Home namma chikmagalur ಕಳವು ಆರೋಪಿಗಳ ಸೆರೆ- ಚಿನ್ನಾಭರಣ ವಶ
namma chikmagalurchikamagalurHomeLatest News

ಕಳವು ಆರೋಪಿಗಳ ಸೆರೆ- ಚಿನ್ನಾಭರಣ ವಶ

Share
Share

ತರೀಕೆರೆ: ಯರೇಹಳ್ಳಿ ತಾಂಡ್ಯಾದ ಆಶಾ ಎಂಬುವರ ಮನೆಯಲ್ಲಿ  ಮನೆಯ ಚಾವಣಿಯ ಶೀಟ್ ತೆಗೆದು ಒಳ ನುಗ್ಗಿ 96 ಗ್ರಾಂ ಚಿನ್ನಾಭರಣ, ₹8 ಸಾವಿರ ನಗದು ಕಳ್ಳತನವಾಗಿದ್ದು, ಈ ಬಗ್ಗೆ ತರೀಕೆರೆ ಪೊಲಿಸ್ ಠಾಣೆಯಲ್ಲು ದೂರು ದಾಖಲಾಗಿತ್ತು.

ಕಳ್ಳರ ಪತ್ತೆಗಾಗಿ ತರೀಕೆರೆ ಠಾಣಾ ಅಧಿಕಾರಿ, ಸಿಬ್ಬಂದಿಯ ವಿಶೇಷ ತಂಡ ರಚಿಸಲಾಗಿತ್ತು.

ತಂಡವು ಆರೋಪಿಗಳಾದ ಅದೇ ಗ್ರಾಮದ ರಾಮಕೃಷ್ಣ, ಮೇಘರಾಜ್ ಎಂಬುವರನ್ನು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಅವರಿಂದ ₹9.63 ಲಕ್ಷ ಮೌಲ್ಯದ ಚಿನ್ನಾಭರಣ, ₹4,400 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ತರೀಕೆರೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ರಾಮಚಂದ್ರ ನಾಯಕ್, ಪಿಎಸ್ಐಗಳಾದ ಮಂಜುನಾಥ್, ಮನ್ನಂಗಿ, ದೇವೇಂದ್ರ ರಾಥೋಡ್, ಸಿಬ್ಬಂದಿ ಎಚ್.ಸಿ. ರಾಮಪ್ಪ, ರುದ್ರೇಶ್, ರಿಯಾಜ್, ಧನಂಜಯ ಸ್ವಾಮಿ, ಶ್ರೀನಿವಾಸ, ಜಿಲ್ಲಾ ಕಚೇರಿ ತಾಂತ್ರಿಕ ಸಿಬ್ಬಂದಿ ರಬ್ಬಾನಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Theft suspects arrested gold jewellery seized
Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...