Home namma chikmagalur chikamagalur ಕ‌ಳ್ಳನಿಂದ ಬೆಲೆಬಾಳುವ ‌ಡ್ರೈಪೂಟ್‌ಗಳ ಕಳವು
chikamagalurCrime NewsHomeLatest Newsnamma chikmagalur

ಕ‌ಳ್ಳನಿಂದ ಬೆಲೆಬಾಳುವ ‌ಡ್ರೈಪೂಟ್‌ಗಳ ಕಳವು

Share
Share

ಶೃಂಗೇರಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಭೀಕರ ಯುದ್ಧವು ಇದೀಗ ಕಾಫಿನಾಡಿನ ವ್ಯಾಪಾರಸ್ಥರಿಗೂ ಬಿಸಿ ಮುಟ್ಟಿಸಿದೆ. ಯುದ್ಧದ ಹಿನ್ನೆಲೆಯಲ್ಲಿ ವಿದೇಶಗಳಿಂದ ಆಮದಾಗುವ ಡ್ರೈಫೂಟ್ಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಮಾರುಕಟ್ಟೆಯಲ್ಲಿ ಇವುಗಳ ಬೆಲೆ ಗಗನಕ್ಕೇರಿದೆ.

ಈ ಬೆಲೆ ಏರಿಕೆಯ ನಡುವೆಯೇ ಶೃಂಗೇರಿಯಲ್ಲಿ ವಿಚಿತ್ರ ಕಳ್ಳತನವೊಂದು ಸಂಭವಿಸಿದೆ. ಶೃಂಗೇರಿ ಶಾರದಾಂಬೆ ದೇವಾಲಯದ ಪಾರ್ಕಿಂಗ್ ಆವರಣದಲ್ಲಿರುವ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳನೋರ್ವ ಕೇವಲ ನಗದಷ್ಟೇ ಅಲ್ಲದೆ ಬೆಲೆಬಾಳುವ ಡೈಪೂಟ್‌ಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಸುಮಾರು 80 ಸಾವಿರ ರೂಪಾಯಿ ನಗದು ಹಣದ ಜೊತೆಗೆ, 10 ಕೆಜಿಗಿಂತಲೂ ಅಧಿಕ ತೂಕದ ಬಾದಾಮಿ, ಪಿಸ್ತಾ ಹಾಗೂ ಗೋಡಂಬಿಯನ್ನು ಕಳ್ಳತನ ಮಾಡಲಾಗಿದೆ.

ವ್ಯಾಪಾರಿಗಳು ದಿನವಿಡೀ ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷತೆಯ ದೃಷ್ಟಿಯಿಂದ ಅಂಗಡಿಯಲ್ಲೇ ಇಟ್ಟು ತೆರಳುತ್ತಿದ್ದರು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಖದೀಮರೇ ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.

ದೇವರಿಗೆ ಮುಡಿಪಾಗಿಟ್ಟಿದ್ದ ಹಣವನ್ನೂ ಬಿಡದ ಕಳ್ಳರು, ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿರುವ ಡೈಫೂಟ್ಸ್ ಗಳನ್ನು ಹೊತ್ತೊಯ್ದಿರುವುದು ಆಶ್ಚರ್ಯ ಮೂಡಿಸಿದೆ. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಡೈ ಪೂಟ್ಸ್ ಕೊರತೆ ಮತ್ತು ಬೆಲೆ ಏರಿಕೆ ಇರುವುದೇ ಕಳ್ಳರು ಈ ವಸ್ತುವನ್ನು ಆಯ್ದುಕೊಳ್ಳಲು ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.

Thief steals valuable dry goods

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ಮೊಟ್ಟೆ ವಿತರಣೆ

ಚಿಕ್ಕಮಗಳೂರು: ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ಇನ್ಮುಂದೆ ವಾರಕ್ಕೆ ಆರು ಮೊಟ್ಟೆಯಂತೆ ತಿಂಗಳಿಗೆ 25 ಮೊಟ್ಟೆ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ...

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನ ೧೫೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಚಿಕ್ಕಮಗಳೂರಿನ...

Related Articles

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...

ಸಾರ್ವಜನಿಕ ಚರ್ಚೆ ಬಳಿಕ ಕ್ಷೇತ್ರಗಳ ಮರುವಿಂಗಡಣೆ ಸೂಕ್ತ

ಚಿಕ್ಕಮಗಳೂರು: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ಸಾರ್ವಜನಿಕ ಚರ್ಚೆ ಮತ್ತು ಸಮಾಲೋಚನೆ ಮಾಡಿದ ನಂತರವೇ ಜಾರಿ ಮಾಡಬೇಕು...

ನಾಪತ್ತೆಯಾದ ಯುವತಿಯ ರಕ್ಷಣಾ ಕಾರ್ಯಾಚರಣೆಗೆ ಸಚಿವರ ಸೂಚನೆ

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ತೆರಳಿದ್ದ ಕೇರಳದ ಪಾಲಕಾಡ್ ಜಿಲ್ಲೆಯ...