Home namma chikmagalur chikamagalur ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ
chikamagalurHomeLatest Newsnamma chikmagalur

ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ

Share
Share

ಚಿಕ್ಕಮಗಳೂರು:  ಶ್ರೀ ಬೀರಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕೆಂಪ ನಹಳ್ಳಿ ಕನಕ ಗೆಳೆಯರ ಬಳಗದಿಂದ ನಗರ ಸಮೀಪ ಆಯೋಜಿಸಿದ್ಧ ಎರಡನೇ ವರ್ಷದ ಜೋಡಿಎತ್ತಿನ ಗಾಡಿ ಓಟದ ಸ್ಪರ್ಧೆಗೆ ಬುಧವಾರ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಸುಮಾರು ೪೦ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದು ಪ್ರಥಮ ಹಾ ಗೂ ದ್ವಿತೀಯ ಹೆಚ್.ಎಫ್. ಡಿಲಕ್ಸ್ ಬೈಕ್, ತೃತೀಯ ೨೫ ಸಾವಿರ ನಗದು ಟ್ರೋಫಿ ಮತ್ತು ಚತುರ್ಥ ವಿಜೇ ತರಿಗೆ ೨೦ ಸಾವಿರ ನಗದು ಆಕರ್ಷಕ ಟ್ರೋಫಿ ವಿತರಿಸಲಾಗುವುದು ಎಂದು ಸ್ಪರ್ಧೆಯ ಆಯೋಜಕ ಕೆಂಪ ನಹಳ್ಳಿ ಸುನೀಲ್ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಂಜುಳಾ ಲಕ್ಷ್ಮಣ್, ಎಲ್.ಬಿ.ಎಸ್. ಶಾಲಾಭಿವೃದ್ದಿ ಸಮಿ ತಿ ಅಧ್ಯಕ್ಷ ಪ್ರತೀಪ್, ಕೆಂಪನಹಳ್ಳಿ ಗ್ರಾಮಸ್ಥರಾದ ಚರಣ್, ಹರೀಶ್, ರಾಕೇಶ್, ಶಶಾಂಕ್, ಸಚಿನ್, ಕಾರ್ತೀಕ್ , ವರುಣ್, ಡಿಂಪು, ವಸಂತ್, ದರ್ಶನ್ ಮತ್ತಿತರರು ಹಾಜರಿದ್ದರು.

The start of the cart race competition

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...