Home namma chikmagalur chikamagalur ಗಾಂಜಾ ಮಾರಾಟಕ್ಕೆ ಸಂಚು-ಮೂರು ಆರೋಪಿಗಳ ಬಂಧನ
chikamagalurHomeLatest Newsnamma chikmagalur

ಗಾಂಜಾ ಮಾರಾಟಕ್ಕೆ ಸಂಚು-ಮೂರು ಆರೋಪಿಗಳ ಬಂಧನ

Share
Share

ಎನ್.ಆ‌ರ್.ಪುರ: ಕೆ.ಕಣಬೂರು ಬಸ್ ತಂಗುದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಂಚು ರೂಪಿಸಿ, ಅದನ್ನು ಹಂಚಿಕೊಳ್ಳುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಯಶಸ್ವಿಯಾಗಿ ದಾಳಿ ನಡೆಸಿ ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನರಸಿಂಹರಾಜಪುರ ಪೊಲೀಸರು ಈ ಕಾರ್ಯಚರಣೆ ನಡೆಸಿದ್ದಾರೆ. ತಂಗುದಾಣದಲ್ಲಿ ಅಡಗಿ ಕುಳಿತಿದ್ದ ಪೃಥ್ವಿಕ್, ಸಚ್ಚಿನ್ ಕುಮಾರ್ ಹಾಗೂ ಕಿರಣ್ ಎಂಬ ಆರೋಪಿಗಳನ್ನು ಪೊಲೀಸರು ಸುತ್ತುವರೆದು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ಒಟ್ಟು 50,000 ರೂಪಾಯಿ ಮೌಲ್ಯದ 1,223 ಗ್ರಾಂ (1 ಕೆಜಿಗೂ ಹೆಚ್ಚು) ಒಣಗಿದ ಗಾಂಜಾವನ್ನು ಕವರ್ ಸಮೇತ ಜಪ್ತಿ ಮಾಡಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ್ದ ಎರಡು ಪಲ್ಸ‌ರ್ ಬೈಕ್‌ಗಳು ಹಾಗೂ ಬ್ಯಾಗ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯಿಂದ ಗಾಂಜಾ ಖರೀದಿಸಿ, ಮಾರಾಟ ಮಾಡಲು ಹೊರಟಿದ್ದಾಗ ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Three accused arrested for conspiracy to sell marijuana illegally

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...