Home Latest News ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ
Latest NewschikamagalurHomenamma chikmagalur

ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ

Share
Share

ಚಿಕ್ಕಮಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸುವ ಕೆಲಸ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ತಾನು ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಕೆಲಸ ಮಾಡಬಾರದು ಎಂದು ಹೇಳಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ನಾನು ಬಲ್ಲೆ. ಅವರು ಶಿಸ್ತಿನ ಒಳ್ಳೆಯ ಅಧಿಕಾರಿ. ಅವರನ್ನೂ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಪಡಿಸಿರುವುದು ಸರಿಯಲ್ಲ. ಸರ್ಕಾರ ತಾನು ಮಾಡಿದ ತಪ್ಪನ್ನು ಅವರ ಮೇಲೆ ಹೊರಿಸಿ ನಾವು ಮಾಡಿದ್ದೇ ಸರಿ ಎಂದು ಹೇಳಿದರೆ ಅವರಿಗೆ ತಿಳಿವಳಿಕೆ ಹೇಳುವುದು ಯಾರು ಎಂದು ಪ್ರಶ್ನಿಸಿದರು.

ಕಾರ್ಯಕ್ರಮಕ್ಕೆ ಸರ್ಕಾರದ ಕಡೆಯಿಂದ ಪೂರ್ವ ತಯಾರಿ ಇರಲಿಲ್ಲ. ಪೊಲೀಸ್ ಗುಪ್ತಚರ ಇಲಾಖೆ ಸಹ ಈ ಬಗ್ಗೆ ಎಚ್ಚರಿಸಿತ್ತು. ಅದನ್ನು ಸರ್ಕಾರ ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಇದರ ಪರಿಣಾಮ ೧೧ ಮಂದಿ ಅಮಾಯಕರು ಸಾವಿಗೀಡಾದರು. ಆದರೂ ಮುಖ್ಯಮಂತ್ರಿಯಾಗಲಿ, ಉಪ ಮುಖ್ಯಮಂತ್ರಿಯಾಗಲಿ ವಿಷಾಧವನ್ನೂ ಸಹ ವ್ಯಕ್ತಪಡಿಸಿಲ್ಲ. ಅಲ್ಲದೆ ಅಧಿಕಾರಿಗಳ ಮೇಲೆ ತಪ್ಪು ಹೊರಿಸಿರುವುದರಲ್ಲಿ ಅರ್ಥವೂ ಇಲ್ಲ ಎಂದರು.

ವಾಸ್ತವಿಕತೆಯನ್ನು ಅರ್ಥ ಮಾಡಿಕೊಂಡು ಕನಿಷ್ಟ ಸರ್ಕಾರ ವಿಷಾಧ ಹೇಳಬೇಕಿತ್ತು. ಅದನ್ನು ಬಿಟ್ಟು ಅಧಿಕಾರಿಗಳನ್ನು ಅಮಾನತು ಪಡಿಸುವುದು ಸರಿಯಲ್ಲ ಎಂದು ಹೇಳಿದರು.

The government blamed its mistakes on the officials.

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?

ಚಿಕ್ಕಮಗಳೂರು: ಕಾಫಿನಾಡಿನ ತುಡುಕೂರು ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ತಡರಾತ್ರಿ ನಡೆದ ಮಕ್ಕಳ ಗಲಾಟೆ ಸದ್ಯ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ಮಕ್ಕಳ ನಡುವೆ ಉಂಟಾದ ಜಗಳದಿಂದ...

Related Articles

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ...