Home Latest News ಅಕ್ರಮವಾಗಿ ಸಾಗುವಾನಿ ಕಡಿತ- ಮೂವರ ಬಂಧನ
Latest NewschikamagalurCrime NewsHomenamma chikmagalur

ಅಕ್ರಮವಾಗಿ ಸಾಗುವಾನಿ ಕಡಿತ- ಮೂವರ ಬಂಧನ

Share
Share

ಕೊಟ್ಟಿಗೆಹಾರ : ಮಲೆನಾಡಿನ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕತ್ತರಿಸಿ ಸಾಗಿಸುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ನಡೆದಿದೆ.

ಮೂಡಿಗೆರೆ ಪ್ರಾದೇಶಿಕ ಅರಣ್ಯ ವಲಯದ ಭಾರತಿಬೈಲು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಆಧರಿಸಿ ನಡೆಸಿದ ದಾಳಿಯಲ್ಲಿ, ಮಾರುತಿ ಓಮ್ನಿ ವಾಹನವನ್ನು ಬೆನ್ನಟ್ಟಿ ತಡೆದು ಪರಿಶೀಲನೆ ನಡೆಸಲಾಗಿದ್ದು, ಅದರಲ್ಲಿ ಅಕ್ರಮವಾಗಿ ಕತ್ತರಿಸಲಾದ ೦೫ ಸಾಗುವಾನಿ ತುಂಡುಗಳು ಪತ್ತೆಯಾದವು.

ಸದ್ಯದ ವಾಹನ ಹಾಗೂ ಸಾಗುವಾನಿ ದಿಮ್ಮಿಗಳನ್ನು ಸರ್ಕಾರದ ಪರವಾಗಿ ಜಪ್ತಿ ಮಾಡಲಾಗಿದ್ದು, ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರೊಂದಿಗೆ ಅರಣ್ಯ ರಕ್ಷಕರಾದ ಲಕ್ಷ್ಮಣ, ಗಿರೀಶ್ ಮತ್ತು ಸುಧೀರ್ ಶ್ರಮಿಸಿ, ಯಶಸ್ವಿ ಕಾರ್ಯಾಚರಣೆಗೆ ಕಾರಣರಾದರು.

ಕಾರ್ಯಾಚರಣೆಯ ದಕ್ಷತೆಯನ್ನು ಪರಿಗಣಿಸಿ, ಅರಣ್ಯ ಇಲಾಖೆಯ ವತಿಯಿಂದ ಸುಹಾಸ್ ಹಾಗೂ ಅವರ ತಂಡಕ್ಕೆ ಉತ್ತೇಜನಕಾರಿ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ ಹಾಗೂ ವಲಯ ಅರಣ್ಯಾಧಿಕಾರಿ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ನಡೆದ ಈ ಮಿಂಚಿನ ದಾಳಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಸಾಗುವಾನಿ ಕಳ್ಳತನಕ್ಕೆ ತಡೆಯೊಡ್ಡುವಂತೆ ಮಾಡಿದೆ

Three arrested for illegally cutting sago

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...