Home namma chikmagalur chikamagalur ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ
chikamagalurHomeLatest Newsnamma chikmagalur

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

Share
Share

ಶೃಂಗೇರಿ: ತಾಲೂಕಿನ ಕಿಗ್ಗಾ ಸಮೀಪದ ಯಡದಳ್ಳಿ ಗ್ರಾಮದ ಕೊಚ್ಚಾರಿನಲ್ಲಿರುವ ಐತಿಹಾಸಿಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೈವ ಸನ್ನಿಧಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿಯ ಆಭರಣಗಳು ಹಾಗೂ ಕಾಣಿಕೆ ಹಣ ಲೂಟಿಯಾಗಿದೆ.

ಏ. 17ರ ರಾತ್ರಿ ಅರ್ಚಕರು ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿಕೊಂಡು ಹೋಗಿದ್ದ ಸಂದರ್ಭವನ್ನು ಬಳಸಿಕೊಂಡ ಖದೀಮರು, ದೇವಸ್ಥಾನದ ಮುಖ್ಯ ದ್ವಾರ ಹಾಗೂ ಗರ್ಭಗುಡಿಯ ಬೀಗವನ್ನು ಒಡೆದು ಒಳನುಗ್ಗಿದ್ದಾರೆ.

ದೇವಸ್ಥಾನದ ಗರ್ಭಗುಡಿಯಲ್ಲಿದ್ದ ಸುಮಾರು 1,50,000 ರೂಪಾಯಿ ಮೌಲ್ಯದ ಬೆಳ್ಳಿಯ ಪ್ರಭಾವಳಿ, 30,000 ರೂಪಾಯಿ ಬೆಲೆಯ ಬೆಳ್ಳಿಯ ಚೊಂಬು, 15,000 ರೂಪಾಯಿ ಮೌಲ್ಯದ ಬೆಳ್ಳಿಯ ತಟ್ಟೆ, ಸುಮಾರು 25,000 ರೂಪಾಯಿ ಬೆಲೆಬಾಳುವ ಎರಡು ಬೆಳ್ಳಿಯ ಕೌಳಿಗೆ ಹಾಗೂ ಸೌಟುಗಳನ್ನು ಕಳ್ಳರು ದೋಚಿದ್ದಾರೆ.

ಇಷ್ಟೇ ಅಲ್ಲದೆ, ಭಕ್ತರು ಸಮರ್ಪಿಸಿದ್ದ ಸುಮಾರು 20,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆಯನ್ನೂ ಸಹ ಖದೀಮರು ಹೊತ್ತೊಯ್ದಿದ್ದು, ಒಟ್ಟು 2,40,000 ರೂಪಾಯಿ ಮೌಲ್ಯದ ಸ್ವತ್ತು ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ.

ಮರುದಿನ ಬೆಳಗ್ಗೆ ಎಂದಿನಂತೆ ಪೂಜೆಗಾಗಿ ಅರ್ಚಕ ಶೃಂಗೇಶ್ವರ ಭಟ್ ಅವರು ದೇವಸ್ಥಾನಕ್ಕೆ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದ್ದು, ಕೂಡಲೇ ಸುಧೀಂದ್ರ ಬಿ ಎಸ್ ಎಂಬುವವರು ಈ ಬಗ್ಗೆ ಶೃಂಗೇರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ತನಿಖೆ ಚುರುಕುಗೊಳಿಸಿದ್ದಾರೆ. ಪವಿತ್ರ ಕ್ಷೇತ್ರದಲ್ಲಿ ನಡೆದ ಈ ಕಳ್ಳತನದ ಘಟನೆಯಿಂದ ಭಕ್ತರಲ್ಲಿ ಆತಂಕ ಮನೆಮಾಡಿದೆ.

Theft at Sri Lakshmi Narasimha Swamy Temple

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...