Home namma chikmagalur ವಿಜೃಂಭಣೆಯಿಂದ ನಡೆದ ಪಂಚ ಪೀಠಾಧೀಶರ ಅಡ್ಡಪಲ್ಲಕ್ಕಿ ಮಹೋತ್ಸವ
namma chikmagalurHomeKadurLatest News

ವಿಜೃಂಭಣೆಯಿಂದ ನಡೆದ ಪಂಚ ಪೀಠಾಧೀಶರ ಅಡ್ಡಪಲ್ಲಕ್ಕಿ ಮಹೋತ್ಸವ

Share
???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಬೀರೂರು: ಪಂಚ ಪೀಠಾ ಧೀಶರ ಅಡ್ಡಪಲ್ಲಕ್ಕಿ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಬೀರೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು.

ಮಹೋತ್ಸವದ ಅಂಗವಾಗಿ ಭಾನುವಾರವೇ ಕಡೂರಿಗೆ ಬಂದು ವಾಸ್ತವ್ಯ ಮಾಡಿದ್ದ ರಂಭಾಪುರಿ, ಶ್ರೀಶೈಲ, ಕಾಶಿಯ ಹಿರಿಯ ಮತ್ತು ಕಿರಿಯ ಗುರುಗಳು, ಉಜ್ಜಯಿನಿಯ ಗುರುಗಳನ್ನು ಭಕ್ತರು ಅಲಂಕೃತ ಪಲ್ಲಕ್ಕಿಯಲ್ಲಿ ಹೊತ್ತು ಕೆಎಲ್‌ಕೆ ಮೈದಾನದಿಂದ ರಂಭಾಪುರಿ ಖಾಸಾ ಶಾಖಾಮಠದ ಆವರಣದವರೆಗೆ ಮೆರವಣಿಗೆ ನಡೆಸಿದರು.

ಗುರುಗಳು ಪ್ರತಿನಿಧಿಸುವ ಹಸಿರು, ಕೆಂಪು, ನೀಲಿ, ಬಿಳಿ ಮತ್ತು ಹಳದಿ ಹೂಗ ಳಿಂದ ಪಲ್ಲಕ್ಕಿಯನ್ನು ಅಲಂಕರಿಸಲಾಗಿತ್ತು.

ಕಡೂರಿನಲ್ಲಿ ನಿತ್ಯಾನುಷ್ಠಾನ ಪೂರ್ಣಗೊಳಿಸಿದ ಎಲ್ಲ ಶ್ರೀಗಳು ಜೊತೆಯಾಗಿ ಮೈದಾನ ಪ್ರವೇಶಿಸಿ ಅಲ್ಲಿ ಸಿದ್ಧಪಡಿಸಿದ್ದ ಅಡ್ಡಪಲ್ಲಕ್ಕಿಯಲ್ಲಿ ಕುಳಿತು ಸಂಪ್ರದಾಯದಂತೆ ಸುವರ್ಣ ಕಿರೀಟ ಧಾರಣೆ ಮಾಡಿದರು.

ಎಲ್ಲ ಶ್ರೀಗಳು ಪಲ್ಲಕ್ಕಿ ಯಲ್ಲಿ ಅಸೀನರಾದ ತಕ್ಷಣ ಭಕ್ತರು ‘ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂಬ ಘೋಷಣೆಗಳೊಡನೆ ಮೆರವಣಿಗೆಗೆ ಚಾಲನೆ ನೀಡಿದರು. ಪದ್ಧತಿಯಂತೆ ಮೊದಲು ಬಾಳೆಹೊನ್ನೂರು, ಬಳಿಕ ಉಜ್ಜಯಿನಿ, ಕಾಶಿಯ ಕಿರಿಯ ಶ್ರೀಗಳು, ಶ್ರೀಶೈಲ ಮತ್ತು ಕಾಶೀ ಶ್ರೀಗಳ ಪಲ್ಲಕ್ಕಿ ಮೆರವಣಿಗೆ ಹೊರಟಿತು.

