Home Latest News ಮೈದುಂಬಿ ಹರಿಯುತ್ತಿರುವ ಕಲ್ಲತ್ತಿಗರಿ ಜಲಪಾತ
Latest NewsHomenamma chikmagalurTarikere

ಮೈದುಂಬಿ ಹರಿಯುತ್ತಿರುವ ಕಲ್ಲತ್ತಿಗರಿ ಜಲಪಾತ

Share
Share

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮ, ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಕಲ್ಲತ್ತಿಗರಿ ಜಲಪಾತವು ಮೈದುಂಬಿ ಹರಿಯುತ್ತಿದ್ದು, ರಾಕ್ಷಸ ಸ್ವರೂಪ ತಳೆದಂತೆ ಕಾಣುತ್ತಿದೆ.

ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿರುವ ಈ ಸುಂದರ ಜಲಪಾತ, ಕಳೆದ ವಾರವರೆಗೆ ಸಾಧಾರಣವಾಗಿ ಹರಿಯುತ್ತಿತ್ತು, ಆದರೆ ಕಳೆದ ನಾಲೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಪಾತದ ನೀರಿನ ಪ್ರಮಾಣ ಬಹಳಷ್ಟು ಹೆಚ್ಚಾಗಿದೆ.

ಧುಮ್ಮಿಕ್ಕುತ್ತಾ ಹರಿಯುತ್ತಿರುವ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮಲೆನಾಡು ಈ ಪ್ರಕೃತಿ ವೈಭವಕ್ಕೆ ಸಾಕ್ಷಿಯಾದರೂ, ಇಲ್ಲಿಗೆ ತೆರಳುವ ಪ್ರವಾಸಿಗರು ನಿರಂತರ ಮಳೆಯಿಂದಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಅಗತ್ಯತೆಯಿದೆ.

ನಿನ್ನೆ ಈ ಜಲಪಾತ ವೀಕ್ಷಣೆಗೆ ಬಂದಿದ್ದ ಪ್ರವಾಸಿ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರ್ ಸಂಪೂರ್ಣ ಹಾನಿಗೊಳಗಾಗಿತ್ತು. ಕಾರಿನಲ್ಲಿ ಯಾರು ಇಲ್ಲದ ಪರಿಣಾಮ ದೊಡ್ಡ ಅನಾಹುತ ಒಂದು ತಪ್ಪಿದಂತಾಗಿದೆ. ಹೀಗಾಗಿ ಮಳೆಗಾಲದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮುನ್ನ ಗಾಳಿ ಮಳೆಯ ಸ್ಥಿತಿಯನ್ನು ಅವಲೋಕಿಸಬೇಕಿದೆ.

ಇದರ ನಡುವೆಯೂ ನೂರಾರು ಪ್ರವಾಸಿಗರು ಪ್ರತಿನಿತ್ಯ ಕಲ್ಲತ್ತಿಗಿರಿ ಜಲಪಾತದ ಸೌಂದರ್ಯವನ್ನು ಕಣ್ಣುಂಬಿ ಕೊಳ್ಳುತ್ತಿದ್ದಾರೆ.

The flowing Kallatthigiri waterfall

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...