Home namma chikmagalur chikamagalur ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ
chikamagalurHomeLatest Newsnamma chikmagalur

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

Share
Share

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಭಾನುವಾರ ₹5.14 ಕೋಟಿ ವೆಚ್ಚದ ಕೆಳಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿ ‘ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ತರ ಸಂಕಲ್ಪ ಮಾಡಿದೆ. ದೇಶದಲ್ಲಿ ₹8 ಲಕ್ಷ ಕೋಟಿ ಮೊತ್ತದ ಕಾಮಗಾರಿ ಪ್ರಗತಿಯಲ್ಲಿವೆ. ಈಗಾಗಲೇ 13 ಸಾವಿರ ಲೆವೆಲ್ ಕ್ರಾಸಿಂಗ್‌ಅನ್ನು ತೆರವುಗೊಳಿಸಿ ಜನರಿಗೆ ಸುರಕ್ಷಿತ, ಆಧುನಿಕ ಹಾಗೂ ದೀರ್ಘಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯದಲ್ಲಿ 700 ಲೆವೆಲ್ ಕ್ರಾಸಿಂಗ್‌ ಅನ್ನು ತೆಗೆದು ಹಾಕಲಾಗಿದೆ ಇನ್ನು ಕೆಲವೇ ವರ್ಷಗಳಲ್ಲಿ ದೇಶದಲ್ಲಿ ಲೆವೆಲ್‌ಕ್ರಾಸ್‌ಗಳೇ ಇರುವುದಿಲ್ಲ’ ಎಂದು ಅವರು ಹೇಳಿದರು.

ಬೀರೂರು ನಿಲ್ದಾಣದಲ್ಲಿ ಪ್ಲಾಟ್‌ಫಾರಂಗಳ ಅಭಿವೃದ್ಧಿಗಾಗಿ ₹8 ಕೋಟಿ ನೀಡಲಾಗಿದೆ. ಇಲ್ಲಿ ಕೆಳಸೇತುವೆ ನಿರ್ಮಾಣವು ಈ ಪ್ರದೇಶದ ಜನರ ಸುರಕ್ಷತೆ ಹಾಗೂ ಸಾರ್ವಜನಿಕರ ಸಂಚಾರವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಮನ್ವಯದಿಂದ ಕೆಲಸ ನಿರ್ವಹಿಸಿ ಡಿಸೆಂಬರ್ ಒಳಗೆ ಈ ಕಾಮಗಾರಿ ಮುಗಿಸಿಕೊಡಬೇಕು ಎಂದು ಸೂಚಿಸಿದರು.

ಶಾಸಕ ಕೆ.ಎಸ್.ಆನಂದ್ ಮಾತ ನಾಡಿ, ‘ಇಲ್ಲಿನ ನಿಲ್ದಾಣದ ಅಗತ್ಯಕ್ಕೆ ತಕ್ಕಂತೆ ಸಚಿವರು ಅನುದಾನ ನೀಡಿ ಅಭಿವೃದ್ಧಿಪಡಿಸುತ್ತಿರುವುದು ಶ್ಲಾಘ ನೀಯ. ಕಡೂರು ರೈಲು ನಿಲ್ದಾಣದ ಮೂಲ ಸೌಕರ್ಯ ಅಭಿವೃದ್ಧಿಗೆ ಎನ್ನುವುದಕ್ಕಿಂತ ಅದರ ಪುನ‌ರ್ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಕಡೂರು ನಿಲ್ದಾಣವನ್ನು ಹೊಸದಾಗಿಯೇ ನಿರ್ಮಿಸಬೇಕು ಎನ್ನುವುದು ಜನರ ಮತ್ತು ನನ್ನ ವೈಯಕ್ತಿಕ ಆಗ್ರಹವೂ ಆಗಿದೆ’ ಎಂದರು.

ಕಡೂರಿನ ಕೋಟೆ ಪ್ರದೇಶದಲ್ಲಿ ₹68 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಮೇಲ್ಲೇತುವೆಗೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಅಲ್ಲಿಯೂ ಕೆಲವು ಲೋಪ ಸರಿಪಡಿಸಬೇಕು. ಈ ಗೇಟ್‌ನಿಂದ ವಿದ್ಯಾರ್ಥಿಗಳು, ನೌಕರರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಕೆಲಸ ಮಾಡಿಕೊಡಬೇಕು ಎಂದರು.

ನೈರುತ್ಯ ರೈಲ್ವೆ ಡಿಆರ್‌ಎಂ ಮುದಿತ್ ಮಿತ್ತಲ್, ಬೇಲೂರು ಶಾಸಕ ಎಚ್.ಕೆ. ಸುರೇಶ್, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬೆಳ್ಳಿ ಪ್ರಕಾಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆ‌ರ್.ದೇವರಾಜ್ ಶೆಟ್ಟಿ, ಎಚ್.ಸಿ. ಕಲ್ಮರುಡಪ್ಪ, ಕನ್ನಡ ಸಂಘದ ಎಚ್.ಸಿ. ವಿಶ್ವನಾಥಗೌಡ, ಕಂದಾಯ ಇಲಾಖೆ ಅಧಿಕಾರಿಗಳು, ಬೀರೂರು ದೇವರಾಜ್, ಸವಿತಾ ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ. ನಾಗರಾಜ್, ರೈಲ್ವೆ ಇಲಾಖೆಯ ಡಿಸಿಎಂ ಗಿರೀಶ್, ರೈಲ್ವೆ ಸಂಚಾರ ಇನ್‌ಸ್ಪೆಕ್ಟರ್ ಜಗದೀಶ್, ವಿವಿಧ ಅಧಿಕಾರಿಗಳು, ಎಂಜಿನಿಯರ್‌ಗಳು, ಪೊಲೀಸ್ ಮತ್ತು ಆರ್‌ಪಿಎಫ್ ಅಧಿಕಾರಿಗಳು ಭಾಗವಹಿಸಿದ್ದರು.

There is no politics in the development of the country.

Share

Leave a comment

Leave a Reply

Your email address will not be published. Required fields are marked *

Don't Miss

ಬಿ.ಎಲ್.ಶಂಕರ್ ರ ರಾಜಕೀಯ ಹಪ ಹಪಿಗೆ ಮತ್ತೆ ಮತ್ತೆ ತಣ್ಣೀರು !

ಬಿ.ಎಲ್.ಶಂಕರ್ ಕಾಂಗ್ರೆಸ್ ನ ರಾಜ್ಯ ನಾಯಕರು ನಿಜ,ಆದರೆ ಇವರು ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಲ್ಲಿ ಕಡ್ಡಿ ಆಡಿಸುವುದರಲ್ಲಿ ನಿಪುಣ. ಕಾಂಗ್ರೆಸ್ ಸೇರಿ ಎಲ್ಲಾ ಚುನಾವಣೆಯಲ್ಲಿ ಸೋತು ದಾಖಲೆ ಮಾಡಿದ್ದಾರೆ.ಚಿತ್ರಕಲಾ ಪರಿಷತ್ತಗೆ ಗೂಟಾ...

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ ಅಂಗಡಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿದಂತೆ...

Related Articles

ಕೆ.ಬಿ.ಎಂಗೆ ಆತ್ಮೀಯ ಅಭಿಮಾನಾರ್ಪಣೆ

ಬೀರೂರ: ಜನಾನುರಾಗಿ ಸೇವೆ ಸಲ್ಲಿಸಿ ಅಜಾತಶತ್ರು ಪಟ್ಟಣದ ಹಿರಿಯ ಮುತ್ಸದಿ ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ...

ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ

ಕಡೂರು: ತಂದೆಯ ನಿಧನದ ಸುದ್ದಿ ಕೇಳಿ ತವರಿಗೆ ಬರುತ್ತಿದ್ದ ನಿವೃತ್ತ ಸೈನಿಕರೊಬ್ಬರು ರಸ್ತೆ ಅಪಘಾತದಲ್ಲಿ ಗಾಯಗೊಂಡು...