Home namma chikmagalur chikamagalur ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ
chikamagalurHomeLatest Newsnamma chikmagalur

ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ

Share
Share

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ ನಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ದೋಣುಗೂಡಿಗೆ ಗ್ರಾಮದಲ್ಲಿ ನಡೆದಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯಾಗಿರುವ ರಾಜೇಶ್ ಎಂಬುವವರು ಊರಿಗೆ ರಸ್ತೆ ಮಾಡಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿ ಕಾಮಗಾರಿಗೆ ಮುಂದಾಗಿದ್ದರು.

ಆದರೆ ಈ ರಸ್ತೆ ನಿರ್ಮಾಣವಾಗುವ ಜಾಗ ತನಗೆ ಸೇರಿದ್ದು ಎಂದು ವಾದಿಸಿದ ರಮೇಶ್ ಎಂಬುವವರು ರಸ್ತೆ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಸ್ತೆ ನಿರ್ಮಾಣವಾದರೆ ಗ್ರಾಮದ 20ಕ್ಕೂ ಹೆಚ್ಚು ಕುಟುಂಬಗಳಿಗೆ ಅನುಕೂಲವಾಗುತ್ತದೆ ಎಂದು ರಾಜೇಶ್ ಕಾಮಗಾರಿ ಮುಂದುವರಿಸಲು ಯತ್ನಿಸಿದಾಗ ರಮೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಮನೆ ಬಾಗಿಲಲ್ಲೇ ಇಬ್ಬರೂ ಒಬ್ಬರ ಮೇಲೊಬ್ಬರು ಬಿದ್ದು ತೀವ್ರವಾಗಿ ಜಗಳವಾಡುತ್ತಿದ್ದರೆ, ರಮೇಶ್ ಅವರ ಪತ್ನಿ ಸೇರಿದಂತೆ ಕುಟುಂಬಸ್ಥರು ಅದನ್ನು ತಡೆಯದೆ ಸುಮ್ಮನೆ ನಿಂತು ನೋಡುತ್ತಿರುವುದು ಕಂಡುಬಂದಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

There was a fierce fight between the two regarding road works

Share

Leave a comment

Leave a Reply

Your email address will not be published. Required fields are marked *

Don't Miss

ರೈಲ್ವೆ ಕಾಮಗಾರಿಗೆ ಜಮೀನು ಬಳಕೆ: ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

ಚಿಕ್ಕಮಗಳೂರು: ರೈಲ್ವೆ ಕಾಮಗಾರಿಗಾಗಿ ರೈತರ ಜಮೀನು ಹಾಗೂ ವಾಸದ ಮನೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ನೀಡುವವರೆಗೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ...

ಬಿಎಫ್‌ಐಎಲ್‌ ಸಂಸ್ಥೆಯಲ್ಲಿ ₹5.50 ಲಕ್ಷ ದುರುಪಯೋಗ: ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ

ನರಸಿಂಹರಾಜಪುರ: ಭಾರತ್ ಫೈನಾನ್ಸಿಯಲ್ ಇನ್‌ಕ್ಲೂಶನ್ ಲಿಮಿಟೆಡ್‌ (ಬಿಎಫ್‌ಐಎಲ್‌) ಸಂಸ್ಥೆಯ ಸೇಫ್‌ ಲಾಕರ್‌ನಲ್ಲಿದ್ದ ಚೆಕ್‌ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ಬಾರದಂತೆ ತೆಗೆದುಕೊಂಡು ₹5.50 ಲಕ್ಷ ಹಣವನ್ನು ಬಿಡಿಸಿಕೊಂಡು ದುರುಪಯೋಗಪಡಿಸಿಕೊಂಡ ಆರೋಪದಡಿ ಇಬ್ಬರು ಸಿಬ್ಬಂದಿ ವಿರುದ್ಧ...

Related Articles

ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಪ್ರತಿಭಟನೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು...

ಆನ್‌ಲೈನ್ ಟ್ರೇಡಿಂಗ್ ಹೂಡಿಕೆ ಹೆಸರಿನಲ್ಲಿ ವಿದ್ಯಾರ್ಥಿನಿಗೆ ₹4.77 ಲಕ್ಷ ವಂಚನೆ

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಭಾರಿ ಲಾಭ ನೀಡುವುದಾಗಿ ನಂಬಿಸಿ...

ಯುವತಿ ಮೇಲೆ ಅತ್ಯಾಚಾರ-ಕೊಲೆ ಬೆದರಿಕೆ ಆರೋಪ

ಚಿಕ್ಕಮಗಳೂರು: ಯುವತಿಗೆ ಅತ್ಯಾಚಾರ ಎಸಗಿದ ಆರೋಪ ಹಾಗೂ ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪಂಚನಹಳ್ಳಿ...

ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ

ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು...