ಎನ್.ಆರ್.ಪುರ: ಕೆ.ಕಣಬೂರು ಬಸ್ ತಂಗುದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಂಚು ರೂಪಿಸಿ, ಅದನ್ನು ಹಂಚಿಕೊಳ್ಳುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಯಶಸ್ವಿಯಾಗಿ ದಾಳಿ ನಡೆಸಿ ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನರಸಿಂಹರಾಜಪುರ ಪೊಲೀಸರು ಈ ಕಾರ್ಯಚರಣೆ ನಡೆಸಿದ್ದಾರೆ. ತಂಗುದಾಣದಲ್ಲಿ ಅಡಗಿ ಕುಳಿತಿದ್ದ ಪೃಥ್ವಿಕ್, ಸಚ್ಚಿನ್ ಕುಮಾರ್ ಹಾಗೂ ಕಿರಣ್ ಎಂಬ ಆರೋಪಿಗಳನ್ನು ಪೊಲೀಸರು ಸುತ್ತುವರೆದು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಒಟ್ಟು 50,000 ರೂಪಾಯಿ ಮೌಲ್ಯದ 1,223 ಗ್ರಾಂ (1 ಕೆಜಿಗೂ ಹೆಚ್ಚು) ಒಣಗಿದ ಗಾಂಜಾವನ್ನು ಕವರ್ ಸಮೇತ ಜಪ್ತಿ ಮಾಡಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ್ದ ಎರಡು ಪಲ್ಸರ್ ಬೈಕ್ಗಳು ಹಾಗೂ ಬ್ಯಾಗ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯಿಂದ ಗಾಂಜಾ ಖರೀದಿಸಿ, ಮಾರಾಟ ಮಾಡಲು ಹೊರಟಿದ್ದಾಗ ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Three accused arrested for conspiracy to sell marijuana illegally
Leave a comment