Home namma chikmagalur ಕೇಂದ್ರದ ನರೇಂದ್ರ ಮೋದಿ ಸರ್ಕಾರ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆ
namma chikmagalurchikamagalurHomeLatest News

ಕೇಂದ್ರದ ನರೇಂದ್ರ ಮೋದಿ ಸರ್ಕಾರ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆ

Share
Share

ಚಿಕ್ಕಮಗಳೂರು: ಸ್ವಾರ್ಥಕ್ಕೆ ಆಸೆಪಡದೇ, ನಿಸ್ವಾರ್ಥದಿಂದ ಭಾರತೀಯರ ಉಜ್ವಲ ಭವಿ ಷ್ಯಕ್ಕೆ ಹಗಲಿರುನ್ನದೇ ನಿರಂತರ ದುಡಿಯುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಇಡೀ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆಯಾಗಿದೆ ಎಂದು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರ ೧೧ ವ?ಗಳ ಅಭಿವೃದ್ಧಿ ಕುರಿತ ವಿಕಸಿತ ಭಾರತ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಬಡವರು, ದೀನದಲಿತರ ಏಳಿಗೆಗೆ ಹಲವು ಯೋಜನೆಗಳನ್ನು ಅನುಷ್ಟಾನಕ್ಕೆ ತಂದು ದಶಕವನ್ನು ಪೂರೈಸಿ ಸಾಧನೆ ಮಾಡಿದೆ. ಸದಾಕಾಲ ರಾಷ್ಟ್ರ ಹಿತಕ್ಕಾಗಿ ದುಡಿಯುತ್ತಿರುವ ಪ್ರಧಾನಿ ಮಂತ್ರಿಗ ಳು ಭಾರತಾಂಬೆಗೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುತ್ತಿರುವ ವಿಚಾರವನ್ನು ಎಲ್ಲೆಡೆ ಪಸರಿಸಬೇಕಿದೆ ಎಂದರು.

ಹಿಂದಿನ ಆಟಲ್ ಬಿಹಾರಿ ವಾಜಪೇಯಿ ಅಭಿವೃದ್ದಿ ಕಾರ್ಯಗಳು ತಳಮಟ್ಟದಿಂದ ಪ್ರಚಾರಗೊಳ್ಳದ ಕಾ ರಣ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಆದರೀಗ ಮೋದಿ ಸರ್ಕಾರದ ಯೋಜನೆಗಳು ಜನಸಾಮಾ ನ್ಯರಿಗೆ ಅರಿವು ಹಾಗೂ ವಿ.ಪಕ್ಷಗಳ ಸುಳ್ಳಿನ ಮಾಹಿತಿಗಳಿಂದ ಹೊರತಂದು ಸಾಧನೆಯ ಸತ್ಯಾಸತ್ಯತೆಯನ್ನು ಕಾರ್ಯಕರ್ತರು ಮನದಟ್ಟು ಮಾಡಬೇಕಿದೆ ಎಂದು ತಿಳಿಸಿದರು.

ರಾಷ್ಟ್ರದಲ್ಲೇ ಭಾಜಪ ಅತ್ಯಂತ ಹೆಚ್ಚು ಸದಸ್ಯತ್ವ ಹೊಂದಿರುವ ದೊಡ್ಡ ರಾಜಕೀಯ ಪಕ್ಷವಾಗಿದೆ. ಹೀಗಾ ಗಿ ಕೇಂದ್ರದಿಂದ ಕೈಗೊಂಡಿರುವ ಅಭಿವೃಧ್ದಿ ಯೋಜನೆ, ಪ್ರವಾಸಿಗರ ಸಾವಿಗೆ ಆಪರೇಷನ್ ಸಿಂಧೂರ್ ಮೂ ಲಕ ತಕ್ಕಉತ್ತರದ ಪ್ರತೀಕಾರ, ಸರ್ಜಿಕಲ್ ಸ್ಟ್ರೈಕ್ ಯಶಸ್ವಿ ಸೇರಿದಂತೆ ಜನಪರ ಆಡಳಿತದ ಮಾ ಹಿತಿಗಳನ್ನು ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.

ದೇಶದಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯಪೂರ್ವದಿಂದಲೂ ಸುಳ್ಳನ್ನೇ ಸತ್ಯವೆಂದು ಪ್ರತಿಪಾದಿಸುವಿಕೆ, ತುರ್ತು ಪರಿಸ್ಥಿತಿ ಹೇರಿಕೆಯಿಂದ ಜನತೆಗೆ ದಿಕ್ಕು ತಪ್ಪಿಸುತ್ತಿದೆ. ಇಂದಿಗೂ ಆ ವಂಶದ ಕುಡಿ ರಾಹುಲ್‌ಗಾಂಧಿ ರಾಷ್ಟ್ರ ಹಾಗೂ ಪ್ರಧಾನಿಗಳ ವಿರುದ್ಧ ಸುಖಸುಮ್ಮನೆ ವಿರೋಧಿ ಹೇಳೀಕೆ ನೀಡಿ ಕೊನೆಗೆ ಆತನೇ ಪೇಚಾಡುವಂಥ ಸ್ಥಿತಿ ನಿರ್ಮಿಸಿಕೊಳ್ಳುತ್ತಿವೆ ಎಂದರು.

