Home namma chikmagalur ಆಶಾ ಕಾರ್ಯಕರ್ತೆಯರ ಬದುಕಿನಲ್ಲಿ ಸಾಕಷ್ಟು ಕಷ್ಟವಿದೆ
namma chikmagalurchikamagalurHomeLatest News

ಆಶಾ ಕಾರ್ಯಕರ್ತೆಯರ ಬದುಕಿನಲ್ಲಿ ಸಾಕಷ್ಟು ಕಷ್ಟವಿದೆ

Share
Share

ಚಿಕ್ಕಮಗಳೂರು:  ರಾಜ್ಯಸರ್ಕಾರ ಭರವಸೆ ಈಡೇರಿಸುವತನಕ ಆಶಾ ಕಾರ್ಯಕರ್ತೆ ಯರ ಹೋರಾಟ ನಿಲ್ಲದಿರಲೀ, ಕರ್ತವ್ಯಕ್ಕೆ ತೆರಳಬೇಡಿ ಹಾಗೂ ಬೆದರಿಕೆಗೆ ಅಂಜದಿರಿ. ಕಾರ್ಯಕರ್ತೆಯರ ನ್ಯಾಯಬದ್ಧ ಹಕ್ಕು ಕೊಡಿಸುವಲ್ಲಿ ಸದಾಕಾಲ ನಿಮ್ಮೊಟ್ಟಿಗೆ ಜೊತೆಗಿರುತ್ತೇನೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಭರವಸೆ ನೀಡಿದರು.

ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮೂರ ನೇ ದಿನದ ಪ್ರತಿಭಟನೆಯಲ್ಲಿ ಗುರುವಾರ ಭಾಗವಹಿಸಿ ಮಾತನಾಡಿದ ಅವರು ಹೋರಾಟದ ಕಷ್ಟ ತಮಗೆ ಗೊತ್ತಿದೆ. ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಜೀವನದ ಭವಣೆ ಅರಿತಿದ್ದೇನೆ. ಹೀಗಾಗಿ ಸರ್ಕಾರ ಕನಿಷ್ಟ ಮಾಸಿಕ ವೇತನ ನೀಡುವವರೆಗೆ ಹೋರಾಟ ನಿಲ್ಲದಿರಲಿ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು ಬದುಕಿನಲ್ಲಿ ಸಾಕಷ್ಟು ಕಷ್ಟವಿದೆ. ಕೆಲವರು ಕುಟುಂಬಗಳಲ್ಲಿ ಗಂಡನಿಲ್ಲ, ಗಂಡನಿದ್ದರೂ ಕುಡಿತದ ಚಟಕ್ಕೆ ಒಳಗಾಗಿ ಮನೆಯ ಜವಾಬ್ದಾರಿ ಯಜಮಾನಿಯೇ ವಹಿಸುತ್ತಿದ್ದಾರೆ. ಜೊ ತೆಗೆ ಮಕ್ಕಳ ಪಾಲನೆ, ವಿದ್ಯಾಭ್ಯಾಸದ ಖರ್ಚುವೆಚ್ಚವು ಎಲ್ಲವೂ ಹೆಚ್ಚಳವಾಗಿರುವ ಸಮಾಜದಲ್ಲಿ ಸರ್ಕಾರ ದುಡಿಮೆಗೆ ತಕ್ಕಂತೆ ವೇತನ ಕಲ್ಪಿಸುವುದು ನ್ಯಾಯಯುತವಾಗಿದೆ ಎಂದರು.

ಪ್ರಸ್ತುತ ಸಮಾಜದಲ್ಲಿ ಕಡಿಮೆ ಕೆಲಸದ ವ್ಯಕ್ತಿಗಳಿಗೆ ಕೈತುಂಬ ಸಂಬಳವಿದೆ. ಆದರೆ ಸರ್ಕಾರದ ಅತಿ ಹೆಚ್ಚು ಯೋಜನೆಗಳನ್ನು ಅಚ್ಚುಕಟ್ಟಾಗಿ ಜನಸಾಮಾನ್ಯರಿಗೆ ತಲುಪಿಸುವ ಆಶಾ ಕಾರ್ಯಕರ್ತೆಯರಿಗೆ ಕಡಿಮೆ ವೇತನ ನೀಡುವುದು ಒಂದು ರೋಗವಾಗಿದೆ. ಸಮಾನ ಕೆಲಸಕ್ಕೆ ಸಮಾನ ವೇತನದ ನೀತಿ ಕಡ್ಡಾಯವಾಗ ಬೇಕು. ಸಮಾಜದಲ್ಲಿ ಎಲ್ಲರನ್ನೂ ಒಂದೇ ರೀತಿ ಕಾಣುವುದನ್ನು ಕಲಿಯಬೇಕು ಎಂದು ತಿಳಿಸಿದರು.

ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮಾತನಾಡಿ ಸರ್ಕಾರದ ಉನ್ನತ ಅಧಿ ಕಾರಿಗಳಿಗೆ ಕೆಲಸವು ನಿಗಧಿತ ಸಮಯವಿದೆ. ಆದರೆ ಆಶಾರವರ ಕೆಲಸಕ್ಕೆ ಸಮಯ ಎಂಬುದು ಇರುವುದಿಲ್ಲ, ಆರೋಗ್ಯ ಸಮಸ್ಯೆ, ಸಾಂಕ್ರಾಮಿಕ ರೋಗ ತಡೆಗಟ್ಟಲು, ಸುರಕ್ಷಿತ ಕ್ರಮ ವಹಿಸಲು ಆಶಾ ಕಾರ್ಯಕರ್ತೆಯರು ಸಮಯವನ್ನು ಲೆಕ್ಕಿಸದೇ ಕರ್ತವ್ಯಕ್ಕೆ ತೆರಳಿ ದಿನಪೂರ್ತಿ ಕಾರ್ಯನಿರ್ವಹಿಸುತ್ತಾರೆ ಎಂದರು.

ಸರ್ಕಾರದ ಬಹುತೇಕ ಯೋಜನೆಗಳನ್ನು ಅಂಕಿ ಅಂಶಗಳ ಮೂಲಕ ಆಶಾ ಕಾರ್ಯಕರ್ತೆಯರು ತಿಳಿ ಸಲು ಕಠಿಣ ಪರಿಶ್ರಮವೇ ಕಾರಣ. ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ದುಡಿಯುವ ವರ್ಗಕ್ಕೆ ಸಮಾನ ವೇತನ ಒದಗಿಸುವುದು ಮೂಲ ಕರ್ತವ್ಯವಾಗಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರ ಜೀವನಕ್ಕಾಗಿ ಕನಿಷ್ಟ ಮಾಸಿಕ ೧೦ ಸಾವಿರ ವೇತನ ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿದರು.

ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮೀ ಮಾತನಾಡಿ ಗುಡ್ಡಗಾಡು ಪ್ರದೇಶದಲ್ಲಿ ಬಹುತೇ ಕ ಶೇ.೮೫ರಷ್ಟು ತಾಯಿ ಮತ್ತು ಶಿಶು ಮರಣ ತಪ್ಪಿಸಲು ಮೂಲವೇ ಆಶಾ ಕಾರ್ಯಕರ್ತೆಯರ ಸೇವೆ. ಈ ಪವಿತ್ರ ವೃತ್ತಿಯಲ್ಲಿರುವ ಕಾರ್ಯಕರ್ತೆಯರಿಗೆ ಅಲ್ಪಪ್ರಮಾಣದ ವೇತನ ನೀಡಿ ಅವರ ಬದುಕನ್ನು ಕಸಿದುಕೊ ಳ್ಳುವುದು ಸರಿಯಲ್ಲ ಎಂದು ತಿಳಿಸಿದರು.

ಅಪರಾಧ ಎಸಗಿ ಸೆರೆವಾಸ ಅನುಭವಿಸುವ ಕೈದಿಗಳಿಗೆ ಸಿಗುವ ಊಟ, ಬಟ್ಟೆ, ವಾಸ್ತವ್ಯ ಹಾಗೂ ನಿಗ ಧಿತ ವೇತನವು ದಿನವೀಡಿ ನ್ಯಾಯವಾಗಿ ದುಡಿಯುವ ಕಾರ್ಯಕರ್ತೆಯರಿಗಿಲ್ಲ. ಹೀಗಾಗಿ ನಮ್ಮನ್ನು ಬಂಧಿಸಿ ಸೆರೆವಾಸದಲ್ಲಿಡಿ, ಊಟ, ಬಟ್ಟೆ ಮತ್ತು ೬೫೦ ರೂ. ಸಂಬಳ ನೀಡಿ, ಸರ್ಕಾರ ನಿರ್ಣಯ ಕೈಗೊಳ್ಳುವವರೆಗೂ ಜೈಲಿನಲ್ಲಿಯೇ ಕಾಲಕಳೆಯುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ, ಎಸ್ಸಿ ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿ ತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ್, ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್, ಮುಖಂಡರುಗಳಾದ ರಮೇಶ್, ಕಿರಣ್, ದಿಲೀಪ್ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

The lives of ASHA workers are very difficult.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...