Home namma chikmagalur chikamagalur ಕೇಂದ್ರ ಬಜೆಟ್‌ ನಲ್ಲಿ ದೇಶದ ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು
chikamagalurHomeLatest Newsnamma chikmagalur

ಕೇಂದ್ರ ಬಜೆಟ್‌ ನಲ್ಲಿ ದೇಶದ ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಆಶೋತ್ತರ ಕೇವಲ ಚುನಾವಣೆ ಗೆಲ್ಲುವುದಲ್ಲ, ದೇಶ ಗೆಲ್ಲಿಸುವುದು, ಬಡವರಿಗೆ ಬಲಕೊಡುವುದಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.

ಕೇಂದ್ರ ಸರ್ಕಾರದ ಬಜೆಟ್‌ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ ಕೇವಲ ಚುನಾವಣೆ ಗೆಲ್ಲುವುದಲ್ಲ.

ದೇಶದ ಮೂಲಸೌಕರ್ಯಾಭಿವೃದ್ಧಿಗೆ ಒತ್ತುಕೊಡುವುದಾಗಿದೆ. ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸುವ ಮೂಲಕ ಉದ್ಯೋಗ ಸೃಷ್ಟಿ ಮಾಡುವುದಾಗಿದೆ. ವಸತಿ ರಹಿತರಿಗೆ ವಸತಿ ಕಲ್ಪಿಸುವುದು. ಈ ಎಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರ ಬಜೆಟ್‌ ರೂಪಿಸಿದೆ ಎಂದರು.

100 ಲಕ್ಷ ಕೋಟಿ ರು, ವೆಚ್ಚದಲ್ಲಿ ಭಾರತ ಆತ್ಮನಿರ್ಬರವಾಗಬೇಕು ಎನ್ನುವುದು ಬಜೆಟ್ ಉದ್ದೇಶವಾಗಿದೆ. ನಮ್ಮ ಬೆಳವಣಿಗೆಯ ದರ 7.8 ದಾಟಿದೆ, ಇದು ಒಂದು ರೀತಿ ದಾಖಲೆಯಾಗಿದೆ. ಭಾರತ ಆರ್ಥಿಕವಾಗಿ ಜಗತ್ತಿನ 4ನೇ ಅತಿ‌ ದೊಡ್ಡ ಶಕ್ತಿವಾಗಿದ್ದು, ಶೀಘ್ರವೇ 3ನೇ ಸ್ಥಾನಕ್ಕೆ ಏರುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಭಾರತಕ್ಕೆ ಸ್ವಾತಂತ್ರ್ಯ ಬಂದು 2047ಕ್ಕೆ 100 ವರ್ಷವಾಗಲಿದೆ. ಆ ವೇಳೆಗೆ ಭಾರತ ಆರ್ಥಿಕ-ಜ್ಞಾನದಲ್ಲಿ ಬಲಶಾಲಿಯಾಗಬೇಕು. ಭಾರತ ಜಗತ್ತಿನ ಕಲ್ಯಾಣ ಬಯಸುವ ಸಿದ್ದಾಂತ ಹೊಂದಿರುವ ರಾಷ್ಟ್ರವಾಗಿದೆ. ಭಾರತದ ಸೈದ್ದಾಂತಿಕ ವಿಚಾರಧಾರೆ ಮೂಲಕ ಜಗತ್ತಿನ ಕಲ್ಯಾಣವಾಗಬೇಕು.

ಈ ಕಲ್ಯಾಣಕ್ಕೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಆರ್ಥಿಕ ಚೈತನ್ಯ ಮೂಡಿಸಲಿದೆ. ಎಲ್ಲಾ ಕ್ಷೇತ್ರದಲ್ಲೂ ಆರ್ಥಿಕ ಹೊಸ ಹುರುಪು ನೀಡುವ ಬಜೆಟ್ ಮಂಡಿಸಿದ್ದಾರೆ. ಜನರ ಆಶೋತ್ತರಗಳನ್ನ ಈಡೇರಿಸುವ ಕಡೆ ವಿಶ್ವಾಸ ಉಳಿಸಿಕೊಂಡಿದ್ದಾರೆ ಎಂದರು.

The Union Budget emphasizes on the development of the country’s infrastructure.

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...