆ ಬಂದಾಗ ದಂಪತಿ ಎಚ್ಚರವಾಗಿದ್ದರಿಂದ ಮನೆಯಲ್ಲಿದ್ದವರಿಗೆ ತೊಂದರೆಯಾಗಿಲ್ಲ.

ಜ್ಯೋತಿ ನಗರದಲ್ಲಿರುವ ಕ್ರೀಡಾ ಇಲಾಖೆ ಆವರಣದಲ್ಲಿನ ವಸತಿ ನಿಲಯದ ಪಕ್ಕದ ಮರವೊಂದು ಮನೆಯೊಂದರ ಮೇಲೆ ಬಿದ್ದಿದೆ. ಸ್ಥಳಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಸಿ. ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು ಕ್ಲಬ್ ಕಾಂಪೌಂಡ್ ಮೇಲೆ ದೊಡ್ಡ ಮರವೊಂದು ಬಿದ್ದು, ಗೋಡೆ ಕುಸಿದಿದೆ. ನಗರದ ಸುತ್ತಮುತ್ತಲ ಗ್ರಾಮಗಳಾದ ಹಿರೇಗೌಜ, ಕೆಂಗನಹಳ್ಳಿ, ಕರಿಸಿದ್ದನಹಳ್ಳಿ ಸೇರಿ ಹಲವೆಡೆ ಮನೆಗಳ ಹೆಂಚು ಹಾರಿ ಹೋಗಿವೆ.

The entire city is shaken by heavy rain and thunder.

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ ಅಧಿಕಾರ ಪಡೆಯಲು ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಕೋಟ್ಯಾಂತರ ಹಣ ಖರ್ಚು ಮಾಡಿ ನ್ಯಾಯಲಯದ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ ಪೈಪೋಟಿ ನಡೆಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ರಾಜಕೀಯವಾಗಿ ರಸ್ತೆಬಿದ್ದಿರುವ ಗುಂಡಿಯಲ್ಲಿ ಮುಚ್ಚುತ್ತಾರೆಂದು ವಿಧಾನಪರಿಷತ್ ಸದಸ್ಯ...

Related Articles

ಮಲೆನಾಡಿನ ಮಡಿಲಲ್ಲಿ ಜ್ಞಾನದ ಎರಡು ದೀಪಗಳು

ಜಯಪುರದ ಶ್ರೀ ಸತ್ಯಸಾಯಿ ದಿವ್ಯ ನಿಕೇತನಂ ಮತ್ತು ಶ್ರೀ ಸತ್ಯಸಾಯಿ ಶ್ರೀ ನಿಕೇತನಂನಲ್ಲಿ ಉಚಿತ ಶಿಕ್ಷಣದೊಂದಿಗೆ...

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ...

ಕಡೂರು, ಚಿಕ್ಕಮಗಳೂರು ತಾಲ್ಲೂಕುಗಳನ್ನು ಬರಪಟ್ಟಿಗೆ ಸೇರಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬರಗಾಲ ಪೀಡಿತ ತಾಲ್ಲೂಕುಗಳ ಘೋಷಣೆಯಲ್ಲಿ ತಾರತಮ್ಯ ನೀತಿ ಅನುಸರಿಸಿದೆ ಎಂದು ಕರ್ನಾಟಕ...