ಮೆರವಣಿಗೆಯ ಮುಂಭಾಗದಲ್ಲಿ ಪೂರ್ಣಕುಂಭ, ಧರ್ಮಧ್ವಜ ಹಿಡಿದ ಮಹಿಳೆಯರು ಸಾಗಿದರೆ, ಮಂಗಳವಾದ್ಯ, ವೀರಗಾಸೆ ತಂಡಗಳು, ಡೊಳ್ಳುಕುಣಿತ ಉತ್ಸವಕ್ಕೆ ಮೆರುಗು ನೀಡಿದವು. ಕುದುರೆಯ ಮೇಲೆ ಕುಳಿತು ಧರ್ಮಧ್ವಜ ಹಿಡಿದ ಮಹಿಳೆ ಗಮನ ಸೆಳೆದರೆ, ತಾವರೆಕೆರೆ ಮಠದಿಂದ ತರಿಸಲಾಗಿದ್ದ ಯಾಂತ್ರಿಕ ಆನೆ ಭಕ್ತರ ಗಮನ ಸೆಳೆಯಿತು.

ವಿವಿಧ ಸಂಘ ಸಂಸ್ಥೆಗಳು, ಪುರಸಭೆ, ಹಲವು ಸಮುದಾಯಗಳ ಪರವಾಗಿ ಪಂಚಪೀಠಾಧೀಶರಿಗೆ ಫಲಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಲಾಯಿತು. ಭಕ್ತರು ಶ್ರೀಗಳ ದರ್ಶನ ಮತ್ತು ಮಂತ್ರಾಕ್ಷತೆ ಪಡೆದರು. ಮೆರವಣಿಗೆ ಅಂಗವಾಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಯಂತ್ರಣ ಹಾಕಿ ಪರ್ಯಾಯ ರಸ್ತೆಯಲ್ಲಿ ವಾಹನ ಸಾಗುವಂತೆ ಸಿದ್ಧತೆ ನಡೆಸಲಾಗಿತ್ತು.

ಮೆರವಣಿಗೆ ಸಾಗುತ್ತಿರುವ ವೇಳೆ ಶ್ರೀರಾಮಪುರಂ ಬಳಿ ಮುಸ್ಲಿಂ ಸಮುದಾಯದವರು ಭಕ್ತರಿಗೆ ಪಾನೀಯ ವಿತರಿಸಿದರು. ಬೆಳಿಗ್ಗೆಯಿಂದ ಪಿಎಂಶ್ರೀ ಶಾಲೆಯ ಆವರಣದಲ್ಲಿ ಉಪಾಹಾರ, ಊಟದ ವ್ಯವಸ್ಥೆ ಮಾಡಲಾಗಿತ್ತು. ಬೆಳ್ಳಿ ಬಳಗದ ಸ್ವಯಂ ಸೇವಕರು ಆಹಾರ ವಿತರಣೆ ವ್ಯವಸ್ಥೆ ಜತೆಗೆ ಕೌಂಟರ್‌ ಬಳಿ ಉದ್ಘೋಷಣೆ ಮೂಲಕ ಜನರಿಗೆ ಮಾರ್ಗದರ್ಶನ ಮಾಡುತ್ತಿದ್ದರು.

ಶಾಸಕ ಕೆ.ಎಸ್‌. ಆನಂದ್‌, ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿಪ್ರಕಾಶ್‌, ವೈ.ಎಸ್‌.ವಿ. ದತ್ತ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಂ. ಲೋಕೇಶ್‌, ಉತ್ಸವ ಸಮಿತಿ ಅಧ್ಯಕ್ಷ ದೇವರಾಜ್‌, ಉಪಾಧ್ಯಕ್ಷ ಬಿ. ಆನಂದ ಶೆಟ್ಟಿ, ತಾಲ್ಲೂಕು ವೀರಶೈವ ಮಹಾಸಭಾ ಅಧ್ಯಕ್ಷ ರೇಣುಕಾರಾಧ್ಯ, ಉತ್ಸವ ಸಮಿತಿಯ ಬಿ.ವಿ. ಶಿವಸ್ವಾಮಿ ಮೆರವಣಿಗೆಯ ನೇತೃತ್ವ ವಹಿಸಿದ್ದರು.

The grand procession of the five patriarchs was held with great pomp and show.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...