ಚಿಕ್ಕಮಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸುವ ಕೆಲಸ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ತಾನು ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಕೆಲಸ ಮಾಡಬಾರದು ಎಂದು ಹೇಳಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ನಾನು ಬಲ್ಲೆ. ಅವರು ಶಿಸ್ತಿನ ಒಳ್ಳೆಯ ಅಧಿಕಾರಿ. ಅವರನ್ನೂ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಪಡಿಸಿರುವುದು ಸರಿಯಲ್ಲ. ಸರ್ಕಾರ ತಾನು ಮಾಡಿದ ತಪ್ಪನ್ನು ಅವರ ಮೇಲೆ ಹೊರಿಸಿ ನಾವು ಮಾಡಿದ್ದೇ ಸರಿ ಎಂದು ಹೇಳಿದರೆ ಅವರಿಗೆ ತಿಳಿವಳಿಕೆ ಹೇಳುವುದು ಯಾರು ಎಂದು ಪ್ರಶ್ನಿಸಿದರು.
ಕಾರ್ಯಕ್ರಮಕ್ಕೆ ಸರ್ಕಾರದ ಕಡೆಯಿಂದ ಪೂರ್ವ ತಯಾರಿ ಇರಲಿಲ್ಲ. ಪೊಲೀಸ್ ಗುಪ್ತಚರ ಇಲಾಖೆ ಸಹ ಈ ಬಗ್ಗೆ ಎಚ್ಚರಿಸಿತ್ತು. ಅದನ್ನು ಸರ್ಕಾರ ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಇದರ ಪರಿಣಾಮ ೧೧ ಮಂದಿ ಅಮಾಯಕರು ಸಾವಿಗೀಡಾದರು. ಆದರೂ ಮುಖ್ಯಮಂತ್ರಿಯಾಗಲಿ, ಉಪ ಮುಖ್ಯಮಂತ್ರಿಯಾಗಲಿ ವಿಷಾಧವನ್ನೂ ಸಹ ವ್ಯಕ್ತಪಡಿಸಿಲ್ಲ. ಅಲ್ಲದೆ ಅಧಿಕಾರಿಗಳ ಮೇಲೆ ತಪ್ಪು ಹೊರಿಸಿರುವುದರಲ್ಲಿ ಅರ್ಥವೂ ಇಲ್ಲ ಎಂದರು.
ವಾಸ್ತವಿಕತೆಯನ್ನು ಅರ್ಥ ಮಾಡಿಕೊಂಡು ಕನಿಷ್ಟ ಸರ್ಕಾರ ವಿಷಾಧ ಹೇಳಬೇಕಿತ್ತು. ಅದನ್ನು ಬಿಟ್ಟು ಅಧಿಕಾರಿಗಳನ್ನು ಅಮಾನತು ಪಡಿಸುವುದು ಸರಿಯಲ್ಲ ಎಂದು ಹೇಳಿದರು.
The government blamed its mistakes on the officials.
Leave a comment