Home Crime News ಮೊಬೈಲ್ ಕದ್ದು ಬ್ಯಾಂಕ್ ಖಾತೆ ಖಾಲಿ ಮಾಡಿದ ಖದೀಮರು
Crime NewsHomeKadurLatest Newsnamma chikmagalur

ಮೊಬೈಲ್ ಕದ್ದು ಬ್ಯಾಂಕ್ ಖಾತೆ ಖಾಲಿ ಮಾಡಿದ ಖದೀಮರು

Share
Share

ಚಿಕ್ಕಮಗಳೂರು: ಕಡೂರು ಬಸ್ ನಿಲ್ದಾಣದಲ್ಲಿ ಮೆಸ್ಕಾಂ ನೌಕರರೋರ್ವ ಮೊಬೈಲ್ ಕಳ್ಳತನ ಮಾಡಿದ ಖದೀಮರು ಆ ಮೊಬೈಲ್ ಬಳಸಿಕೊಂಡು ಖಾತೆಯಲ್ಲಿದ್ದ ಹಣವನ್ನು ಖಾಲಿ ಮಾಡಿರುವ ಘಟನೆ ನಡೆದಿದೆ.

ಆಲ್ದೂರು ಮೂಲದ ಮೆಸ್ಕಾಂ ನೌಕರ ಪ್ರದೀಪ್ ಎಂಬುವರು ಕಡೂರು ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಅವರ ಮೊಬೈಲ್ ಕಳ್ಳತನವಾಗಿತ್ತು. ಕೂಡಲೇ ಆಲ್ದೂರಿಗೆ ಆಗಮಿಸಿದ ಅವರು ಪೊಲೀಸರ ಮಾರ್ಗದರ್ಶನದಂತೆ ಲಾಸ್ಟ್ ರಿಪೋರ್ಟ್ ಎಂಬ ಪೋರ್ಟಲ್ ನಲ್ಲಿ ಮೊಬೈಲ್ ನ ಎಲ್ಲಾ ದಾಖಲೆಯ ವರದಿಯನ್ನು ಸಲ್ಲಿಕೆ ಮಾಡಿ ಮೊಬೈಲ್ ಬ್ಲಾಕ್ ಮಾಡಿಸಿದ್ದರು.

ಬಳಿಕ ಕಳೆದುಹೋದ ಸಿಮ್ ಕಾರ್ಡ್ ಬದಲಾಗಿ ಹೊಸ ಸಿಮ್ ಕಾರ್ಡ್ ಖರೀದಿಸಿ ಅಂದೆ ಸಿಮ್ ಆಕ್ಟಿವೇಶನ್ ಮಾಡಿಸಿಕೊಂಡಿದ್ದರು. ಬಳಿಕ ಹೊಸತಾಗಿ ಮತ್ತೊಂದು ಮೊಬೈಲನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಲು ಹೋದಾಗ ತಮ್ಮ ಖಾತೆಯಲ್ಲಿ ಹಣ ಇಲ್ಲದಿರುವುದು ಅರಿವಿಗೆ ಬಂದಿದೆ.

ಕೂಡಲೇ ಬ್ಯಾಂಕ್ ನಲ್ಲಿ ತಮ್ಮ ಖಾತೆ ಬಗ್ಗೆ ವಿಚಾರ ಮಾಡಿದಾಗ1,03,923 ರೂ. ಇದ್ದ ಬ್ಯಾಲೆನ್ಸ್ ಮೊಬೈಲ್ ಕಳೆದು ಹೋದ ಬಳಿಕ 9,873 ರೂ. ಆಗಿರುವುದು ತಿಳಿದು ಬಂದಿದೆ. ಕೂಡಲೇ ಬ್ಯಾಂಕ್ ನ ಎಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿಸಿ ಆಲ್ದೂರು ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ತಮ್ಮ ಖಾತೆಯಿಂದ ಅಕ್ರಮವಾಗಿ 94,050 ರೂ. ವರ್ಗಾವಣೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ತಮ್ಮ ಹಣ ವಾಪಸ್ ಕೊಡಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಪ್ರಕರಣ ಚಿಕ್ಕಮಗಳೂರು ಸಿಇಎನ್ ಠಾಣೆಗೆ ವರ್ಗಾವಣೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

The thieves stole the mobile phone and emptied the bank account.

Share

Leave a comment

Leave a Reply

Your email address will not be published. Required fields are marked *

Don't Miss

ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು

ಕಡೂರು: ಸಖರಾಯಪಟ್ಟಣ ಸಮೀಪದ ಹಿರೇಗೌಜ ಗೇಟ್ ಬಳಿ ನಡೆದ ರಸ್ತೆ ಅಪ ಘಾತದಲ್ಲಿ ಗೂಡ್ಸ್ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾರೆ. ಹಾಸನ ಮೂಲದ ಯಶವಂತ್ (26) ಮೃತಪಟ್ಟವರು. ಇವರು ಬೆಂಗಳೂರಿನಲ್ಲಿ...

ಮಳಲೂರು ಏತ ನೀರಾವರಿ ಯೋಜನೆಗೆ ಮರುಜೀವ

ಚಿಕ್ಕಮಗಳೂರು: ಕಾಫಿನಾಡಿನ ರೈತರ ಬಹುದಿನಗಳ ಕನಸಾಗಿದ್ದ ಮಳಲೂರು ಏತ ನೀರಾವರಿ ಯೋಜನೆಗೆ ಕೊನೆಗೂ ಮರುಜೀವ ಬಂದಿದ್ದು, ರಾಜ್ಯ ಸರ್ಕಾರದಿಂದ 11 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಈ ಮಹತ್ವದ ಬೆಳವಣಿಗೆಯ ಕುರಿತು...

Related Articles

ಜೆಸಿಬಿ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ

ತರೀಕೆರೆ: ನಂದಿಬಟ್ಟಲು ಗ್ರಾಮದ ಕೆರೆಯನ್ನು ಮೂರು ವರ್ಷಗಳ ಅವಧಿಗೆ ಗುತ್ತಿಗೆಗೆ ಪಡೆದು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ...

ಗಾಂಜಾ ಪೆಡ್ಲರ್ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಚಿಕ್ಕಮಗಳೂರು: ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಗಾಂಜಾ ಪೆಡ್ಲರ್ ನನ್ನು...

ಕೋಟ್ಯಂತರ ರೂಪಾಯಿ ಮೌಲ್ಯದ ಬ್ಯಾಂಕ್ ಆಸ್ತಿ ಪತ್ರಗಳೊಂದಿಗೆ ಮಹಿಳೆ ನಾಪತ್ತೆ

ಕಡೂರು: ಕೋರ್ಟ್ ವಿಚಾರಣೆಗಾಗಿ ಚಿಕ್ಕಮಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆಯೊಬ್ಬರು ಮನೆಯಲ್ಲಿದ್ದ ನೂರಾರು ಗ್ರಾಂ...

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ...