Home namma chikmagalur chikamagalur ಬಿದರೆ ಗ್ರಾಮದ ಕೋಳಿ ಗೂಡಿನಲ್ಲಿ ಮೂರು ನಾಗರಹಾವು ಪತ್ತೆ
chikamagalurHomeLatest Newsnamma chikmagalur

ಬಿದರೆ ಗ್ರಾಮದ ಕೋಳಿ ಗೂಡಿನಲ್ಲಿ ಮೂರು ನಾಗರಹಾವು ಪತ್ತೆ

Share
Share

ಚಿಕ್ಕಮಗಳೂರು: ಅತಿಯಾದ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಹಾಗೂ ಆಹಾರದ ಹುಡುಕಾಟದಲ್ಲಿದ್ದ ಮೂರು ನಾಗರ ಹಾವುಗಳು ಒಂದೇ ಗ್ರಾಮದ ಮೂರು ಮನೆಗಳ ಕೋಳಿ ಗೂಡು ಸೇರಿ ಅಚ್ಚರಿ ಮೂಡಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ರಾಮೇಗೌಡ, ದೇವರಾಜೇಗೌಡ ಮತ್ತು ನಾಗರತ್ನ ಎಂಬುವವರ ಮನೆಯ ಕೋಳಿ ಗೂಡುಗಳಿಗೆ ಈ ನಾಗರ ಹಾವುಗಳು ನುಗ್ಗಿದ್ದವು. ಅತಿಯಾದ ಬಿಸಿಲಿನಿಂದ ತಂಪು ಆಶ್ರಯ ಹುಡುಕುತ್ತಾ ಬಂದಿದ್ದ ಹಾವುಗಳು, ಮೊಟ್ಟೆಗಳನ್ನು ನುಂಗುವ ಆಸೆಯಿಂದ ಗೂಡಿನೊಳಗೆ ಸೇರಿಕೊಂಡಿದ್ದವು. ಈ ಪೈಕಿ ಒಂದು ಹಾವು ಬರೋಬ್ಬರಿ 21 ಮೊಟ್ಟೆಗಳನ್ನು ನುಂಗಿತ್ತು! ಮೊಟ್ಟೆಗಳನ್ನು ನುಂಗಿದ ನಂತರ ಹಾವುಗಳು ಭಾರದಿಂದಾಗಿ ಹೊರಬರಲಾಗದೆ ಗೂಡಿನಲ್ಲೇ ಸಿಲುಕಿಕೊಂಡಿದ್ದವು.

ಹಾವುಗಳನ್ನು ಕಂಡು ಆತಂಕಕ್ಕೊಳಗಾದ ಸ್ಥಳೀಯರು ಕೂಡಲೇ ಬಾಳೆಹೊನ್ನೂರಿನ ಖ್ಯಾತ ಉರಗ ತಜ್ಞ ಆಲ್ಬರ್ಟ್ ಅವರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಆಲ್ಬರ್ಟ್, ಮೂರೂ ನಾಗರ ಹಾವುಗಳನ್ನು ಯಾವುದೇ ಅಪಾಯವಿಲ್ಲದಂತೆ ಸುರಕ್ಷಿತವಾಗಿ ರಕ್ಷಿಸಿದರು. ಬಳಿಕ ಅವುಗಳನ್ನು ಎಲೆಕಲ್ಲು ಸಮೀಪದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ಒಂದೇ ಗ್ರಾಮದ ಮೂರು ಮನೆಗಳಲ್ಲಿ ಏಕಕಾಲಕ್ಕೆ ನಾಗರಹಾವುಗಳು ಕಾಣಿಸಿಕೊಂಡ ಈ ಅಪರೂಪದ ಘಟನೆಯನ್ನು ನೋಡಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

Three cobras found in a chicken coop in Bidde village

Share

Leave a comment

Leave a Reply

Your email address will not be published. Required fields are marked *

Don't Miss

ರೈತರು-ಹೋರಿಗಳಿಗೂ ಅವಿನಾಭಾವ ಸಂಬಂಧ

ಚಿಕ್ಕಮಗಳೂರು:  ರೈತನಿಗೂ ಹಾಗೂ ಹೋರಿಗಳಿಗೂ ಅವಿನಾವಭಾವ ಸಂಬಂಧವಿದೆ. ಜೋಡೆತ್ತಿನ ಓಟದ ಸ್ಪರ್ಧೆ ರೈತರಿಗೆ ಮನರಂಜನೆ ಜೊತೆಗೆ ಕ್ರೀಡಾಸ್ಪೂರ್ತಿ ನೀಡುತ್ತಿದ್ದು ಯುವಜನತೆ ಹೆಚ್ಚು ಗ್ರಾಮೀಣ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಡಿಎ ಮಾಜಿ ಅಧ್ಯಕ್ಷ...

ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪೋಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಕಟ್ಟುವ ಮುಖಾಂತರ...

Related Articles

ಕುವೆಂಪು ಕಲಾಮಂದಿರದ ಕಾಂಪೌಂಡ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ರಾತ್ರಿ 9.30ರ ಸುಮಾರಿಗೆ ಪ್ರಯಾಣಿಕರನ್ನೆಲ್ಲ ಇಳಿಸಿದ ಬಳಿಕ ಬಸ್ ಅನ್ನು...

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು

ಚಿಕ್ಕಮಗಳೂರು: ಪ್ರತಿಯೋಬ್ಬರು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಿ ಪ್ರತಿನಿತ್ಯ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಹಾಗೂ...

ಮೇ 23 ಕ್ಕೆ ಮೂಡಿಗೆರೆಯಲ್ಲಿ ರೈತರಿಗಾಗಿ “ನಮ್ಮ ಭೂಮಿ ನಮ್ಮ ಹಕ್ಕು” ಸಮಾವೇಶ. 

ಕಡೂರು:  ರೈತರ ಪರವಾಗಿ ಇರಬೇಕಾದ ಸರ್ಕಾರ ಅವರ ಬೆನ್ನೆಲುಬನ್ನೇ ಮುರಿಯಲು ಹೊರಟಂತಿದೆ, 2010 ರಿಂದ 2023...

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನೆಡೆದಿರುವ ಚುನಾವಣಾ ಅಕ್ರಮ ದೇಶದ ಇತಿಹಾಸದಲ್ಲಿ ಹಾಗೂ ಭವಿಷ್ಯದಲ್ಲಿ ಹಿಂದೆಂದಿಗೂ...