Home namma chikmagalur ಶ್ರೀ ಅಯ್ಯಪ್ಪನ ಆರಾದನೆಗೆ ಜಾತಿ-ಧರ್ಮವಿಲ್ಲ
namma chikmagalurchikamagalurHomeLatest News

ಶ್ರೀ ಅಯ್ಯಪ್ಪನ ಆರಾದನೆಗೆ ಜಾತಿ-ಧರ್ಮವಿಲ್ಲ

Share
Share

ಚಿಕ್ಕಮಗಳೂರು: ಶ್ರೀ ಅಯ್ಯಪ್ಪಸ್ವಾಮಿ ಸರ್ವಧರ್ಮಿಯರ ಪ್ರತೀಕ. ಸ್ವಾಮಿಯ ಆರಾಧನೆಗೆ ಜಾತಿ, ಧರ್ಮ ಅಡ್ಡಬರುವುದಿಲ್ಲ. ಮಾಲೆ ಹಾಕಿದವರೆಲ್ಲಾ ಅಯ್ಯಪ್ಪನ ಭಕ್ತರೇ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸುವ ೫೨ ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ದೇಶದಲ್ಲಿ ಶಬರಿಮಲೆಗೆ ಮಾಲೆ ಹಾಕಿಕೊಂಡು ಹೋಗಿ ಸ್ವಾಮಿ ದರ್ಶನ ಪಡೆಯವುದು ವಿಶೇಷ. ೪೮ ದಿನ ಕಠಿಣ ವ್ರತ ಮಾಡುವವರಿಗೆ ಮೊದಲ ಪಾದ ಎಂದೂ, ಹೊಸದಾಗಿ ಮಾಲೆ ಹಾಕಿದವರನ್ನು ಕನ್ನಿ ಸ್ವಾಮಿಗಳು ಎಂದು ಕರೆಯುವ ಪದ್ದತಿ ಇದೆ. ನಾನೂ ಕೂಡ ೧೯೮೨ ನೇ ಸಾಲಿನಿಂದಲೂ ಅಯ್ಯಪ್ಪಸ್ವಾಮಿ ಭಕ್ತನಾಗಿದ್ದೇನೆ.

ಪೂಜಾಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಗಟ್ಟಿಯಾಗಿರುವ ದೇಶ ನಮ್ಮದು. ಧರ್ಮದ ನೆಲೆಗಟ್ಟಿನಲ್ಲೂ ನಿಂತಿದೆ. ದೇವನೊಬ್ಬ ನಾಮ ಹಲವು ಎನ್ನುವಂತೆ ಒಬ್ಬೊಬ್ಬರು ಒಂದೊಂದು ದೇವರನ್ನು ಆರಾಧಿಸುತ್ತಾರೆ. ದೇಶದ ರೈತರಿಗೆ ಉತ್ತಮ ಬೆಳೆ, ಬೆಲೆ ನೀಡಲಿ ಎಂದು ಅಯ್ಯಪ್ಪನಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಪ್ರತಿವರ್ಷ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಶ್ರೀ ಅಯ್ಯಪ್ಪಸ್ವಾಮಿಯನ್ನು ಆರಾಧಿಸಿಕೊಂಡು ಬಂದಿರುವುದನ್ನು ನೋಡಿದ್ದೇವೆ. ಇಂದು ಮಾಲೆ ಹಾಕಿದವರೆಲ್ಲಾ ಜನವರಿ ೧೪ ಕ್ಕೆ ಶಬರಿಮಲೆಯಲ್ಲಿ ಮೂಡಿಬರುವ ಜ್ಯೋತಿ ನೋಡಿ ತಮ್ಮ ವೃತಾ ಕೊನೆಗೊಳಿಸುತ್ತರೆ ಎಂದರು.

ನಗರಸಭೆ ಉಪಾಧ್ಯಕ್ಷೆ ಲಲಿತಾಬಾಯಿ, ಸದಸ್ಯರಾದ ಎ.ಸಿ.ಕುಮಾರಗೌಡ, ರೂಪನಾಯಕ್, ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ಅಶೋಕ್ ಸಚ್ಚಿದೇವ್, ಮಾಜಿ ಅಧ್ಯಕ್ಷ ನಾರಾಯಣಗೌಡ, ಸಮಿತಿಯ ಸದಸ್ಯರುಗಳು ಮತ್ತು ಅಯ್ಯಪ್ಪಸ್ವಾಮಿ ಭಕ್ತರು ಮತ್ತಿತರರಿದ್ದರು.

There is no caste or religion in the worship of Sri Ayyappa

 

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...