Home namma chikmagalur chikamagalur ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ
chikamagalurHomeLatest Newsnamma chikmagalur

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

Share
Share

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಭಾನುವಾರ ₹5.14 ಕೋಟಿ ವೆಚ್ಚದ ಕೆಳಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿ ‘ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ತರ ಸಂಕಲ್ಪ ಮಾಡಿದೆ. ದೇಶದಲ್ಲಿ ₹8 ಲಕ್ಷ ಕೋಟಿ ಮೊತ್ತದ ಕಾಮಗಾರಿ ಪ್ರಗತಿಯಲ್ಲಿವೆ. ಈಗಾಗಲೇ 13 ಸಾವಿರ ಲೆವೆಲ್ ಕ್ರಾಸಿಂಗ್‌ಅನ್ನು ತೆರವುಗೊಳಿಸಿ ಜನರಿಗೆ ಸುರಕ್ಷಿತ, ಆಧುನಿಕ ಹಾಗೂ ದೀರ್ಘಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯದಲ್ಲಿ 700 ಲೆವೆಲ್ ಕ್ರಾಸಿಂಗ್‌ ಅನ್ನು ತೆಗೆದು ಹಾಕಲಾಗಿದೆ ಇನ್ನು ಕೆಲವೇ ವರ್ಷಗಳಲ್ಲಿ ದೇಶದಲ್ಲಿ ಲೆವೆಲ್‌ಕ್ರಾಸ್‌ಗಳೇ ಇರುವುದಿಲ್ಲ’ ಎಂದು ಅವರು ಹೇಳಿದರು.

ಬೀರೂರು ನಿಲ್ದಾಣದಲ್ಲಿ ಪ್ಲಾಟ್‌ಫಾರಂಗಳ ಅಭಿವೃದ್ಧಿಗಾಗಿ ₹8 ಕೋಟಿ ನೀಡಲಾಗಿದೆ. ಇಲ್ಲಿ ಕೆಳಸೇತುವೆ ನಿರ್ಮಾಣವು ಈ ಪ್ರದೇಶದ ಜನರ ಸುರಕ್ಷತೆ ಹಾಗೂ ಸಾರ್ವಜನಿಕರ ಸಂಚಾರವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಮನ್ವಯದಿಂದ ಕೆಲಸ ನಿರ್ವಹಿಸಿ ಡಿಸೆಂಬರ್ ಒಳಗೆ ಈ ಕಾಮಗಾರಿ ಮುಗಿಸಿಕೊಡಬೇಕು ಎಂದು ಸೂಚಿಸಿದರು.

ಶಾಸಕ ಕೆ.ಎಸ್.ಆನಂದ್ ಮಾತ ನಾಡಿ, ‘ಇಲ್ಲಿನ ನಿಲ್ದಾಣದ ಅಗತ್ಯಕ್ಕೆ ತಕ್ಕಂತೆ ಸಚಿವರು ಅನುದಾನ ನೀಡಿ ಅಭಿವೃದ್ಧಿಪಡಿಸುತ್ತಿರುವುದು ಶ್ಲಾಘ ನೀಯ. ಕಡೂರು ರೈಲು ನಿಲ್ದಾಣದ ಮೂಲ ಸೌಕರ್ಯ ಅಭಿವೃದ್ಧಿಗೆ ಎನ್ನುವುದಕ್ಕಿಂತ ಅದರ ಪುನ‌ರ್ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಕಡೂರು ನಿಲ್ದಾಣವನ್ನು ಹೊಸದಾಗಿಯೇ ನಿರ್ಮಿಸಬೇಕು ಎನ್ನುವುದು ಜನರ ಮತ್ತು ನನ್ನ ವೈಯಕ್ತಿಕ ಆಗ್ರಹವೂ ಆಗಿದೆ’ ಎಂದರು.

ಕಡೂರಿನ ಕೋಟೆ ಪ್ರದೇಶದಲ್ಲಿ ₹68 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಮೇಲ್ಲೇತುವೆಗೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಅಲ್ಲಿಯೂ ಕೆಲವು ಲೋಪ ಸರಿಪಡಿಸಬೇಕು. ಈ ಗೇಟ್‌ನಿಂದ ವಿದ್ಯಾರ್ಥಿಗಳು, ನೌಕರರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಕೆಲಸ ಮಾಡಿಕೊಡಬೇಕು ಎಂದರು.

ನೈರುತ್ಯ ರೈಲ್ವೆ ಡಿಆರ್‌ಎಂ ಮುದಿತ್ ಮಿತ್ತಲ್, ಬೇಲೂರು ಶಾಸಕ ಎಚ್.ಕೆ. ಸುರೇಶ್, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬೆಳ್ಳಿ ಪ್ರಕಾಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆ‌ರ್.ದೇವರಾಜ್ ಶೆಟ್ಟಿ, ಎಚ್.ಸಿ. ಕಲ್ಮರುಡಪ್ಪ, ಕನ್ನಡ ಸಂಘದ ಎಚ್.ಸಿ. ವಿಶ್ವನಾಥಗೌಡ, ಕಂದಾಯ ಇಲಾಖೆ ಅಧಿಕಾರಿಗಳು, ಬೀರೂರು ದೇವರಾಜ್, ಸವಿತಾ ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ. ನಾಗರಾಜ್, ರೈಲ್ವೆ ಇಲಾಖೆಯ ಡಿಸಿಎಂ ಗಿರೀಶ್, ರೈಲ್ವೆ ಸಂಚಾರ ಇನ್‌ಸ್ಪೆಕ್ಟರ್ ಜಗದೀಶ್, ವಿವಿಧ ಅಧಿಕಾರಿಗಳು, ಎಂಜಿನಿಯರ್‌ಗಳು, ಪೊಲೀಸ್ ಮತ್ತು ಆರ್‌ಪಿಎಫ್ ಅಧಿಕಾರಿಗಳು ಭಾಗವಹಿಸಿದ್ದರು.

There is no politics in the development of the country.

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...