Home Latest News ಕಪ್ಪಕಾಣಿಕೆ ಪಡೆದವರನ್ನು ಪಕ್ಷದಿಂದ ಅಮಾನತು ಮಾಡಬೇಕು
Latest NewschikamagalurHomenamma chikmagalur

ಕಪ್ಪಕಾಣಿಕೆ ಪಡೆದವರನ್ನು ಪಕ್ಷದಿಂದ ಅಮಾನತು ಮಾಡಬೇಕು

Share
Share

ಚಿಕ್ಕಮಗಳೂರು:  ನಗರಸಭೆ ಮಾಜಿ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಅವರಿಂದ ಕಪ್ಪಕಾಣಿಕೆ ಪಡೆದವರನ್ನು ಪಕ್ಷದಿಂದ ಅಮಾನತು ಮಾಡುವಂತೆ ನಗರಸಭೆ ಮಾಜಿ ಅಧ್ಯಕ್ಷ ವರಸಿದ್ದಿವೇಣುಗೊಪಾಲ್ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ನಗರಸಭೆ ಅಧ್ಯಕ್ಷರು ಅಧಿಕಾರ ಹಿಡಿಯುವ ಸಂದರ್ಭದಲ್ಲಿ ಕೆಲವು ಬಿಜೆಪಿ ಮುಖಂಡರು ಅವರಿಂದ ಹಣ ಪಡೆದು ಅಧ್ಯಕ್ಷರಿಗೆ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಸಾರ್ವಜನಿಕವಾಗಿ ಆರೋಪ ಕೇಳಿಬಂದಿದೆ ಎಂದು ಹೇಳಿದರು.

ಇಂತಹವರನ್ನು ಬಿಜೆಪಿ ಪಕ್ಷದಲ್ಲಿ ಇಟ್ಟುಕೊಳ್ಳುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿ, ನಗರದ ಜನತೆ ಮೆಚ್ಚುವಂತಹ ಕೆಲಸ ಮಾಡಿದ್ದ ನನ್ನನ್ನು ಅಧ್ಯಕ್ಷ ಸ್ಥಾನದಿಂದ ರಾಜೀನಾಮೆ ನೀಡಲಿಲ್ಲ ಎಂಬ ಒಂದೇ ಕಾರಣಕ್ಕೆ ಪಕ್ಷದಿಂದ ಉಚ್ಛಾಟಿಸಲಾಯಿತು. ಆದರೆ, ಅಧ್ಯಕ್ಷರಿಂದ ಅಕ್ರಮವಾಗಿ ಹಣ ಪಡೆದವರಿಗೆ ಪಕ್ಷದಿಂದ ಯಾವುದೇ ಕ್ರಮ ಇಲ್ಲವೇ ಎಂದು ಪ್ರಶ್ನಿಸಿದರು.

ಕಪ್ಪಕಾಣಿಕೆ ಪಡೆಯುವಂತಹ ನೀಚ ಕೆಲಸ ಬಿಜೆಪಿಯಲ್ಲಿಲ್ಲ. ಹೀಗಾಗಿ ಹಣ ಪಡೆದವರನ್ನು ತಕ್ಷಣಕ್ಕೆ ಉಚ್ಛಾಟಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇದ್ರ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.

ನಗರಸಭೆಯಲ್ಲಿ ನಾನು ಅಧ್ಯಕ್ಷನಾಗಿದ್ದಾಗ ಕರವಸೂಲಿಯಲ್ಲಿ ನಮ್ಮ ನಗರಸಭೆ ಎರಡನೇ ಸ್ಥಾನದಲ್ಲಿತ್ತು. ಇದಕ್ಕೆ ಕೇಂದ್ರ ಸರಕಾರ ಬಹುಮಾನ ರೂಪದಲ್ಲಿ ೬ ಕೋಟಿ ರೂ.ಗಳನ್ನು ನಗರಸಭೆಗೆ ನೀಡಿದೆ. ೩೦ ತಿಂಗಳ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದೇನೆ. ಆದರೂ ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಿದರು. ಈಗ ಪಕ್ಷದ ಒಳಗೇ ಇದ್ದುಕೊಂಡು ಅಕ್ರಮ ನಡೆಸುತ್ತಿರುವವರಿಗೆ ಯಾವ ಶಿಕ್ಷೆ ಎಂದು ಕೇಳಿದರು.

Those who received black money should be suspended from the party

Share

Leave a comment

Leave a Reply

Your email address will not be published. Required fields are marked *

Don't Miss

ಮುಗುಳುವಳ್ಳಿಯಲ್ಲಿ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು:  ತಾಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ರಸ್ತೆತಡೆ ನಡೆಸಿದ್ದಾರೆ. ಗ್ರಾಮದ ಮೂಲಕ ಚಿಕ್ಕಮಗಳೂರಿಗೆ ಹಾಸನ, ಬೆಂಗಳೂರು, ಮೈಸೂರಿನಿಂದ ಪ್ರತಿನಿತ್ಯ ನೂರಾರು ಬಸ್‌ಗಳು ಸಂಚಾರ...

ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ಕಾಂಗ್ರೆಸ್ ಸರ್ಕಾರದ ಗುರಿ

ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಜನರ ಬದುಕಿನ ಬಗ್ಗೆ ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ಕಾಂಗ್ರೆಸ್ ಸರ್ಕಾರದ ಗುರಿ ಮತ್ತು ಉದ್ದೇಶ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ಕ್ಷೇತ್ರದ...

Related Articles

ನಗರಸಭೆಯ ಅಧ್ಯಕ್ಷರ ಚುನಾವಣೆ- “ತ್ರೀ ಪಾರ್ಟಿ”ಗೆ ಮೂರು ನಾಮ ಸಿಂಬಲ್ ?

ಚಿಕ್ಕಮಗಳೂರು: ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಶೀಲಾ ದಿನೇಶ್ ಅವಿರೋಧವಾಗಿ ಆಯ್ಕೆಯಾದರು. ಇದರಲ್ಲಿ ದೊಡ್ಡ ಹೈಡ್ರಾಮಾವೇ...

ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ದುರ್ಗದಹಳ್ಳಿಯಲ್ಲಿ ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಭಾನುವಾರ ನಡೆದಿದ್ದು, ರಮೇಶ್...

ಶರತ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಹಿಂದೂ ಮುಖಂಡ ಶರತ್ ಪಂಪ್‌ವೆಲ್‌ಗೆ ಒಂದು ತಿಂಗಳ ಕಾಲ ಜಿಲ್ಲಾಡಳಿತ ನಿರ್ಬಂಧ ವಿಧಿಸಿ ಜಿಲ್ಲಾಡಳಿತ...

ಮೂಡಿಗೆರೆಯಲ್ಲಿ ಹೃದಯಾಘಾತದಿಂದ ಇಬ್ಬರ ಸಾವು

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಫಿನಾಡಿನಲ್ಲಿ ಹೃದಯಾಘಾತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಒಂದೇ...