Home namma chikmagalur chikamagalur ಸಂಭ್ರಮದ ರಂಗನಾಥಸ್ವಾಮಿ ರಥೋತ್ಸವ
chikamagalurHomeLatest Newsnamma chikmagalur

ಸಂಭ್ರಮದ ರಂಗನಾಥಸ್ವಾಮಿ ರಥೋತ್ಸವ

Share
Share

ಸಖರಾಯಪಟ್ಟಣ: ಸಖರಾಯಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಶಕುನ ರಂಗನಾಥಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಸಂಕ್ರಾಂತಿ ಹಬ್ಬದಂದು ಮೊಲ ಬಿಡುವ ಸೇವೆಯಿಂದ ಆರಂಭವಾದ ಧಾರ್ಮಿಕ ಕೈಂಕರ್ಯಗಳಲ್ಲಿ ದಿನವೂ ವಿಶೇಷ ಅಭಿಷೇಕ ಮತ್ತು ಹಣ್ಣು ತುಪ್ಪ ಸೇವೆಗಳು ನಡೆದವು.

ರಾಜ್ಯದ ವಿವಿದೆಡೆಯಿಂದ ಆಗಮಿಸಿದ್ದ ಭಕ್ತರು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ರಂಗನಾಥಸ್ವಾಮಿ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಬಿಡದಿಮನೆಗೆ ಕರೆತಂದು ಪ್ರತಿಷ್ಠಾಪಿಸಲಾಯಿತು.ದೇವಾಲಯದಿಂದ ಶ್ರೀದೇವಿ ಮತ್ತು ಭೂದೇವಿಯ ಉತ್ಸವ ಮೂರ್ತಿಗಳನ್ನು ಬಿಡದಿಮನೆ ಸಮೀಪದ ಅರಳೀಕಟ್ಟೆಗೆ ಮೆರವಣಿಗೆಯಲ್ಲಿ ಕರೆತಂದು ರಂಗನಾಥಸ್ವಾಮಿಯೊಂದಿಗೆ ಕಲ್ಯಾಣೋತ್ಸವ ನೆರವೇರಿಸಲಾಯಿತು.

ನಂತರ ಮೂರು ದೇವರುಗಳನ್ನು ಬಿಡದಿಮನೆಗೆ ಕರೆತಂದು ಪೂಜೆ ಸಲ್ಲಿಸಲಾಯಿತು. ಅಲಂಕಾರಗೊಂಡ ಮಹಾರಥದಲ್ಲಿ ರಂಗನಾಥಸ್ವಾಮಿ ಮತ್ತು ದೇವಿಯವರ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಗ್ರಾಪಂ. ಅಧ್ಯಕ್ಷೆ ರಾಜಮ್ಮ ಮತ್ತು ಸದಸ್ಯರು, ಶಾಸಕ ತಮ್ಮಯ್ಯ, ಸಿ ಟಿ ರವಿ, ಎಸ್ ಎಲ್ ಬೋಜೇಗೌಡ,ಹಾಸನ ಹಾಲು ಒಕ್ಕೂಟ ನಿರ್ದೇಶಕ ಎಸ್ ಡಿ ಸೋನಾಲ್‌ಗೌಡ, ಉಪವಿಭಾಗಧಿಕಾರಿ ಎನ್ ವಿ ನಟೇಶ್, ತಹಶಿಲ್ದಾರ್ ಪೂರ್ಣೀಮ, ದೇವಾಲಯ ಸಮಿತಿಯ ಲೋಕೇಶ್ , ಸಚ್ಚಿದಾನಂದ, ದೇವರಾಜು,ಪೊಲೀಸ್ ಇಲಾಖೆಯ ಡಿವೈಎಸ್ಪಿ ಪರಶುರಾಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್, ಸೇರಿದಂತೆ ಕಂದಾಯಾಧಿಕಾರಿಗಳು, ಗ್ರಾಮಸ್ಥರು ರಥಕ್ಕೆ ಪೂಜೆ ಸಲ್ಲಿಸಿದರು.

ನಂತರ ಗೋವಿಂದ ನಾಮಸ್ಮರಣೆಯೊಂದಿಗೆ ಭಕ್ತರು ತೇರು ಎಳೆದರು. ನೆರೆದಿದ್ದವರು ರಥಕ್ಕೆ ಬಾಳೇಹಣ್ಣು ಎಸೆದು ಇಷ್ಠಾರ್ಥಗಳ ಸಿದ್ಧಿಗೆ ಪ್ರಾರ್ಥನೆ ಸಲ್ಲಿಸಿದರು. ರಥೋತ್ಸವದ ಬಳಿಕ ಭಕ್ತರು ಕೆಂಚರಾಯಸ್ವಾಮಿ ಸನ್ನಿಧಿಗೆ ತೆರಳಲು ಅಣಿಯಾಗುತ್ತಿದ್ದುದು ಕಂಡು ಬಂತು.

The festive Ranganatha Swamy Chariot Festival

 

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...