Home namma chikmagalur chikamagalur ಜಿಲ್ಲೆಗೆ ಮಂತ್ರಿಯಂತೆ, ಮಂತ್ರಿ ಇಲ್ಲವೇ, ಇಲ್ಲ ಸಾಧ್ಯವಿಲ್ಲ !
chikamagalurHomeLatest Newsnamma chikmagalur

ಜಿಲ್ಲೆಗೆ ಮಂತ್ರಿಯಂತೆ, ಮಂತ್ರಿ ಇಲ್ಲವೇ, ಇಲ್ಲ ಸಾಧ್ಯವಿಲ್ಲ !

Share
Share

ಚಿಕ್ಕಮಗಳೂರು: ಕಳೆದ ಇಪ್ಪತೈದು ವರ್ಷಗಳಿಂದ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿಲ್ಲಾ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಂದಿನ ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ್ ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿಯಾದರೂ ಜಿಲ್ಲೆಯವರಿಗೆ ಮಂತ್ರಿ ಸ್ಥಾನ ದೊರೆಯುತ್ತದೆ ಎಂಬ ಲೆಕ್ಕಾಚಾರದಲ್ಲಿ ನಿರತರಾದವರಿಗೆ ಮತ್ತೆ ಹಗಲು ಕನಸು ಅವರಿಸುತ್ತದೆ .

ಜಾರ್ಜ್  ಕಸುಬುಗಾರಿಕೆ ‌ ವ್ಯವಹಾರಸ್ಥನಿಗೆ ಮತ್ತೆ ಜಿಲ್ಲೆಯಲ್ಲಿ ಆಸ್ತಿ ಕೊಳ್ಳಲು ಮಣಿ ಹಾಕುವ ಕಾಂಗ್ರೆಸ್ ನವರು ತಲೆ ಬಗ್ಗಿಸಿ ನಿಲ್ಲುವ ಪರಿಪಾಠ ರೂಢಿಯಾಗಿದೆ. 2004 ರವರೆಗೆ ಜಿಲ್ಲೆಯವರಾದ ಡಿ.ಬಿ.ಚಂದ್ರೇಗೌಡ ಐದು ವರ್ಷಗಳ ಕಾಲ ಜಿಲ್ಲಾ ಉಸ್ತುವಾರಿಯಾಗಿದ್ದು ಬಿಟ್ಟರೆ ಬಿಜೆಪಿ ದಳದ ಕಾಲದಲ್ಲಿ ಮೂರು ತಿಂಗಳು ಆರು ತಿಗಳಿಗೆ ಜಿಲ್ಲಾ ಉಸ್ತುವಾರಿ ಮಂತ್ರಿಯಾದವರು ಹೆಚ್ಚು.

ಬಳ್ಳಾರಿಯ ಶ್ರೀರಾಮುಲು, ಗೂಳಿಹಟ್ಟಿ ಶೇಖರ್, ಡಿ.ಸುಧಾಕರ,  ಬಿ.ಶಿವರಾಂ, ಎಸ್,ಸುರೇಶ್ ಕುಮಾರ್, ಪರಮೇಶ್ವರ್, ಖೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ, ಅರಗ ಜ್ಞಾನೇಂದ್ರ, ಈಶ್ವರಪ್ಪ ಮತ್ತು ಈಗಾ ಜಾರ್ಜ್ ಜಿಲ್ಲಾ ಉಸ್ತುವಾರಿಯಾಗಿ ಬಂದ ಪುಟ್ಟ, ಹೋದ ಪುಟ್ಟ ಎನ್ನುವಂತಾಗಿದೆ.ಇದರ ಮಧ್ಯೆ ಜಿಲ್ಲೆಯವರಾದ ಜೀವರಾಜ್, ಸಿ.ಟಿ.ರವಿ ಆರು ತಿಂಗಳು ವರ್ಷಗಳ ಕಾಲ ಉಸ್ತುವಾರಿ ಮಂತ್ರಿಯಾಗಿದ್ದರು.