ಪ್ರಪಂಚದಲ್ಲಿ ಭಾರತ ರಾಷ್ಟ್ರ ಪ್ರಸ್ತುತ ಐದನೇ ಸ್ಥಾನದ ಗರಿಯಲ್ಲಿದ್ದು ಮೂರನೇ ಸ್ಥಾನಕ್ಕೆ ಕೊಂಡೊ ಯ್ಯುವ ಶಕ್ತಿ ಕಾರ್ಯಕರ್ತರು ಮತ್ತು ಜನತೆಯಿಂದಾಗಬೇಕು. ಹೀಗಾಗಿ ಕೇಂದ್ರದ ಸಂಪೂರ್ಣ ಸಾಧನೆಯ ವರದಿಯನ್ನು ಪ್ರತಿಬೂತ್ ಹಾಗೂ ಅಕ್ಕಪಕ್ಕದಲ್ಲಿ ಅಳಿಲು ಸೇವೆಯಂತೆ ಪ್ರಚಾರಗೊಂಡಾಗ ಖಂಡಿತ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿ.ಪಕ್ಷಗಳ ಬೇಡದ ವಿಷಯಗಳಿಗೆ ಕಾರ್ಯಕರ್ತರು ಕಿವಿಗೊಡದೇ ಸಕಾರಾತ್ಮಕವಾಗಿ ಚಿಂತಿಸುವ ಆ ಲೋಚನೆ ಹೊಂದಬೇಕು. ಕೇಂದ್ರ ಸರ್ಕಾರದ ಸಾಧನೆ ಇಂದು ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಸಮ ಯವಾಗಿದೆ. ಸಾಮಾನ್ಯವಾಗಿ ರಾಜಕೀಯ ಆಳ್ವಿಕೆ ಕೇಳಿದ್ದೇವೆ. ಆದರೆ ಮೋದಿ ಸರ್ಕಾರದ ವಿಭಿನ್ನ, ವಿಶೇಷ ಆಳ್ವಿಕೆ ಬೇರೆ ಯಾವ ಪಕ್ಷದಲ್ಲೂ ಕೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ವಿಕಸಿತ ಭಾರತ ಕಾರ್ಯಾಗಾರದ ಸಂಚಾಲಕ ಈಶ್ವರಹಳ್ಳಿ ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಭಾಜಪ ರಾಷ್ಟ್ರೀಯ ಅಧ್ಯಕ್ಷರ ಆದೇಶದಂತೆ ಜಿಲ್ಲೆಯಾದ್ಯಂತ ೧೧ನೇ ವರ್ಷದ ಕೇಂದ್ರದ ಸಾಧನೆ ಕುರಿತು ಕಾ ರ್ಯಾಗಾರ ಹಮ್ಮಿಕೊಳ್ಳಲಾಗಿದ್ದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಧನೆ ಮಾಹಿತಿ ತಿಳಿಸುವಂತಾಗಲೂ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

ಕಾರ್ಯಕರ್ತರು ಹುರುಪಿನಿಂದ ಕೇಂದ್ರದ ವಿಶ್ವಕರ್ಮ, ಗ್ರಾಮ್‌ಸಡಕ್, ಪಿಎಂಆವಾಜ್, ಮಹಿಳಾ ಸ ಬಲೀಕರಣದ ಯೋಜನೆಗಳ ವಿವರಗಳನ್ನು ಪ್ರತಿ ಬೂತ್‌ಗಳಲ್ಲಿ ಹಮ್ಮಿಕೊಳ್ಳಲು ಜೂನ್ ೨೫ ರಿಂದ ಜುಲೈ ಮಾಹೆತನಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಎಲ್ಲರೂ ಒಮ್ಮತ ಹಾಗೂ ಸಹಕಾರದಿಂದ ಸಾರ್ವಜನಿಕರಿ ಗೆ ಅರಿವು ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ಬಿಜೆಪಿ ಪ್ರಧಾ ನ ಕಾರ್ಯದರ್ಶಿಗಳಾದ ಬೆಳವಾಡಿ ರವೀಂದ್ರ, ಪುಣ್ಯ ಪಾಲ್, ಡಾ.ನರೇಂದ್ರ, ರಾಜ್ಯ ಬಿಜೆಪಿ ಎಸ್ಸಿ ಮೋ ರ್ಚಾ ಕಾರ್ಯದರ್ಶಿ ಸೀತಾರಾಭರಣ್ಯ, ಕಾರ್ಯಗಾರದ ಸಹ ಸಂಚಾಲಕ ಶರತ್, ನಗರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಮಧುಕುಮಾರರಾಜ ಅರಸ್, ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಮುಗು ಳುವಳ್ಳಿ ದಿನೇಶ್ ಉಪಸ್ಥಿತರಿದ್ದರು.

The Narendra Modi government at the Centre is a rare democratic regime the world has ever seen.

 

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...