Home Latest News ಮೈದುಂಬಿ ಹರಿಯುತ್ತಿರುವ ಕಲ್ಲತ್ತಿಗರಿ ಜಲಪಾತ
Latest NewsHomenamma chikmagalurTarikere

ಮೈದುಂಬಿ ಹರಿಯುತ್ತಿರುವ ಕಲ್ಲತ್ತಿಗರಿ ಜಲಪಾತ

Share
Share

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮ, ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಕಲ್ಲತ್ತಿಗರಿ ಜಲಪಾತವು ಮೈದುಂಬಿ ಹರಿಯುತ್ತಿದ್ದು, ರಾಕ್ಷಸ ಸ್ವರೂಪ ತಳೆದಂತೆ ಕಾಣುತ್ತಿದೆ.

ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿರುವ ಈ ಸುಂದರ ಜಲಪಾತ, ಕಳೆದ ವಾರವರೆಗೆ ಸಾಧಾರಣವಾಗಿ ಹರಿಯುತ್ತಿತ್ತು, ಆದರೆ ಕಳೆದ ನಾಲೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಪಾತದ ನೀರಿನ ಪ್ರಮಾಣ ಬಹಳಷ್ಟು ಹೆಚ್ಚಾಗಿದೆ.

ಧುಮ್ಮಿಕ್ಕುತ್ತಾ ಹರಿಯುತ್ತಿರುವ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮಲೆನಾಡು ಈ ಪ್ರಕೃತಿ ವೈಭವಕ್ಕೆ ಸಾಕ್ಷಿಯಾದರೂ, ಇಲ್ಲಿಗೆ ತೆರಳುವ ಪ್ರವಾಸಿಗರು ನಿರಂತರ ಮಳೆಯಿಂದಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಅಗತ್ಯತೆಯಿದೆ.

ನಿನ್ನೆ ಈ ಜಲಪಾತ ವೀಕ್ಷಣೆಗೆ ಬಂದಿದ್ದ ಪ್ರವಾಸಿ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರ್ ಸಂಪೂರ್ಣ ಹಾನಿಗೊಳಗಾಗಿತ್ತು. ಕಾರಿನಲ್ಲಿ ಯಾರು ಇಲ್ಲದ ಪರಿಣಾಮ ದೊಡ್ಡ ಅನಾಹುತ ಒಂದು ತಪ್ಪಿದಂತಾಗಿದೆ. ಹೀಗಾಗಿ ಮಳೆಗಾಲದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮುನ್ನ ಗಾಳಿ ಮಳೆಯ ಸ್ಥಿತಿಯನ್ನು ಅವಲೋಕಿಸಬೇಕಿದೆ.

ಇದರ ನಡುವೆಯೂ ನೂರಾರು ಪ್ರವಾಸಿಗರು ಪ್ರತಿನಿತ್ಯ ಕಲ್ಲತ್ತಿಗಿರಿ ಜಲಪಾತದ ಸೌಂದರ್ಯವನ್ನು ಕಣ್ಣುಂಬಿ ಕೊಳ್ಳುತ್ತಿದ್ದಾರೆ.

The flowing Kallatthigiri waterfall

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...