Home Latest News ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ
Latest NewschikamagalurHomenamma chikmagalur

ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ

Share
Share

ಚಿಕ್ಕಮಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸುವ ಕೆಲಸ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ತಾನು ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಕೆಲಸ ಮಾಡಬಾರದು ಎಂದು ಹೇಳಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ನಾನು ಬಲ್ಲೆ. ಅವರು ಶಿಸ್ತಿನ ಒಳ್ಳೆಯ ಅಧಿಕಾರಿ. ಅವರನ್ನೂ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಪಡಿಸಿರುವುದು ಸರಿಯಲ್ಲ. ಸರ್ಕಾರ ತಾನು ಮಾಡಿದ ತಪ್ಪನ್ನು ಅವರ ಮೇಲೆ ಹೊರಿಸಿ ನಾವು ಮಾಡಿದ್ದೇ ಸರಿ ಎಂದು ಹೇಳಿದರೆ ಅವರಿಗೆ ತಿಳಿವಳಿಕೆ ಹೇಳುವುದು ಯಾರು ಎಂದು ಪ್ರಶ್ನಿಸಿದರು.

ಕಾರ್ಯಕ್ರಮಕ್ಕೆ ಸರ್ಕಾರದ ಕಡೆಯಿಂದ ಪೂರ್ವ ತಯಾರಿ ಇರಲಿಲ್ಲ. ಪೊಲೀಸ್ ಗುಪ್ತಚರ ಇಲಾಖೆ ಸಹ ಈ ಬಗ್ಗೆ ಎಚ್ಚರಿಸಿತ್ತು. ಅದನ್ನು ಸರ್ಕಾರ ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಇದರ ಪರಿಣಾಮ ೧೧ ಮಂದಿ ಅಮಾಯಕರು ಸಾವಿಗೀಡಾದರು. ಆದರೂ ಮುಖ್ಯಮಂತ್ರಿಯಾಗಲಿ, ಉಪ ಮುಖ್ಯಮಂತ್ರಿಯಾಗಲಿ ವಿಷಾಧವನ್ನೂ ಸಹ ವ್ಯಕ್ತಪಡಿಸಿಲ್ಲ. ಅಲ್ಲದೆ ಅಧಿಕಾರಿಗಳ ಮೇಲೆ ತಪ್ಪು ಹೊರಿಸಿರುವುದರಲ್ಲಿ ಅರ್ಥವೂ ಇಲ್ಲ ಎಂದರು.

ವಾಸ್ತವಿಕತೆಯನ್ನು ಅರ್ಥ ಮಾಡಿಕೊಂಡು ಕನಿಷ್ಟ ಸರ್ಕಾರ ವಿಷಾಧ ಹೇಳಬೇಕಿತ್ತು. ಅದನ್ನು ಬಿಟ್ಟು ಅಧಿಕಾರಿಗಳನ್ನು ಅಮಾನತು ಪಡಿಸುವುದು ಸರಿಯಲ್ಲ ಎಂದು ಹೇಳಿದರು.

The government blamed its mistakes on the officials.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...