Home namma chikmagalur ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ
namma chikmagalurchikamagalurHomeLatest News

ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ

Share
Share

ಚಿಕ್ಕಮಗಳೂರು:  ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ. ಆದಿಯಿಂದ ಅಂತ್ಯದವರೆಗೆ ಬಿದಿರನ್ನು ಪೂರೈಕೆ ಮಾಡುತ್ತಾ ಬಂದಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಅವರು ನಗರದ ಅಂಬೇಡ್ಕರ್ ರಸ್ತೆಯ ನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಗರಸಭೆ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಮೇದ ಸಮುದಾಯಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಸಮಾಜದ ಮುಖಂಡರುಗಳಾದ ಪಿ.ರಾಜೇಶ್, ಕುಮಾರ್ ಮತ್ತಿತರರು ಇಲ್ಲಿ ಮೇದ ಸಮುದಾಯ ಭವನ ನಿರ್ಮಿಸಬೇಕು ಎಂದು ಕನಸು ಕಂಡಿದ್ದರು. ಅದಕ್ಕೆ ಹಿಂದಿದ್ದ ಶಾಸಕರು, ನಗರಸಭೆ ಆಡಳಿತ, ಜಿಲ್ಲಾಧಿಕಾರಿಗಳು ನೀರೆರೆದ ಪರಿಣಾಮ ಇಂದು ಭವನ ನಿರ್ಮಾಣ ಕಾಮಗಾರಿ ಆರಂಭವಾಗುತ್ತಿದೆ. ಅವರೆಲ್ಲರಿಗೂ ಧನ್ಯವಾದ ಸಲ್ಲಿಸುತ್ತೇವೆ ಎಂದರು.

ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ನಾವು ಶಾಸಕರಾದ ನಂತರ ನಗರೋತ್ಥಾನ ಯೋಜನೆಯಡಿ ಅನುದಾನ ಮಂಜೂರಾಗಿದ್ದರೂ ಹಣಕಾಸಿನ ಸಮಸ್ಯೆಯಿಂದ ಮೂರು ಬಾರಿ ಟೆಂಡರ್ ಮುಂದೂಡಲ್ಪಟ್ಟಿತ್ತು. ಇದೀಗ ಹಣ ಬಿಡುಗಡೆ ಮಾಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಮೇದ ಜನಾಂಗದ ಕೃಷ್ಣಪ್ಪ ಇತರರು ಇಲ್ಲಿ ಗರಡಿ ಮನೆಯನ್ನು ನಡೆಸಿಕೊಂಡು ಬಂದಿದ್ದರು. ಗರಡಿ ಮನೆಯನ್ನು ಇಂದಿಗೂ ಮುಂದುವರಿಸುವುದಾದರೆ ಅದಕ್ಕೆ ಅವಕಾಶ ಮಾಡಿಕೊಡಲು ಸಿದ್ದರಿದ್ದೇವೆ ಎಂದರು.

೨೦೨೨-೨೩ರಲ್ಲೇ ನಗರೋತ್ಥಾನದಡಿ ಈ ಸಮುದಾಯ ಭವನಕ್ಕೆ ಅನುದಾನ ಮಂಜೂರಾಗಿತ್ತು. ಬೇರೆ ಬೇರೆ ಕಾರಣಕ್ಕೆ ಟೆಂಡರ್ ಮುಂದೂಡಲ್ಪಟ್ಟಿತ್ತು. ಜನಮೆಚ್ಚುವಂತೆ ಗುಣಮಟ್ಟದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಹಲವು ದೇಶಗಳು ಬಿದಿರನ್ನೇ ಉದ್ಯಮವನ್ನಾಗಿ ಮಾಡಿಕೊಂಡಿವೆ. ಬೆಂಗಳೂರಿನ ಏರ್‌ಪೋರ್ಟ್‌ನ ಟರ್ಮಿನಲ್-೨ ಗೆ ಹೋಗಿ ನೋಡಿದರೆ ಬಿದಿರಿನ ಸುಂದರ ಉಪಯೋಗ ಹೇಗೆ ಮಾಡಿಕೊಳ್ಳಬಹುದು ಎನ್ನುವುದನ್ನು ಕಾಣಬಹುದು ಎಂದರು.

ಮೇದ ಸಮಾಜದ ಮುಖಂಡ, ಪತ್ರಕರ್ತ ಪಿ.ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಸಮಾಜದವರು ಆರ್ಥಿಕ ಮತ್ತು ಶೈಕ್ಷಣಿಕವಾಗಿ ಈಗ ಮುಂದುವರೆಯುತ್ತಿದ್ದಾರೆ, ನಮ್ಮ ಸಮುದಾಯಕ್ಕೆ ಸಮುದಾಯ ಬೇಕೆಂದು ಹಿಂದೆ ಜಿಲ್ಲಾಧಿಕಾರಿಗಳಾಗಿದ್ದ ರಮೇಶ್, ಶಾಸಕ ಸಿ.ಟಿ ರವಿ ಮತ್ತು ನಗರಸಭೆ ಆಯುಕ್ತರಾದ ಬಸವರಾಜ್ ಅವರಿಗೆ ಮನವಿ ಮಾಡಿದ್ದೆವು ಅವರ ಶ್ರಮ ಮತ್ತು ಈಗಿನ ಶಾಸಕರಾದ ಹೆಚ್.ಡಿ ತಮ್ಮಯ್ಯ ರವರ ನೇತೃತ್ವದಲ್ಲಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರೆವೇರಿಸಿರುವುದು ಅತ್ಯಂತ ಸಂತೋಷದ ವಿಷಯ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ನಾಸೀರ್, ಗುರುಮಲ್ಲಪ್ಪ, ಕವಿತಾ ಶೇಖರ್, ಮಾಜಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಪೌರಾಯುಕ್ತ ಬಸವರಾಜ್, ಮೇದಾ ಸಜಾಜದ ಅಧ್ಯಕ್ಷ ಪಟೇಲ್ ಕುಮಾರ್, ಸಮಾಜದ ಮುಖಂಡರುಗಳಾದ ಶೋಭಾ, ಜಗದೀಶ್, ಮಲ್ಲೇನಹಳ್ಳಿ ಶಂಕರ್, ಸುಮಾ, ಶೋಭಾ ಮಂಜುನಾಥ್, ಗುತ್ತಿಗೆದಾರರಾದ ಸಂತೋಷ್ ಕುಮಾರ್, ಪವನ್, ರವಿಶಂಕರ್, ಮತ್ತಿತರರು ಉಪಸ್ಥಿತರಿದ್ದರು.

The Meda community has always remained strong with society

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...