ಶೃಂಗೇರಿಯ ರಾಜೇಗೌಡ, ತರೀಕೆರೆಯ ಶ್ರೀನಿವಾಸ್ ಎರಡು ಬಾರಿ ಗೆದ್ದಿರುವ ಶಾಸಕರು ಕಡೂರು ಆನಂದ್, ಮೂಡಿಗೆರೆ ನಯನ ಮತ್ತು ಚಿಕ್ಕಮಗಳೂರಿನ ಹೆಚ್.ಡಿ.ತಮ್ಮಯ್ಯ ಹೊಸದಾಗಿ ಆಯ್ಕೆಯಾದವರು.ಈಗ ಏನಿದ್ದರೂ ರಾಜೇಗೌಡ ಮತ್ತು ಶ್ರೀನಿವಾಸ್ ಮಂತ್ರಿಯಾಗಿ ಜಿಲ್ಲಾ ಉಸ್ತುವಾರಿ ಆಗಬೇಕು ಎಂದು ಲಾಭಿ ಶುರುಮಾಡಿದ್ದಾರೆ.ಆದರೆ ತುಂಬಾ ಕಷ್ಟವಿದೆ. ಏಕೆಂದರೆ ಜಾತಿ ಲೆಕ್ಕಾಚಾರದಲ್ಲಿ ಇವರ ಕನಸಿಗೆ ವಿಘ್ನ ಖಚಿತ ಎನ್ನಲಾಗುತ್ತಿದೆ.

ಒಕ್ಕಲಿಗರ ಖೋಟಾದಲ್ಲಿ ಟಿ.ಡಿ.ರಾಜೇಗೌಡ ಮಂತ್ರಿಯಾಗಲು ಡಿ.ಕೆ.ಶಿವಕುಮಾರ್, ಸೇರಿದಂತೆ ರಾಮಲಿಂಗ ರೆಡ್ಡಿ, ಸುಧಾಕರ ರೆಡ್ಡಿ, ಜಯಚಂದ್ರ, ಶಿವಲಿಂಗೇಗೌಡ, ಮಾಗಡಿ ಬಾಲಕೃಷ್ಣ, ಮಂಡ್ಯದಿಂದ ಚಲುವ ನಾರಾಯಣ ಸ್ವಾಮಿ, ಕೃಷ್ಣಬೈರೇಗೌಡ ಕ್ಯೂ ನಿಂತಿದ್ದಾರೆ.ಹೀಗಾಗಿ ರಾಜೇಗೌಡರಿಗೆ ಕಷ್ಟ ಎನ್ನಲಾಗುತ್ತಿದೆ. ಮೊನ್ನೆ ನಡೆದ ಶೃಂಗೇರಿ ಘಟನೆಗಳ ಬಗ್ಗೆ ಡಿ.ಕೆ ಸೇಡಿಗೆ ಹೊರಟರೆ ರಾಜೇಗೌಡ ಛಾನ್ಸ್ ಪಡೆಯಬಹುದು. ಜೊತೆಗೆ ಜಿಲ್ಲೆಯ ನಾಲ್ವರು ಶಾಸಕರು ರಾಜೇಗೌಡರ ಪರ ಒಲವು ಹೊಂದಿದ್ದಾರೆ ಎನ್ನಲಾಗುತ್ತಿದೆ.

ತರೀಕೆರೆ ಶಾಸಕ ಶ್ರೀನಿವಾಸ್ ಗೆ ಸಿದ್ದರಾಮಯ್ಯ ಕೈ ಹಿಡಿಯಬೇಕು ಅದು ಸಾಧ್ಯವಿಲ್ಲ ಏಕೆಂದರೆ ಅವರ ನೀಲಿ ಕಣ್ಣಿನ ಬೈರತಿ ಸುರೇಶ್ ಮತ್ತು ಮಗ ಯತೀಂದ್ರ ಪರ ಜೊತೆಗೆ ಹೊಸದುರ್ಗದ ಗೋವಿಂದಪ್ಪ ಪರ ಇರುವುದು ಶ್ರೀನಿವಾಸ್ ಏನೇ ಮಾಡಿದರು ಮಂತ್ರಿಯಾಗುವುದು ಕಷ್ಟ. ಜಾರ್ಜ್ ಗೆ ಅವಕಾಶ ಮತ್ತೊಮ್ಮೆ ಕಾಫಿ ತೋಟ, ಬೆಲೆ ಬಾಳುವ ಆಸ್ತಿ ಖರೀದಿಗೆ ಅನುವು ಮಾಡಿಕೊಡುವ ಸಾಧ್ಯತೆ ಹೆಚ್ಚು. ಪ್ರಮುಖವಾಗಿ ಜಾತಿ ಮೇಲಾಟದಲ್ಲಿ ಇನ್ನೂ ಎರಡು ವರ್ಷಗಳ ಕಾಲ ಜಿಲ್ಲೆಯಲ್ಲಿ ಪರಿಚಯ ಇಲ್ಲದವರಿಗೆ ಸೆಲ್ಯೂಟ್ ಹೊಡೆಯ ಬೇಕಾಗಿದೆ.

There is no minister for the district no minister no way!

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...