Home namma chikmagalur ಮನೆಮನೆಗೆ ಪತ್ರಿಕೆ ವಿತರಣೆ ಮಾಡುವ ವಿತರಕರ ಕಾರ್ಯ ಶ್ಲಾಘನೀಯ
namma chikmagalurchikamagalurHomeLatest News

ಮನೆಮನೆಗೆ ಪತ್ರಿಕೆ ವಿತರಣೆ ಮಾಡುವ ವಿತರಕರ ಕಾರ್ಯ ಶ್ಲಾಘನೀಯ

Share
Share

ಚಿಕ್ಕಮಗಳೂರು: ಮಳೆ-ಗಾಳಿ ಚಳಿ ಲೆಕ್ಕಿಸದೆ ಪ್ರತಿದಿನ ಬೆಳಗ್ಗೆ ಮನೆಮನೆಗೆ ಪತ್ರಿಕೆ ವಿತರಣೆ ಮಾಡುವ ವಿತರಕರ ಕಾರ್ಯ ಶ್ಲಾಘನೀಯ ಎಂದು ನಗರಸಭಾಧ್ಯಕ್ಷೆ ಶೀಲಾದಿನೇಶ್ ತಿಳಿಸಿದರು.

ಅವರು ಇಂದು ನಗರದ ಹನುಮಂತಪ್ಪ ಸರ್ಕಲ್‌ನ ಉಮಾರಾಮ್ ಸಂಕೀರ್ಣದ ಬಳಿ ಚಿಕ್ಕಮಗಳೂರು ನಗರ ಪತ್ರಿಕಾ ಏಜೆಂಟರು ಮತ್ತು ವಿತರಕರ ಸಂಘ ಏರ್ಪಡಿಸಿದ್ದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೆಯನ್ನು ಪ್ರತಿಯೊಬ್ಬರೂ ಕೊಂಡುಕೊಂಡು ಓದುವ ಮೂಲಕ ಸಮಾಜದಲ್ಲಿ ನಡೆಯುವ ಆಗುಹೋಗುಗಳನ್ನು ತಿಳಿದುಕೊಳ್ಳಲು ಪತ್ರಿಕಾ ವಿತರಕರ ಕಾರ್ಯ ಸಹಕಾರಿ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ಪತ್ರಿಕಾ ವಿತರಕರಿಗೆ ಆಯಾ ಮಾಧ್ಯಮ ಸಂಸ್ಥೆ ರೈನ್ ಕೋಟ್ ಮುಂತಾದ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ ಅವರು, ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರಿಗೆ ಶುಭ ಹಾರೈಸಿದರು.

ಪತ್ರಿಕಾ ವಿತರಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು ಸರ್ಕಾರ ಅಗತ್ಯ ಸೌಕರ್ಯ ಕಲ್ಪಿಸಬೇಕೆಂದು ಹೋರಾಟ ನಡೆಯುತ್ತಿದ್ದು, ಇವರ ಈ ಎಲ್ಲಾ ಬೇಡಿಕೆಗಳು ಶೀಘ್ರವೇ ಇತ್ಯರ್ಥವಾಗಲಿ ಎಂದು ಹೇಳಿದರು.

ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರವಾಗುವ ವಿಷಯಗಳು ಕ್ಷಣಿಕ ಮಾತ್ರವಾಗಿದ್ದು, ಮುದ್ರಣ ಮಾದ್ಯಮದ ಪತ್ರಿಕೆಗಳು ಪ್ರಕಟ ಮಾಡುವ ಸುದ್ದಿಗಳು ಸದಾ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯುತ್ತವೆ ಎಂದು ತಿಳಿಸಿದರು.

ಸಾರ್ವಜನಿಕರು ಪತ್ರಿಕೆ ಓದುವ ಅಭಿರುಚಿಯಿಂದ ದೂರವಾಗುತ್ತಿರುವುದು ವಿಷಾಧನೀಯ. ಸರ್ವರೂ ಪತ್ರಿಕೆಗಳನ್ನು ಕೊಂಡು ಓದುವ ಮೂಲಕ ಮಾದ್ಯಮಗಳನ್ನು ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾ ವಿತರಕರ ಮನವಿಯಲ್ಲಿರುವ ವಿವಿಧ ಬೇಡಿಕೆಗಳನ್ನು ಶೀಘ್ರವಾಗಿ ನಗರಸಭೆ ಇತ್ಯರ್ಥ ಮಾಡುತ್ತದೆ. ದೊಡ್ಡ ಜಾಗ ಒಂದನ್ನು ಗುರ್ತಿಸಿ ನೀಡಬೇಕೆಂದು ಮನವಿ ಮಾಡಿದ ಅವರು, ಇದಕ್ಕೆ ಶಾಸಕರು, ವಿಧಾನ ಪರಿಷತ್ ಸದಸ್ಯರ ಮೇಲೆ ಒತ್ತಡ ತರಲು ಬದ್ಧವಾಗಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಐ.ಕೆ. ಓಂಕಾರೇಗೌಡ ಮಾತನಾಡಿ, ಪತ್ರಿಕಾ ವಿತರಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಹೋರಾಟ ರೂಪಿಸಿದರೆ ಅವರ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಬೆಂಬಲ ವ್ಯಕ್ತಪಡಿಸಿದರು.

ಮೊದಲಿಗೆ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಶ್ರೀಧರ್ ಮೋಹನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಧ ರವಿಕುಮಾರ್, ಪತ್ರಿಕಾ ವಿತರಕರ ಸಂಘದ ಸದಸ್ಯರುಗಳಾದ ಷಣ್ಮುಖ, ವಿಜಯ್‌ಕುಮಾರ್, ಗಜೆಂದ್ರ, ಅಭಿಲಾಷ್, ನಂಜುಂಡ ಮತ್ತಿತರರು ಉಪಸ್ಥಿತರಿದ್ದರು.

The work of door-to-door newspaper distributors is commendable.

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

Related Articles

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...